ಧಾರವಾಡ:
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನೈಸರ್ಗಿಕ ವಿಕೋಪಗಳಾದ ಅತಿವೃಷ್ಟಿ, ಪ್ರವಾಹ, ಬರ ಪರಿಸ್ಥಿತಿ, ಆಲಿಕಲ್ಲು ಮಳೆಯಿಂದ ಸ್ಥಳೀಯವಾಗಿ ಉಂಟಾಗುವ ಬೆಳೆಹಾನಿ ಪ್ರಕರಣಗಳಲ್ಲಿ ನಿಯಮಾನುಸಾರ ಅರ್ಹ ಸಾರ್ವಜನಿಕರಿಗೆ, ರೈತ ಫಲಾನುಭವಿಗಳಿಗೆ ಸರ್ಕಾರದ ಆದೇಶದಂತೆ ಬರ ಪರಿಹಾರದ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಆದರೆ, ಕೆಲ ಬ್ಯಾಂಕ್ ಅಧಿಕಾರಿಗಳು ಸಾರ್ವಜನಿಕರ, ರೈತರ ಪರಿಹಾರದ ಮೊತ್ತವನ್ನು ಅವರ ಸಾಲ ರೂಪದಲ್ಲಿ ಕಡಿತಗೊಳಿಸುತ್ತಿರುವುದಾಗಿ ಸಾರ್ವಜನಿಕರು, ರೈತರಿಂದ ದೂರು ಬಂದಿವೆ. ಆದ್ದರಿಂದ ಈ ಮೊತ್ತವನ್ನು ಯಾವುದೇ ಕಾರಣಕ್ಕಾಗಿ ಸಾಲದ ಖಾತೆಗೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಅವರು ನಿರ್ದೇಶಿಸಿದ್ದಾರೆ.
ಈ ಕುರಿತು ಜಿಲ್ಲೆಯ ಎಲ್ಲ ಬ್ಯಾಂಕ್ಗಳ ಮುಖ್ಯಸ್ಥರಿಗೆ, ವ್ಯವಸ್ಥಾಪಕರಿಗೆ ಮತ್ತು ಶಾಖಾ ವ್ಯವಸ್ಥಾಪಕರಿಗೆ ಸೂಚನೆ ನೀಡಿ, ರೈತರಿಗೆ ತೊಂದರೆ ಆಗದಂತೆ ಮತ್ತು ಪರಿಹಾರ ಮೊತ್ತವನ್ನು ಸಾಲದ ಖಾತೆಗೆ ಹೊಂದಾಣಿಕೆ ಮಾಡಿಕೊಳ್ಳದಂತೆ ಸೂಕ್ತ ಕ್ರಮಕೈಗೊಳ್ಳಲು ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.