ಕನ್ನಡ ಭಾಷೆ ಉಳಿವಿಗೆ ಕಂಕಣ ಬದ್ಧರಾಗಿ

KannadaprabhaNewsNetwork |  
Published : Nov 07, 2025, 02:15 AM IST
9ದದದ | Kannada Prabha

ಸಾರಾಂಶ

ಕನ್ನಡ ನೆಲ, ಜಲ, ನಾಡು, ಭಾಷೆ ಉಳಿವಿಗಾಗಿ ಪ್ರತಿಯೊಬ್ಬರೂ ಕಂಕಣಬದ್ಧರಾಗಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ತುಮಕೂರುಕನ್ನಡ ನೆಲ, ಜಲ, ನಾಡು, ಭಾಷೆ ಉಳಿವಿಗಾಗಿ ಪ್ರತಿಯೊಬ್ಬರೂ ಕಂಕಣಬದ್ಧರಾಗಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಕರೆ ನೀಡಿದರು. ನಗರದ ಎಸ್.ಎಸ್.ಪುರಂ ಮುಖ್ಯರಸ್ತೆಯಲ್ಲಿರುವ ಹಳ್ಳಿ ಮರದ ಸರ್ಕಲ್‌ನಲ್ಲಿ ಮಯೂರ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ನಾಡಧ್ವಜಾರೋಹಣ ನೆರವೇರಿಸಿ, ಕನ್ನಡಾಂಬೆ ಭುವನೇಶ್ವರಿ ತಾಯಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗೆ ಸರ್ಕಾರಗಳ ಜತೆಗೆ ನಾಡಿನಲ್ಲಿರುವ ಪ್ರತಿಯೊಬ್ಬರೂ ಮುಂದಾಗಬೇಕು ಎಂದರು.ಕನ್ನಡ ನೆಲ, ಜಲ, ಭಾಷೆಯ ಬಗ್ಗೆ ಪ್ರತಿಯೊಬ್ಬ ಕನ್ನಡಿಗರು ಅಭಿಮಾನ ಬೆಳೆಸಿಕೊಳ್ಳಬೇಕು. ಈ ಮೂಲಕ ನಮ್ಮ ನೆಲ, ಜಲ ಹಾಗೂ ಭಾಷೆಗೆ ಧಕ್ಕೆ ಬಂದಾಗ ಹೋರಾಟ ನಡೆಸುವ ಮನೋಭಾವ ಹೊಂದಬೇಕು. ಕನ್ನಡ ರಾಜ್ಯೋತ್ಸವ ಆಚರಣೆ ಕೇವಲ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗಬಾರದು, ಬದಲಿಗೆ ನಿತ್ಯೋತ್ಸವವಾಗಬೇಕು ಎಂದರು. ಸಾಮಾಜಿಕ ಕಾರ್ಯಕ್ರಮದ ಮೂಲಕ ರಾಜ್ಯೋತ್ಸವ ಆಚರಣೆ ಮಾಡುತ್ತಿರುವುದು ಇತರರಿಗೆ ಮಾದರಿಯಾಗಿದೆ ಎಂದ ಅವರು, ಮಯೂರ ವೇದಿಕೆಯ ಕನ್ನಡಾಭಿಮಾನ ಹೀಗೆ ಮುಂದುವರೆಯಲಿ, ನಮ್ಮ ಮಾತೃಭಾಷೆಯ ಅಭಿವೃದ್ಧಿಗೆ ಶ್ರಮಿಸಲಿ ಎಂದು ಹೇಳಿದರು.

ಮಯೂರು ವೇದಿಕೆಯ ಅಧ್ಯಕ್ಷ ಪಿ. ಸದಾಶಿವಯ್ಯ ಮಾತನಾಡಿ, ಕಳೆದ 20 ವರ್ಷಗಳಿಂದ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ಬಾರಿ ಆರೋಗ್ಯ ಶಿಬಿರವನ್ನು ಸಹ ಏರ್ಪಡಿಸಲಾಗಿದ್ದು, ಬಡವರಿಗೆ ಆರೋಗ್ಯ ಸೇವೆ ಒದಗಿಸುವ ಧ್ಯೇಯವನ್ನು ನಮ್ಮ ವೇದಿಕೆ ಹೊಂದಿದೆ ಎಂದರು. ಇದೇ ಸಂದರ್ಭದಲ್ಲಿ ವೇದಿಕೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು. ಈ ಸಂದರ್ಭದಲ್ಲಿ ಮಯೂರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಎನ್.ಆರ್. ಸ್ವಾಮಿ, ಕಾಂತರಾಜು, ನಗರಸಭೆ ಮಾಜಿ ಸದಸ್ಯ ಕರುಣಾರಾಧ್ಯ, ಜಗದೀಶ್, ಚಂದ್ರಶೇಖರ್, ವಿನಯ್ ಜೈನ್, ರವಿ ಚೆಂಗಾವಿ, ರಾಜಕುಮಾರ ಗುಪ್ತ, ಹೆಬ್ಬೂರು ಶ್ರೀನಿವಾಸಮೂರ್ತಿ, ಸಿದ್ದು, ಬಿಳಿಗೆರೆ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ