ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಂಗಳವಾರ ನಡೆದ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೌಹಾರ್ದತೆಯ ಈ ಸಿನೆಮಾಕ್ಕೆ ಶಶಿರಾಜ್ ರಾವ್ ಕಾವೂರು ಕಥೆ, ಸಂಭಾಷಣೆ ಬರೆದಿದ್ದಾರೆ ಎಂದರು.
ಮಂಗಳೂರು ಬುದ್ಧಿವಂತರ ಊರು ನಿಜ. ಆದರೆ ಕೋಮು ಗಲಭೆ ಮುಂದುವರಿದರೆ ಇಲ್ಲಿ ಬದುಕೇ ಕಷ್ಟವಾಗಬಹುದು. ಯುವ ಜನರ ಭವಿಷ್ಯ ಮಾರಕವಾಗಬಹುದು. ಆದ್ದರಿಂದ ಈಗ ಇರುವ ಗೊಂದಲದ ವಾತಾವರಣ ಸರಿ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ನವೀನ್ ಪಡೀಲ್ ಹೇಳಿದರು.ಓಟಿನ ರಾಜಕೀಯದಿಂದಾಗಿ ಅಮಾಯಕರು ಸಾಯುವುದು ನಿಲ್ಲಬೇಕು ಎಂದು ಹೇಳಿದ ಅವರು, ಹಿಂದು, ಮುಸ್ಲಿಂ, ಕ್ರೈಸ್ತರೆಲ್ಲರೂ ಹೊಂದಾಣಿಕೆಯಿಂದ ಬದುಕಿದರೆ ಯಾವುದೇ ಸಮಸ್ಯೆ ಇಲ್ಲ ಎಂದು ಕಿವಿಮಾತು ಹೇಳಿದರು.
ಪತ್ರಕರ್ತ ಜಗನ್ನಾಥ ಶೆಟ್ಟಿಬಾಳ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್., ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಮಾಜಿ ಅಧ್ಯಕ್ಷ ಅನ್ನು ಮಂಗಳೂರು ಇದ್ದರು. ಪ್ರೆಸ್ ಕ್ಲಬ್ ಕಾರ್ಯದರ್ಶಿ ಪುಷ್ಪರಾಜ್ ಬಿಎನ್ ವಂದಿಸಿದರು, ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ನಿರೂಪಿಸಿದರು.