ಶಾಲೆಗಳಿಗೆ ಸೌಕರ್ಯ ಒದಗಿಸಲು ಬದ್ಧ: ಗೀತಾ

KannadaprabhaNewsNetwork |  
Published : Dec 05, 2025, 01:00 AM IST

ಸಾರಾಂಶ

ಮೂರು ಗ್ರಾಮಗಳ ಶಾಲೆಗಳ ಮಕ್ಕಳು ತಮ್ಮ ಶಾಲೆಗಳ ಕುಂದುಕೊರತೆಗಳ ಬಗ್ಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದರು

ಕೊಪ್ಪಳ: ಜಿಲ್ಲೆಯ ಬೇವಿನಹಳ್ಳಿ ಗ್ರಾಪಂ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಸರ್ಕಾರದಿಂದ ಮೂಲಭೂತ ಸೌಕರ್ಯ ಒದಗಿಸಲು ಮುಂದಿನ ಬಜೆಟ್ ನಲ್ಲಿ ನೀಲನಕ್ಷೆ ತಯಾರಿಸಿ ಹಂತ ಹಂತವಾಗಿ ಸೌಲಭ್ಯ ಒದಗಿಸಲಾಗುವುದು ಎಂದು ಗ್ರಾಪಂ ಅಭಿವೃದ್ಧಿ ಅಧಿಕಾರಿ ಗೀತಾ ಹೇಳಿದರು.

ಜಿಲ್ಲೆಯ ಶಹಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಹಕ್ಕುಗಳ ಗ್ರಾಮಸಭೆಯನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಬೇವಿನಹಳ್ಳಿ, ಲಿಂಗದಹಳ್ಳಿ ಮತ್ತು ಶಹಪುರ ಗ್ರಾಮಗಳ ಸರ್ಕಾರಿ ಶಾಲೆಗಳ ಮೈದಾನ,ಕಾಂಪೌಂಡ್, ವಿದ್ಯುತ್, ಕುಡಿಯುವ ನೀರು, ಶೌಚಾಲಯ, ಕಂಪ್ಯೂಟರ್ ದುರಸ್ಥಿ, ಶಾಲಾ ಕಟ್ಟಡಗಳಿಗೆ ಬಣ್ಣ ಹಚ್ಚುವುದು ಸೇರಿದಂತೆ ಇತರೆ ಸೌಲಭ್ಯ ಒದಗಿಸಲು ಯೋಜನೆ ರೂಪಿಸುವುದಾಗಿ ಹೇಳಿದರು.

ಮೂರು ಗ್ರಾಮಗಳ ಶಾಲೆಗಳ ಮಕ್ಕಳು ತಮ್ಮ ಶಾಲೆಗಳ ಕುಂದುಕೊರತೆಗಳ ಬಗ್ಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದರು. ಮಕ್ಕಳೊಂದಿಗೆ ಸಂವಹನ ನಡೆಸಿದ ಗೀತಾ ಅವರು ಮಕ್ಕಳ ಆಸೆಗಳನ್ನು ಈಡೇರಿಸಲು ತಮ್ಮ ಗ್ರಾಪಂದಿಂದ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಗ್ರಾಪಂ ಸದಸ್ಯರಾದ ಹಾಲಪ್ಪ ತೋಟದ ಮಕ್ಕಳ ಹಕ್ಕುಗಳ ಸಭೆ, ಸಾಮಾಜಿಕ ಲೆಕ್ಕ ಪರಿಶೋಧನೆ ಸಮಗ್ರ ಶಿಕ್ಷಣದ ಜಂಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ಹುಲ್ಲೇಶ್ ಸಿಂದೋಗಿ, ಕೊಪ್ಪಳ ತಾಪಂ ಸಾಮಾಜಿಕ ಲೆಕ್ಕ ಪರಿಶೋಧನೆಯ ಸಂಯೋಜಕ ಈರಣ್ಣ ಸಾಲಮನಿ, ರೀಡ್ಸ್ ಸಂಸ್ಥೆಯ ಮಂಜುನಾಥ, ಜಿಲ್ಲಾ ಮಕ್ಕಳ ಘಟಕದ ರವಿ ಬಡಿಗೇರ, ಎ.ಎನ್.ಎಂ. ಮಲ್ಲಮ್ಮ, ಎಸ್ ಡಿಎಂಸಿ ಉಪಾಧ್ಯಕ್ಷೆ ರೇವತಿ ಗೋನಾಳ, ಪಿ.ಎಲ್.ಡಿ. ಬ್ಯಾಂಕಿನ ನಿರ್ದೇಶಕಿ ಲಕ್ಷ್ಮೀದೇವಿ ಚೌಧರಿ, ಗ್ರಾಪಂ ಸದಸ್ಯ ಮುರಳಿಧರ, ಕಾರ್ಯದರ್ಶಿ ಶಿವಾನಂದ ಪಂಥರ, ಶಾಲಾ ಮುಖ್ಯೋಪಾಧ್ಯಾಯ ದೇವರಾಜ ಎ.ಎಸ್.ಸೇರಿದಂತೆ ಗ್ರಾಮಸ್ಥರು, ಪೋಷಕರು ಮತ್ತು ಶಾಲಾ ಮಕ್ಕಳು ಇದ್ದು ಸಭೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಚರ್ಚಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೌಕಾ ದಿನಾಚರಣೆಯಲ್ಲಿ ರಾಜ್ಯಪಾಲರು ಭಾಗಿ
ಡಿಸೆಂಬರ್‌ 10ರಿಂದ ಹುಕ್ಕೇರಿಮಠದ ಶ್ರೀಗಳಿಂದ ಹಾವೇರಿಯಲ್ಲಿ ಜನಜಾಗೃತಿ ಪಾದಯಾತ್ರೆ