ಸಮುದಾಯ ಭವನಗಳಿಂದ ಗ್ರಾಮೀಣ ಜನರಿಗೆ ಅನುಕೂಲ

KannadaprabhaNewsNetwork |  
Published : Nov 24, 2025, 03:45 AM IST
ಕೊಪದಟ್ಟಿ ಗ್ರಾಮದಲ್ಲಿ ಸಂಸದರ ನಿಧಿಯಿಂದ ನಿರ್ಮಾಣಗೊಂಡ ಬಸ್ ಪ್ರಯಾಣಿಕರ ತಂಗುದಾಣದ ಉದ್ಗಾಟನೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಮೂಡಲಗಿ ಹಳ್ಳಿಗಳಲ್ಲಿ ನಿರ್ಮಿಸುವ ಸಮುದಾಯ ಭವನಗಳು ಹಬ್ಬ ಹರಿದಿನಗಳು, ಮದುವೆ, ಸೀಮಂತ, ನಾಮಕರಣ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಉಪಯೋಗವಾಗುವ ಮೂಲಕ ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕೆ ಕಾರಣವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಕನ್ನಡಪ್ರಭ ವಾರ್ತೆ ಮೂಡಲಗಿ

ಹಳ್ಳಿಗಳಲ್ಲಿ ನಿರ್ಮಿಸುವ ಸಮುದಾಯ ಭವನಗಳು ಹಬ್ಬ ಹರಿದಿನಗಳು, ಮದುವೆ, ಸೀಮಂತ, ನಾಮಕರಣ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಉಪಯೋಗವಾಗುವ ಮೂಲಕ ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕೆ ಕಾರಣವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಅರಭಾವಿ ವಿಧಾನಸಭಾ ಮತಕ್ಷೇತ್ರದ ಯಾದವಾಡ ಗ್ರಾಮದ ಬಳಿಗಾರ ಒಣಿಯ ಶ್ರೀ ಲಿಂಗ ಬಸವೇಶ್ವರ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ಮಾತನಾಡಿದರು. ಯಾದವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈಗಾಗಲೇ ರಾಜ್ಯಸಭಾ ಸಂಸದರ ನಿಧಿಯಿಂದ ಲಿಂಗ ಬಸವೇಶ್ವರ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ₹ 10 ಲಕ್ಷ ,ಮೈಲಾರಲಿಂಗ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ₹ 10 ಲಕ್ಷ, ಘಟಗಿ ಬಸವೇಶ್ವರ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ₹ 5 ಲಕ್ಷ, ಕೊಪದಟ್ಟಿ ಗ್ರಾಮದ ನಿಂಗಮ್ಮಾದೇವಿ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ₹ 5 ಲಕ್ಷ, ಕೊಪದಟ್ಟಿ ಗ್ರಾಮದಲ್ಲಿ ಬಸ್‌ ಪ್ರಯಾಣಿಕರ ತಂಗುದಾಣ ನಿರ್ಮಾಣಕ್ಕೆ ₹ 5 ಲಕ್ಷ ಒಟ್ಟು ಯಾದವಾಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ₹ 35 ಲಕ್ಷ ಅನುದಾನ ನೀಡಿದ್ದೇನೆ ಎಂದರು.

ಯಾದವಾಡ ಗ್ರಾಮದ ಅಭಿವೃದ್ದಿಯಲ್ಲಿ ನಾನು ಕೂಡಾ ಅಳಿಲು ಸೇವೆ ಸಲ್ಲಿಸುತ್ತಿದ್ದೇನೆ. ಅದೇ ರೀತಿ ಬರುವ ದಿನಗಳಲ್ಲಿ ಯುವಕರ ಅನುಕೂಲಕ್ಕಾಗಿ ಗ್ರಾಮದಲ್ಲಿ ಒಂದು ಓಪನ್‌ ಜಿಮ್ ಸೌಲಭ್ಯ ಒದಗಿಸಿ ಕೊಡಲು ನಾನು ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೊಪದಟ್ಟಿ ಗ್ರಾಮದಲ್ಲಿ ಸಂಸದರ ನಿಧಿಯಿಂದ ನಿರ್ಮಾಣಗೊಂಡ ಬಸ್ ಪ್ರಯಾಣಿಕರ ತಂಗುದಾಣದ ಉದ್ಗಾಟನೆ ನೇರವೇರಿಸಿದರು.

ಶ್ರೀ ಚೌಕೇಶ್ವರ ವಿಶ್ವಾರಾಧ್ಯ ಸ್ವಾಮಿಜಿಗಳು ಸಾನಿಧ್ಯ ವಹಿಸಿದ್ದರು. ಪ್ರಮುಖರಾದ ಶ್ರೀಶೈಲ ಪೂಜೇರಿ, ಬಸವರಾಜ ಹಿಡಕಲ್‌, ಹಣಮಂತ ಹುಚ್ಚರಡ್ಡಿ, ವಿಠ್ಠಲ ಕಲ್ಲಮುಡಿ, ರಾಮನಗೌಡ ಪಾಟೀಲ, ಅಮೀನಸಾಬ ಯಳ್ಳೂರ, ನಿಂಗಪ್ಪ ಅರಿಕೇರಿ, ಈಶ್ವರ ಬಾಗಿ, ರವಿ ಅಮರಾಣಿ, ಪ್ರಕಾಶ ಹಿಡಕಲ್‌, ಬಸಪ್ಪ ಮುದ್ದಾಪೂರ, ಭೀರಪ್ಪ ಪೂಜೇರಿ, ಮುಪ್ಪಯ್ಯ ಹಿರೇಮಠ ಕೊಪದಟ್ಟಿ ಗ್ರಾಪಂ ಸದಸ್ಯ ಗೋವಿಂದ ಉದಪುಡಿ, ಶಿವಲಿಂಗಪ್ಪ ಹುಬ್ಬಳ್ಳಿ, ಬಿ.ಎಚ್.‌ಪಾಟೀಲ, ಶ್ರೀನಿವಾಸ ಸಿದ್ದಾಪೂರ, ಆನಂದ ರೂಗಿ, ಹಣಮಂತ ಮೂಲಿ, ಈಶ್ವರಪ್ಪ ಬಾಗಿ, ವೆಂಕಟೇಶ ದಾಸರ, ಚೇತನ ಹೆಗ್ಗಳಗಿ, ನವಿನ ತಾವಂಶಿ, ಮುದಕಣ್ಣ ಗಾಣಿಗೇರ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು..

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಕ್ಷಗಾನ ಉಳಿವಿಗೆ ಯುವಜನತೆ ಸಕ್ರಿಯ ಪಾತ್ರ ಅಗತ್ಯ: ಡಾ. ಎಚ್‌.ಎಸ್‌. ಬಲ್ಲಾಳ್‌
ಸನ್ಯಾಸತ್ವಕ್ಕೆ ಪರಮ ವೈರಾಗ್ಯವೇ ಮೂಲ: ಸ್ವಾಮಿ ನಿರ್ಭಯಾನಂದ ಸರಸ್ವತಿ