ಮಾಗಡಿ: ತಾಲೂಕಿನ ಸಮಗ್ರ ಅಬೀವೃದ್ಧಿಗೆ ಬದ್ಧರಾಗಿದ್ದು ಹಲವು ಯೋಜನೆಗಳಿಗೆ ಶೀಘ್ರದಲ್ಲೆ ಚಾಲನೆ ನೀಡಲಾಗುತ್ತದ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.
ನುಡಿದಂತೆ ಅಭಿವೃದ್ಧಿ ಮಾಡಿ ತೋರಿಸುವೆ:
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನುಡಿದಂತೆ ಅಭಿವೃದ್ಧಿ ಮಾಡಿ ಸಾರ್ವಜನಿಕರಿಗೆ ಅರ್ಪಿಸುತ್ತೇವೆ. ಪಟ್ಟಣದ ಜೂನಿಯರ್ ಕಾಲೇಜು ಕ್ರೀಡಾಂಗಣ ₹7 ಕೋಟಿ ಹಾಗೂ ಕುದುರಿನಲ್ಲೂ ₹4 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ಅಭಿವೃದ್ಧಿ ಮಾಡಲಾಗುತ್ತದೆ. ಒಂದು ಸಾವಿರ ಮಕ್ಕಳು ಕೂರುವ ಆಡಿಟೋರಿಯಂ ನಿರ್ಮಾಣ ₹ 16 ಕೋಟಿ ವೆಚ್ಚದಲ್ಲಿ ಜೂನಿಯರ್ ಕಾಲೇಜು ಬಳಿ ನಿರ್ಮಾಣ ಮಾಡಲಾಗುತ್ತದೆ. ₹ 5 ಕೋಟಿ ವೆಚ್ಚದಲ್ಲಿ ಶಿಕ್ಷಕರ ಭವನ, ಹೊಸ ಬಿಇಒ ಕಚೇರಿ, ಅಂಬೇಡ್ಕರ್ ಭವನ ನಿರ್ಮಿಸಲಾಗುವುದು ಎಂದರು.ಮುಂದಿನ ತಿಂಗಳು ಶ್ರೀರಂಗ ಏತ ನೀರಾವರಿ ಯೋಜನೆಗೆ ಚಾಲನೆ, ಸತ್ತೆಗಾಲದಿಂದ ವೈಜಿಗುಡ್ಡ ಮತ್ತು ಮಂಚನಬೆಲೆ ಜಲಾಶಯಕ್ಕೆ ಕಾವೇರಿ ನೀರು ತುಂಬಿಸುವ ಯೋಜನೆ ಅನುಷ್ಠಾನದಲ್ಲಿ ಇದ್ದು ಎತ್ತಿನ ಹೊಳೆ ಮೂಲಕ ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ನೀರು ತುಂಬಿಸಿ ಮಂಚನಬೆಲೆ ಜಲಾಶಯಕ್ಕೂ ನೀರು ತರುತ್ತಿದ್ದು ಪಟ್ಟಣದ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ವಿವರಿಸಿದರು.
ಉತ್ತಮ ಪತ ಸಂಚಲನ ನಡೆಸಿದ ಶಾಲಾ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ಹಾಗೂ ಮೊಬೈಲ್ ಬಿಡಿ ಪುಸ್ತಕ ಹಿಡಿ ಕಾರ್ಯಕ್ರಮದ ರೂವಾರಿ ಶಿಕ್ಷಕ ಚಿಕ್ಕವೀರಯ್ಯನವರಿಗೆ ತಾಲೂಕು ಆಡಳಿತ ವತಿಯಿಂದ ಸ್ವತಂತ್ರೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ತಹಸೀಲ್ದಾರ್ ಶರತ್ ಕುಮಾರ್ ನೆರವೇರಿಸಿದರು. ಪುರಸಭಾಧ್ಯಕ್ಷ ರಮ್ಯಾ ನರಸಿಂಹಮೂರ್ತಿ, ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ್, ಸದಸ್ಯರಾದ ರಹಮತ್, ಹೇಮಲತಾ, ಭಾಗ್ಯಮ್ಮ, ಅಶ್ವಥ್, ಅನಿಲ್ ಕುಮಾರ್, ಬಿಇಒ ಚಂದ್ರಶೇಖರ್, ಇಒ ಜೈಪಾಲ್, ಕಾಸಪ ಅಧ್ಯಕ್ಷ ತಿ.ನಾ.ಪದ್ಮನಾಭ್, ಪೊಲೀಸ್ ಇನ್ಸ್ಪೆಕ್ಟರ್ ಗಿರಿರಾಜ್, ಟಿಎಪಿಸಿಎಂಎಸ್ ಅಧ್ಯಕ್ ಶಿವಪ್ರಸಾದ್, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಜಯರಾಂ ಇತರರು ಭಾಗವಹಿಸಿದ್ದರು.