ಕನ್ನಡಪ್ರಭ ವಾರ್ತೆ ಹೊಸಕೋಟೆ
ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಹಯೋಗದಲ್ಲಿ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಆಗುವುದಕ್ಕೂ ಮುನ್ನ ಸರ್ಕಾರಿ ನೌಕರನಾಗಿ ಕಾರ್ಯ ನಿರ್ವಹಿಸಿ, ನೌಕರರ ಸಂಘದ ಸದಸ್ಯನಾಗಿ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದೇನೆ. ನೌಕರರ ವಿವಿಧ ಬೇಡಿಕೆಗಳಾದ ೭ನೇ ವೇತನ ಆಯೋಗ, ರಾಷ್ಟ್ರೀಯ ಪಿಂಚಣಿ ಯೋಜನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೌಕರರಿಗೆ ನಗರ ಎಚ್.ಆರ್ ಭತ್ಯೆ ಸೇರಿ ವಿವಿಧ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದು ನಿಮ್ಮ ಪರ ಕೆಲಸ ಮಾಡುತ್ತೇನೆ ಎಂದು ಹೇಳಿದರು.ವಿಧಾನ ಪರಿಷತ್ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಜಿಲ್ಲೆಯ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿದ್ದೆ, ಜಿಲ್ಲೆಯ ನಿರುದ್ಯೋಗಿಗಳು ನಮ್ಮ ಕಚೇರಿಗೆ ಬಂದು ಉದ್ಯೋಗದ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು. ಎರಡನೇಯದಾಗಿ ಸರ್ಕಾರಿ ನೌಕರರನ್ನು ಒಳಗೊಂಡ ಗೃಹ ನಿರ್ಮಾಣ ಸಂಘ ರಚಿಸಿ ವಸತಿ ಯೋಜನೆಯಡಿ ಮನೆ ನಿರ್ಮಿಸಿ ಕೊಡಲಾಗುವುದು ಎಂದು ಕ್ರೀಡಾಕೂಟದಲ್ಲಿ ಭಾಗಿಯಾದ ಎಲ್ಲರಿಗೂ ಶುಭ ಹಾರೈಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಿ ನೌಕರರು ಸಾಕಷ್ಟು ಸಮಯ ಒತ್ತಡದಲ್ಲಿ ಕೆಲಸ ಮಾಡುತ್ತಾರೆ. ಕೆಲಸದ ಜೊತೆಗೆ ಯೋಗ ಮತ್ತು ಕ್ರೀಡೆಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢ ರಾಗಬಹುದು ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಡಾ.ಕೆ.ಎನ್ ಅನುರಾಧ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಟಿ.ಜಯಲಕ್ಷ್ಮೀ, ಹೊಸಕೋಟೆ ತಾಲೂಕು ತಹಸೀಲ್ದಾರ್ ಎಂ.ವಿಜಯಕುಮಾರ್, ಜಿಲ್ಲಾಮಟ್ಟದ ಅಧಿಕಾರಿಗಳು, ನೌಕರರ ಸಂಘದ ಜಿಲ್ಲಾಧ್ಯಕ್ಷ ಎಚ್.ಬಾಲಕೃಷ್ಣ , ಜಿಲ್ಲಾ ಗೌರವಾಧ್ಯಕ್ಷ ಮುನಿಶಾಮಪ್ಪ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷೆ ಲಕ್ಷ್ಮೀ ನರಸಿಂಹಯ್ಯ ಎನ್, ನೆಲಮಂಗಲ ತಾಲೂಕು ಅದ್ಯಕ್ಷ ವಾಸುದೇವ ಮೂರ್ತಿ, ಹಿರಿಯ ಉಪಾಧ್ಯಕ್ಷ ರವಿಶಂಕರ್, ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.