ಹಾನಗಲ್ಲ: ಹಾನಗಲ್ಲ ನಗರ ಬೆಳೆಯುತ್ತಿದೆ. ಇಲ್ಲಿ ನಾಲ್ಕೈದು ನೂರು ಕುಟುಂಬಗಳು ನಿವೇಶನ ಇಲ್ಲದೇ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿವೆ. ಅಂಥ ಕುಟುಂಬಗಳಿಗೆ ತಮ್ಮ ಅವಧಿ ಮುಗಿಯುವ ಒಳಗೆ ನಿವೇಶನ ದೊರಕಿಸುವ ಸಂಕಲ್ಪ ಮಾಡಿದ್ದಾಗಿ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
24 ಗಂಟೆಗಳ ಕಾಲ ನೀರು ಪೂರೈಸಲು ಧರ್ಮಾ ನದಿಯಿಂದ ಪೈಪ್ಲೈನ್ ಮೂಲಕ ನೀರು ತರುವ ₹36 ಕೋಟಿ ವೆಚ್ಚದ ಕಾಮಗಾರಿ ಚಾಲನೆ ಪಡೆದಿದೆ. ₹15 ಕೋಟಿ ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳು ಮಳೆಯ ಕಾರಣದಿಂದ ವಿಳಂಬವಾಗಿವೆ. ರಸ್ತೆ ಮತ್ತು ಚರಂಡಿ ಕಾಮಗಾರಿಗೆ ₹7.60 ಕೋಟಿ ಬಿಡುಗಡೆ ಮಾಡಲಾಗಿದೆ ಎಂದರು.
ಪುರಸಭೆ ಅಧ್ಯಕ್ಷೆ ರಾಧಿಕಾ ದೇಶಪಾಂಡೆ ಮಾತನಾಡಿ, ಕೆಲವು ತಾಂತ್ರಿಕ ಕಾರಣಗಳಿಂದ ಹಲವು ಅಭಿವೃದ್ಧಿ ಕಾಮಗಾರಿಗಳು ಚಾಲನೆ ಪಡೆದಿಲ್ಲ. ಶೀಘ್ರ ಚಾಲನೆ ಪಡೆಯಲಿವೆ ಎಂದರು.ತಹಸೀಲ್ದಾರ್ ರೇಣುಕಾ ಎಸ್., ಪುರಸಭೆ ಉಪಾಧ್ಯಕ್ಷೆ ವೀಣಾ ಗುಡಿ, ಮಾಜಿ ಅಧ್ಯಕ್ಷರಾದ ಖುರ್ಷಿದ್ ಹುಲ್ಲತ್ತಿ, ನಾಗಪ್ಪ ಸವದತ್ತಿ, ಅಹ್ಮದ್ಬಾಷಾ ಪೀರಜಾದೆ, ಪರಶುರಾಮ ಖಂಡೂನವರ, ಮಮತಾ ಆರೆಗೊಪ್ಪ, ಮಾಜಿ ಉಪಾಧ್ಯಕ್ಷ ಮಹೇಶ ಪವಾಡಿ, ಶಂಶಿಯಾ ಬಾಳೂರ, ಸದಸ್ಯರಾದ ವಿರೂಪಾಕ್ಷಪ್ಪ ಕಡಬಗೇರಿ, ಹಸೀನಾಬಾನು ನಾಯ್ಕ, ಸುರೇಶ ನಾಗಣ್ಣನವರ, ಗೌಸ್ಮೋದೀನ ತಂಡೂರ, ಮೇಕಾಜಿ ಕಲಾಲ, ಅಬ್ದುಲ್ಗನಿ ಪಾಳಾ, ಆಶ್ರಯ ಸಮಿತಿ ಸದಸ್ಯರಾದ ಮೇಘನಾ ಸುಲಾಖೆ, ಮಾಲತೇಶ ಕಾಳೇರ, ನಿಯಾಜ್ ಸರ್ವಿಕೇರಿ, ವಿನಾಯಕ ಬಂಕನಾಳ, ರವೀಂದ್ರ ದೇಶಪಾಂಡೆ, ರಾಜೂ ಗುಡಿ, ಉಮೇಶ ಮಾಳಗಿ, ಮರ್ದಾನಸಾಬ ಬಡಗಿ, ಟಾಕನಗೌಡ ಪಾಟೀಲ, ಸಂತೋಷ ಸುಣಗಾರ, ಆದರ್ಶ ಶೆಟ್ಟಿ, ಬಾಬಾಜಾನ ಕೊಂಡವಾಡೆ, ಮುಖ್ಯಾಧಿಕಾರಿ ಜಗದೀಶ ಇದ್ದರು. ಶಿವಾನಂದ ಕ್ಯಾಲಕೊಂಡ ಕಾರ್ಯಕ್ರಮ ನಿರೂಪಿಸಿದರು.