ಕನ್ನಡಪ್ರಭ ವಾರ್ತೆ ಮಂಗಳೂರು
ಆಲಂಕಾರು ಕಾಂಗ್ರೆಸ್ ಬಹಿರಂಗ ಚುನಾವಣಾ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ಪ್ರಾರಂಭವಾದಾಗಿನಿಂದ ದ.ಕ.ದಲ್ಲಿ ಬಿಜೆಪಿ ಸಂಸದರ ಸಾಧನೆ ಬಗ್ಗೆ ಕೇಳುತ್ತಿದ್ದೇವೆ. ಆದರೆ ಇದುವರೆಗೆ ಯಾರೂ ಇದಕ್ಕೆ ಉತ್ತರಿಸಿಲ್ಲ ಎಂದು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆ ಇಂದು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿ ನಿಲ್ಲಲು ಆರಂಭಿಕ 40 ವರ್ಷಗಳಲ್ಲಿ ಕಾಂಗ್ರೆಸ್ ಸಂಸದರು ತಂದುಕೊಟ್ಟ ಬೃಹತ್ ಯೋಜನೆಗಳೇ ಕಾರಣ. ಅದರ ನಂತರ 33 ವರ್ಷಗಳ ಕಾಲ ಬಿಜೆಪಿ ಸಂಸದರು ಜಿಲ್ಲೆಗೆ ಯಾವ ಪ್ರಮುಖ ಯೋಜನೆಗಳನ್ನು ತಂದಿದ್ದಾರೆ? ಇದನ್ನು ಪ್ರಶ್ನೆ ಮಾಡಬೇಕಿದೆ. ಈ ಕುರಿತು ಜನರು ಮೌನವಾದರೆ ಜಿಲ್ಲೆಯು ಅಭಿವೃದ್ಧಿಯಲ್ಲಿ ಹಿಂದೆ ಬೀಳಲಿದೆ. ಅಭಿವೃದ್ಧಿಯ ಚಿಂತನೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಅಭಿವೃದ್ಧಿ ಪಥದತ್ತ ಸಾಗಬೇಕಿದೆ ಎಂದು ಪದ್ಮರಾಜ್ ಹೇಳಿದರು.ಅಪಪ್ರಚಾರಕ್ಕೆ ಕಿವಿಗೊಡಬೇಡಿ:ಜಿಲ್ಲೆಯಲ್ಲಿ ಬಿಜೆಪಿ ಸೋಲುತ್ತದೆ ಎನ್ನುವುದು ಬಿಜೆಪಿಗರಿಗೆ ಸ್ಪಷ್ಟವಾಗಿ ಅರಿವಾಗಿದೆ. ಅದಕ್ಕಾಗಿ ಅಪಪ್ರಚಾರದ ಮಾರ್ಗ ಹಿಡಿದಿದ್ದಾರೆ. ಮುಂದಿನ ದಿನ ಅಪಪ್ರಚಾರ ಇನ್ನೂ ಹೆಚ್ಚಾಗಬಹುದು. ಆದರೆ ಕಾರ್ಯಕರ್ತರು ಎದೆಗುಂದದೆ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಿ ಎಂದು ಕರೆ ನೀಡಿದರು.ಜಿಲ್ಲೆಗೆ ನ್ಯಾಯ ಒದಗಿಸಿಲ್ಲ:
ಇದೇ ಸಂದರ್ಭ ಕೇಶವ ದೇವಾಡಿಗ, ರಮೇಶ್, ಜಗದೀಶ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು. ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಉಸ್ತುವಾರಿ ಬಿ.ರಮಾನಾಥ ರೈ, ಸುಳ್ಯ ಉಸ್ತುವಾರಿ ಮಮತಾ ಗಟ್ಟಿ, ಸಂಯೋಜಕರಾದ ಶಕುಂತಳಾ ಶೆಟ್ಟಿ, ಜಿ. ಕೃಷ್ಣಪ್ಪ, ಡಾ. ರಘು, ಚುನಾವಣಾ ವೀಕ್ಷಕ ಜಯಪ್ರಕಾಶ್ ರೈ, ಕಡಬ ಬ್ಲಾಕ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಪ್ರಚಾರ ಸಮಿತಿಯ ಪದಾಧಿಕಾರಿಗಳು ಇದ್ದರು.ರೋಡ್ ಶೋ, ದೇವಾಲಯಗಳಿಗೆ ಭೇಟಿ: