ಕ್ಷೇತ್ರದ ನಾಗರಿಕರಿಗೆ ಅವಶ್ಯಕ ಸೌಲಭ್ಯ ಒದಗಿಸಲು ಬದ್ಧ: ಶಾಸಕ ಮಹೇಶ ಟೆಂಗಿನಕಾಯಿ

KannadaprabhaNewsNetwork |  
Published : Dec 10, 2025, 01:30 AM IST
ಹುಬ್ಬಳ್ಳಿ ಉಣಕಲ್ ಅಚ್ಚಮ್ಮ ಕಾಲನಿಯಲ್ಲಿ ಈಚೆಗೆ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭೂಮಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಪಾಲಿಕೆ ಸದಸ್ಯರ ಆಸಕ್ತಿ ಮೇರೆಗೆ ವಾರ್ಡಿನಲ್ಲಿ ಒಳಚರಂಡಿ, ಮುಖ್ಯ ರಸ್ತೆಗಳ ದುರಸ್ತಿ, ಪ್ರತಿ ಕಾಲನಿಗೊಂದು ಸಮುದಾಯ ಭವನ ನಿರ್ಮಾಣಕ್ಕಾಗಿ ಮನವಿ ಮಾಡಲಾಗಿತ್ತು. ಅದರಂತೆ ಈಗ ಅಚ್ಚಮ್ಮನ ಕಾಲನಿಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ.

ಹುಬ್ಬಳ್ಳಿ:

ಸೆಂಟ್ರಲ್‌ ಮತಕ್ಷೇತ್ರದ ನಾಗರಿಕರಿಗೆ ಅವಶ್ಯಕ ಸೌಲಭ್ಯ ಒದಗಿಸುವ ಮೂಲಕ ಮಾದರಿ ಕ್ಷೇತ್ರವನ್ನಾಗಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಇಲ್ಲಿನ ಉಣಕಲ್ ಅಚ್ಚಮ್ಮ ಕಾಲನಿಯಲ್ಲಿ ಮಹಾನಗರ ಪಾಲಿಕೆ ಅನುದಾನದಡಿ ಸಮುದಾಯ ಭವನ ನಿರ್ಮಾಣದ ಭೂಮಿಪೂಜೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಪಾಲಿಕೆ ಸದಸ್ಯರ ಆಸಕ್ತಿ ಮೇರೆಗೆ ವಾರ್ಡಿನಲ್ಲಿ ಒಳಚರಂಡಿ, ಮುಖ್ಯ ರಸ್ತೆಗಳ ದುರಸ್ತಿ, ಪ್ರತಿ ಕಾಲನಿಗೊಂದು ಸಮುದಾಯ ಭವನ ನಿರ್ಮಾಣಕ್ಕಾಗಿ ಮನವಿ ಮಾಡಲಾಗಿತ್ತು. ಅದರಂತೆ ಈಗ ಅಚ್ಚಮ್ಮನ ಕಾಲನಿಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ. ಆದಷ್ಟು ಬೇಗನೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ನೀಡಲಾಗುವುದು. ಅದೇ ರೀತಿ ಸೆಂಟ್ರಲ್ ಕ್ಷೇತ್ರವು ರಾಜ್ಯದಲ್ಲಿಯೇ ಮಾದರಿಯಾಗಿರುವಂತೆ ತಾವು ಶ್ರಮಿಸುತ್ತಿರುವುದಾಗಿ ತಿಳಿಸಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಪ್ರಾಸ್ತಾವಿಕ ಮಾತನಾಡಿದರು. ಕಳೆದ ಸಾಲಿನಲ್ಲಿ ಸಿಲಿಂಡರ್‌ ಸ್ಫೋಟದಲ್ಲಿ ಸಾವನ್ನಪ್ಪಿದ 8 ಅಯ್ಯಪ್ಪ ಸ್ವಾಮಿಗಳ ಮಾಲಾಧಾರಿಗಳ ಪೈಕಿ ನಾಲ್ಕು ಕುಟುಂಬಕ್ಕೆ ಮಹಾನಗರ ಪಾಲಿಕೆಯಿಂದ ತಲಾ ₹ 1 ಲಕ್ಷ ಪರಿಹಾರದ ಚೆಕ್‌ನ್ನು ಶಾಸಕ ಮಹೇಶ ಟೆಂಗಿನಕಾಯಿ ವಿತರಿಸಿದರು. ಇನ್ನುಳಿದ ಉಳಿದ ನಾಲ್ಕು ಮೃತರ ಸಂಬಂಧಿಕರು ಸಂಬಂಧಪಟ್ಟ ದಾಖಲೆ ಒದಗಿಸಿದ ತಕ್ಷಣ ನೀಡಲಾಗುವದು ಎಂದು ವಲಯ ಆಯುಕ್ತ ಕೆಂಭಾವಿ ಹೇಳಿದರು.

ಈ ವೇಳೆ ಸೋಮು ಪಾಟೀಲ, ಪರಶುರಾಮ ಹೊಂಬಾಳ, ಕೆ.ಎಸ್. ಕಾಮಟಿ, ರಾಯಣಗೌಡ ಭೀಮನಗೌಡ್ರ, ಶಂಕರ ಚಿಲ್ಲನ್ನವರ, ವಾರ್ಡ್ ಅಧ್ಯಕ್ಷ ಬಸವರಾಜ ಮಾಡಳ್ಳಿ, ಎಸ್.ಐ. ನೇಕಾರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಿನೇದಿನೇ ಏರುತ್ತಿರುವ ಚಿನ್ನದ ದರ ಇಳಿಯಲಿ ಎಂದು ಭಕ್ತನ ಹರಕೆ !
₹70 ಲಕ್ಷ ವಿದ್ಯುತ್‌ ಬಿಲ್‌ ಬಾಕಿ: ಸಿದ್ಧಗಂಗಾ ಮಠಕ್ಕೆ ನೀರು ಬಂದ್‌!