ಪ್ರಜಾ ಸೇವಾ ಆಂದೋಲನ ಯಶಸ್ಸಿಗೆ ಬದ್ಧ: ತಹಶೀಲ್ದಾರ್

KannadaprabhaNewsNetwork |  
Published : Sep 18, 2026, 02:30 AM IST
12 ರೋಣ 2.  ಹೋಬಳಿ ಮಟ್ಟದಲ್ಲಿ ಜರುಗಿದ ಪ್ರಜಾ ಸೇವಾ ಆಂದೋಲನದಲ್ಲಿ ತಹಶೀಲ್ದಾರ್ ನಾಗರಾಜ.ಕೆ. ಮಾತನಾಡಿದರು. | Kannada Prabha

ಸಾರಾಂಶ

ಸಾರ್ವಜನಿಕರ ಬೇಡಿಕೆ, ದೂರುಗಳಿಗೆ ಸ್ಪಂದಿಸಲು ರಾಜ್ಯ ಸರ್ಕಾರ ಪ್ರಜಾ ಸೇವಾ ಆಂದೋಲನವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲು ಯೋಜಿಸಿದ್ದು, ರೋಣ ತಾಲೂಕು ಆಡಳಿತ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಯಶಸ್ವಿಗೊಳಿಸಲು ಬದ್ಧವಾಗಿದೆ.

ಹೋಬಳಿ ಮಟ್ಟದಲ್ಲಿ ಜರುಗಿದ ಪ್ರಜಾ ಸೇವಾ ಆಂದೋಲನದಲ್ಲಿ ನಾಗರಾಜ ಕೆ.

ಕನ್ನಡಪ್ರಭ ವಾರ್ತೆ ರೋಣ

ಸಾರ್ವಜನಿಕರ ಬೇಡಿಕೆ, ದೂರುಗಳಿಗೆ ಸ್ಪಂದಿಸಲು ರಾಜ್ಯ ಸರ್ಕಾರ ಪ್ರಜಾ ಸೇವಾ ಆಂದೋಲನವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲು ಯೋಜಿಸಿದ್ದು, ರೋಣ ತಾಲೂಕು ಆಡಳಿತ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಯಶಸ್ವಿಗೊಳಿಸಲು ಬದ್ಧವಾಗಿದೆ ಎಂದು ರೋಣ ತಹಶೀಲ್ದಾರ್ ನಾಗರಾಜ ಕೆ. ಹೇಳಿದರು.

ತಾಲೂಕಿನ ಕೊತಬಾಳ ಗ್ರಾಮದ ಅಂಕಲಗಿ ಅಡವಿಸಿದ್ದೇಶ್ವರ ಮಠದ ಆವರಣದಲ್ಲಿ ತಾಲೂಕು ಆಡಳಿತ, ತಾಪಂ, ಗ್ರಾಪಂ ಕೊತಬಾಳ ಹಾಗೂ ಜಿಪಂ ಎಂಜಿನಿಯರಿಂಗ್ ಉಪ ವಿಭಾಗಗಳ ಸಹಯೋಗದಲ್ಲಿ ನಡೆದ ಹೋಬಳಿ ಮಟ್ಟದಲ್ಲಿ ಜರುಗಿದ ಪ್ರಜಾ ಸೇವಾ ಆಂದೋಲನದಲ್ಲಿ ಮಾತನಾಡಿದರು.

ಸಾರ್ವಜನಿಕರಿಗೆ, ರೈತರ ಸಮಸ್ಯೆಗಳಿಗೆ ಸೂಕ್ತ ಪರಿಹಾರ, ತ್ವರಿತಗತಿಯಲ್ಲಿ ಸೇಗೆ ಕಲ್ಪಿಸುವ ಗುರಿಯೊಂದಿಗೆ ರಾಜ್ಯ ಸರ್ಕಾರ ಪ್ರಜಾ ಸೇವಾ ಆಂದೋಲನವನ್ನು ಹಮ್ಮಿಕೊಂಡಿದ್ದು ತಾಲೂಕಿನ ಎಲ್ಲಾ ಇಲಾಖೆಗಳ ಪ್ರಮುಖ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು ಅವರ ಇಲಾಖೆಗಳಿಗೆ ಸಂಬಂಧಿಸಿದ ದೂರುಗಳಿಗೆ ಸ್ಪಂದಿಸಬೇಕು ಎಂದು ತಿಳಿಸಿದರು.

ಬೆಳೆ ವಿಮೆ, ರೇಶನ್ ಕಾರ್ಡ ಸಮಸ್ಯೆ, ಜಮೀನನ್ನು ಅಳತೆ, ರಸ್ತೆ ಸಮಸ್ಯೆ, ಮಾಸಾಶನ ಸೇರಿದಂತೆ ವಿವಿದ ಬೇಡಿಕೆಗಳ ಕುರೊತು ಸಾರ್ವಜನಿಕರು ಅರ್ಜಿ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಇಒ ಚಂದ್ರಶೇಖರ ಕಂದಕೂರ, ಲೋಕೋಪಯೋಗಿ ಇಲಾಖೆಯ ಎಇಇ ಗುರಣಗೌಡ ಪಾಟೀಲ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಗಿರೀಶ ಹೊಸೂರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಮಾಳೇದ, ಅಕ್ಷರ ದಾಸೋಹ ಅಧಿಕಾರಿ ಆರ್‌.ಎಲ್. ನಾಯ್ಕರ, ತಾಪಂ ಯೋಜನಾಧಿಕಾರಿ ಸಿ.ಎಸ್. ನೀಲಗುಂದ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗೀತಾ ಆಲೂರ, ಗ್ರಾಮ ಪಂ‌ಚಾಯಿತಿ ಪಿಡಿಒ ಬೋದ್ಲೇಖಾನ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉತ್ತಮ ಪೋಷಣೆಯೇ ಬಾಲ್ಯದ ಅಡಿಪಾಯ: ಸುಮಂಗಲ
ಸಂಸ್ಕಾರಯುತ ಸಮಾಜ ಕಟ್ಟಲು ಗಣೇಶೋತ್ಸವ ಪ್ರೇರಣೆ: ಕಾಮತ್