ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ
ಪ್ರತಿ ನಿತ್ಯ ರಾಮಾಯಣ, ಮಹಾಭಾರತ, ಭಗವದ್ಗೀತೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪ್ರತಿನಿತ್ಯ ಪ್ರಾರ್ಥನೆ ಮಾಡಬೇಕು. ವಾರಕ್ಕೊಮ್ಮೆಯಾದರೂ ದೇವಸ್ಥಾನಕ್ಕೆ ಹೋಗಬೇಕು. ಗುರು ಹಿರಿಯರನ್ನು ಗೌರವಿಸಬೇಕು. ವೃದ್ಧಾಪ್ಯದಲ್ಲಿ ಪೋಷಕರನ್ನು ಸಲಹುವ ಕೆಲಸ ಮಾಡಬೇಕು. ಪ್ರಕೃತಿಯನ್ನು ಆರಾಧಿಸುವ ಮತ್ತು ಉಳಿಸುವ ಕೆಲಸ ಮಾಡಬೇಕು ಎಂದು ಜನರಿಗೆ ಕರೆ ನೀಡಿದರು.
ಜೀವನದಲ್ಲಿ ಒಳ್ಳೆಯ ಆಚಾರ, ವಿಚಾರಗಳನ್ನು ಬೆಳೆಸಿಕೊಳ್ಳುವ ಮೂಲಕ ಉತ್ತಮ ಚಿಂತನೆಯನ್ನು ಬೆಳೆಸಿಕೊಳ್ಳಬೇಕು, ಕುಟುಂಬದಲ್ಲಿ ಎಲ್ಲರೂ ಒಟ್ಟಾಗಿ ಊಟ ಮಾಡಬೇಕು. ಇದರಿಂದ ಕುಟುಂಬಗಳು ಗಟ್ಟಿಯಾಗಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.ಬ್ರಹ್ಮಯಜ್ಞ, ದೇವಯಜ್ಞ, ಪಿತೃಯಜ್ಞ, ಭೂತಯಜ್ಞ ಹಾಗೂ ಮಾನಸಿಕ ಯಜ್ಞವನ್ನು ಪಾಲಿಸುವುದರಿಂದ ಕುಟುಂಬಗಳು ಸದೃಢವಾಗಲು ಸಾಧ್ಯವಾಗುತ್ತದೆ. ಮಹಾತ್ಮ ಗಾಂಧೀಜಿಯವರು ಹೇಳಿದಂತೆ ಮನುಷ್ಯನಲ್ಲಿ ಬೌದ್ಧಿಕ, ಶಾರೀರಿಕ ಮಾನಸಿಕ ಬೆಳವಣಿಗೆಗೆ ಶಿಕ್ಷಣ ಪೂರಕವಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜತೆಗೆ ಬದುಕಿನ ಕಲೆಯನ್ನು ಕಲಿಸುವುದು ಅವಶ್ಯಕ ಎಂದು ತಿಳಿಸಿದರು.
ಸಮಾಜದವರು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ರಾಜಕೀಯವಾಗಿಯೂ ಅವಕಾಶಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಿ, ಸಮಾಜವನ್ನು ಮುಖ್ಯವಾಹಿನಿಗೆ ತರಬೇಕು ಎಂದರು.
ಕೇರಳ ಹಿಂದೂ ಸಮಾಜದ ಸಂಚಾಲಕ ಪಿ.ಆರ್. ಅರವಿಂದ ಮಾತನಾಡಿ, ಸಮಾಜದ ಸದಸ್ಯರ ಆಧ್ಯಾತ್ಮಿಕ ಅಭಿವೃದ್ಧಿಗಾಗಿ ರಾಮಾಯಣ ಪಠಣ, ಭಜನೆ,ಸಂಧ್ಯಾನಾಮಗಳನ್ನು ಕಲಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ತಿಳಿಸಿದರು.ಕೇರಳ ಹಿಂದೂ ಸಮಾಜದ ಮುಖ್ಯಸ್ಥ ವಕೀಲ ಕೆ.ಪಿ. ಸುರೇಶ್ ಕುಮಾರ್ ಮಾತನಾಡಿ, ಸನಾತನ ಧರ್ಮವು ದೇವರ ಆರಾಧನೆ, ದೇವಸ್ಥಾನಕ್ಕೆ ಮಾತ್ರ ಸೀಮಿತವಾಗದೆ ನೃತ್ಯ, ಹಾಡು, ಭಜನೆಗಳಂತಹ ಕಲೆಗಳ ರೂಪದಲ್ಲಿಯೂ ಆರಾಧಿಸಲು ಅವಕಾಶ ನೀಡಿದೆ ಎಂದರು.
ಕೇರಳ ಹಿಂದೂ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಪಿ.ಆರ್. ಸುಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕೇರಳ ಹಿಂದೂ ಸಮಾಜದ ಮುಖಂಡ ಕೆ.ಎನ್. ಶಿವದಾಸ್, ವೆನಿಲ್ಲಾ ಭಾಸ್ಕರ್, ಸುಧಾಕರ ಆಚಾರ್ಯ ಮಾತನಾಡಿದರು. ಕೇರಳ ಸಮಾಜದ ಮುಖಂಡರಾದ ಒ.ಆರ್. ಬಿನು, ಮನೋಹರ್, ಕೆ.ಕೆ. ಸಜಿ ಉಪಸ್ಥಿತರಿದ್ದರು.ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಹೃದಯವಂತ ಡಾ.ವಿಷ್ಣುವರ್ಧನ್ ಪ್ರಶಸ್ತಿ ಪಡೆದ ಸಿಂಸೆಯ ಗಾಯಕಿ ವಿಶ್ರೇಯ, ವೈದ್ಯಕೀಯ ಪದವಿ ವ್ಯಾಸಂಗ ಮಾಡುತ್ತಿರುವ ಸಿಂಚನ ಅವರನ್ನು ಸನ್ಮಾನಿಸಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.