ಹುಬ್ಬಳ್ಳಿ:
ಧಾರವಾಡ ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಈಚೆಗೆ ಜರುಗಿದ ಅಧ್ಯಯನ ಪೀಠದ ಸಲಹಾ ಸಮಿತಿ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
2006ರಲ್ಲಿ ಡಾ. ಶಿವಾನಂದ ಗಾಳಿ ಸಂಯೋಜಕರಾಗಿದ್ದಾಗ ವಿವಿ 2 ಎಕರೆ ಜಾಗವನ್ನು ಪೀಠಕ್ಕೆ ಕಟ್ಟಡ ನಿರ್ಮಿಸಲು ಅವಕಾಶ ನೀಡಿದ್ದು, ಈ ವರೆಗೂ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಕ್ರಮ ಜರುಗಿಸಿಲ್ಲ. ಆದ್ದರಿಂದ ಸರ್ಕಾರದಿಂದ ವಿಶೇಷ ಧನಸಹಾಯ ಪಡೆದುಕೊಳ್ಳಲು ನಾನು ಸ್ವತಃ ಆಸಕ್ತಿ ವಹಿಸುವುದಾಗಿ ತಿಳಿಸಿ, ವಿಶೇಷ ನಿಯೋಗ ರಚನೆ ಮಾಡಲು ಒಪ್ಪಿಗೆ ನೀಡಿದರು.ಪದವೀಧರ ವಿದ್ಯಾರ್ಥಿಗಳಿಗೆ ಪೀಠದ ಮುಖೇನ ಜೈನಾಲಜಿಯಲ್ಲಿ ಸ್ನಾತಕೋತ್ತರ ಡಿಪ್ಲೋಮಾ ಮಾಡಲು ವಿವಿಯಲ್ಲಿ ಅವಕಾಶಗಳಿದ್ದು, ವಿದ್ಯಾರ್ಥಿಗಳಲ್ಲಿ ಆಸಕ್ತಿ ಹುಟ್ಟುವಂತೆ ಪ್ರೇರೇಪಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಸಾರ ಮಾಡುವಂತೆ ಕರೆ ನೀಡಿದರು.
ಜೈನ ಅಧ್ಯಯನ ಪೀಠದ ಸಂಯೋಜಕ ಡಾ. ಜಿನದತ್ತ ಹಡಗಲಿ ಅವರು ಪೀಠದ ಹಣಕಾಸಿನ ವಿವರ ನೀಡಿದರು. ಸಭೆಯಲ್ಲಿ ಸಲಹಾ ಸಮಿತಿ ಸದಸ್ಯ ಹಾಗೂ ಜೆ.ಎಸ್.ಎಸ್. ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತಪ್ರಸಾದ, ಶಾಂತರಾಜ ಮಲ್ಲಸಮುದ್ರ, ಧನಪಾಲ ಮುನ್ನೊಳ್ಳಿ, ಡಾ. ಆರ್.ಎ. ಬಾಳಿಕಾಯಿ, ಧರಣೇಂದ್ರ ಜವಳಿ, ಶಾಂತಿನಾಥ ಹೊಟಪೇಟಿ, ವಿವಿ ಹಣಕಾಸು ಅಧಿಕಾರಿ ಪ್ರದೀಪ, ಮೌಲ್ಯಮಾಪನ ಕುಲಸಚಿವ ಡಾ. ನಿಜಲಿಂಗಪ್ಪ ಮಟ್ಟಿಹಾಳ ಹಾಜರಿದ್ದರು. ಸಂಯೋಜಕ ಡಾ. ಜಿನದತ್ತ ಹಡಗಲಿ ವಂದಿಸಿದರು.