ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣಾ ಅಖಾಡ ರಂಗೇರಿದ್ದು, ಭಾನುವಾರ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ
ಈ ವೇಳೆ ಗ್ರಾಮಸ್ಥರನ್ನುದ್ದೇಶಿಸಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ನಾನು ಚನ್ನಪಟ್ಟಣ ಉಪಚುನಾವಣೆಯ ಆಕಾಂಕ್ಷಿಯಾಗಿರಲಿಲ್ಲ. ಆದರೆ, ಕಾರ್ಯಕರ್ತರ ಒತ್ತಾಯಕ್ಕೆ ಕಟ್ಟುಬಿದ್ದು ಸ್ಪರ್ಧಿಸಿದ್ದೇನೆ. ನಿಮ್ಮ ಸೇವೆ ಮಾಡಲು ನನಗೂ ಒಂದು ಅವಕಾಶ ಕೊಡಿ ಎಂದು ಮನವಿ ಮಾಡಿದರು.
ಮಂಡ್ಯದಲ್ಲಿ ಕುಮಾರಣ್ಣ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಮೇಲೆ ತೆರವಾದ ಕ್ಷೇತ್ರದಿಂದ ಈಗ ಕಾಂಗ್ರೆಸ್ ಸೇರಿರುವ ಅಭ್ಯರ್ಥಿ ಸ್ಪರ್ಧಿಸುತ್ತೇನೆ ಎಂದು ತಿಳಿಸಿದ್ದರು. ಆಗ ಕುಮಾರಣ್ಣ ಮೊದಲು ನಮ್ಮ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ ರಾಷ್ಟ್ರೀಯ ನಾಯಕರ ಜತೆ ಹೋಗಿ ಮಾತಾಡೋಣ ಅಂದಿದ್ದರು. ಅದಾದ ನಂತರ ನಡೆದ ಬೆಳವಣಿಗೆಗಳನ್ನು ನೀವೆ ಗಮನಿಸುತ್ತಿದ್ದೀರಿ ಎಂದು ಹೇಳಿದರು.ಬೆಂಗಳೂರು ಖಾಸಗಿ ಹೋಟೆಲ್ನಲ್ಲಿ ಅವರ ಜತೆ ಚರ್ಚೆ ಮಾಡಿದ್ವಿ. ಜೆಡಿಎಸ್ ಸಾಂಪ್ರದಾಯಿಕ ಮತಗಳಿದೆ, ಜೆಡಿಎಸ್ನಿಂದ ನಿಂತ್ಕೊಳ್ಳಿ ಅಂತ ನಮ್ಮ ನಾಯಕರು ಹೇಳಿದರು. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇದ್ದರೂ ನಮ್ಮ ನಾಯಕರು ಜೆಡಿಎಸ್ನಿಂದ ಸ್ಪರ್ಧೆ ಮಾಡಿ ಅಂತ ಕೇಳಿದ್ರು. ಆದಾದ ಮೇಲೆ ಏನೆಲ್ಲ ಮಾತಾಡಿದ್ರು ನಿಮಗೆ ಗೊತ್ತಿರುವ ವಿಚಾರ. ಅವರು ತರಾತರಿಯಲ್ಲಿ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟು ಹೋಗಿ ಕಾಂಗ್ರೆಸ್ ಸೇರಿಕೊಂಡರು. ಬಿಜೆಪಿ ಅಷ್ಟೆಲ್ಲ ಸ್ಥಾನ ಕೊಟ್ಟಿದ್ರು ಬಿಟ್ಟು ಹೋದ್ರು. ಅವರು ಯಾವ ಪಕ್ಷದಲ್ಲೂ ಉಳಿದುಕೊಳ್ಳಲ್ಲ. ಏನೇ ನೋವಿದ್ರು ಸಹಿಸ್ಕೊಂಡು ಅವರಿಗೆ ಅವಕಾಶ ನೀಡಿದೆವು. ಆದರೂ ಅವರು ಹೋದರು ಎಂದು ಬೇಸರ ವ್ಯಕ್ತಪಡಿಸಿದರು.
ಪಡ್ಯಂತ್ರ ನಡೆಸಿದರು:
ಈ ಜಿಲ್ಲೆಯಲ್ಲಿ ನಾವು ಹುಟ್ಟದೇ ಇರಬಹುದು. ಆದರೆ, ಜಿಲ್ಲೆಯ ಜತೆಗೆ ಹಲವಾರು ವರ್ಷದ ನಂಟಿದೆ. ದೇವೇಗೌಡರು ಇಗ್ಗಲೂರು ಬ್ಯಾರೇಜ್ ಕಟ್ಟದೆ ಹೋಗಿದ್ದರೆ ಎಲ್ಲಿಂದ ಕೆರೆಗೆ ನೀರು ತುಂಬಿಸುತ್ತಿದ್ದರು. ಗೋಲಿಬಾರ್ ಆಗಿ ಇಬ್ಬರು ತೀರಿಕೊಂಡ್ರು. ನಾನು ಆಗ ಚಿಕ್ಕ ಹುಡುಗ, ದೇವೇಗೌಡರು ನನಗೆ ಪಾಠ ಮಾಡಿದ್ದಾರೆ. ಕುಮಾರಸ್ವಾಮಿ ಹಾಗೂ ದೇವೇಗೌಡರು ಕಣ್ಣಲ್ಲಿ ನೀರಾಕ್ತಾರೆ ಮರಳಾಗಬೇಡಿ ಅಂತಾರೆ. ಅವರು ಕಣ್ಣೀರಾಕೋದು ನನಗಾಗಿ ಅಲ್ಲ. ರೈತರ ಪರವಾಗಿ, ನಾಡಿದ ಜನರು ನೋವಿನಲ್ಲಿದ್ದಾಗ ಕಣ್ಣಲ್ಲಿ ನೀರಾಕಿದ್ದಾರೆ. ಅದನ್ನ ಹೊರತುಪಡಿಸಿ ಅವರು ನನಗಾಗಿ ಕಣ್ಣೀರು ಹಾಕಲಿಲ್ಲ. ನನಗೆ ಆತ್ಮವಿಶ್ವಾಸ ತುಂಬಿ ದೇವೇಗೌಡರು ಕಳುಹಿಸಿದ್ದಾರೆ. ನಿಮ್ಮ ಸಹಕಾರ ಇರಲಿ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಎನ್. ಆನಂದಸ್ವಾಮಿ ಸೇರಿದಂತೆ ಬಿಜೆಪಿ, ಜೆಡಿಎಸ್ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನನ್ನ ಸ್ಪರ್ಧೆ ಅನಿರೀಕ್ಷಿತ: ನಿಖಿಲ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಚನ್ನಪಟ್ಟಣಕ್ಕೆ ಕುಮಾರಸ್ವಾಮಿ ಅವರು ದೊಡ್ಡ ಮಟ್ಟದ ಅನುದಾನ ತಂದಿದ್ದರು. ದೇವೇಗೌಡರು ಇಗ್ಗಲೂರು ಜಲಾಶಯ ನಿರ್ಮಾಣ ಮಾಡಿದ್ದಾರೆ. ತಾಲೂಕಿನ ನೀರಾವರಿ ಯೋಜನೆಗೆ ಅವರ ಕೊಡುಗೆ ಶಾಶ್ವತವಾಗಿದೆ. ನೀರಾ ಚಳವಳಿ ವೇಳೆ ದೇವೇಗೌಡರು ಚನ್ನಪಟ್ಟಣದಿಂದ ಬೆಂಗಳೂರುವರೆಗೂ ಪಾದಯಾತ್ರೆ ಮಾಡಿದ್ದರು. ಇದು ನೆರವಾಗಲಿದೆ ಎಂದು ತಿಳಿಸಿದರು.
ಪೊಟೋ೨೭ಸಿಪಿಟಿ೨,೩:
ಚನ್ನಪಟ್ಟಣ ತಾಲೂಕಿನ ಮಾಕಳಿ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಚುನಾವಣಾ ಪ್ರಚಾರ ನಡೆಸಿದರು.