ಕನ್ನಡ ಪ್ರಭ ವಾರ್ತೆ ಶಿಡ್ಲಘಟ್ಟ
ನಗರದ ಡಾಲ್ಫಿನ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ನೀಟ್ ಮತ್ತು ಸಿಇಟಿ ತರಬೇತಿ ಕೇಂದ್ರವಾದ ’ಡಾಲ್ಫಿನ್ಸ್ ಎಡುಸೈನ್ಸ್ ಅಕಾಡೆಮಿ’ ಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸತತ ಪರಿಶ್ರಮ, ಏಕಾಗ್ರತೆ ಮತ್ತು ಸೂಕ್ತ ಗುರುವಿನ ಮಾರ್ಗದರ್ಶನದಿಂದ ಮಾತ್ರ ನೀಟ್, ಸಿಇಟಿ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯ ಎಂದರು. ಬಾಲ ಕಾರ್ಮಿಕತೆ ಪಾಪ
18 ವರ್ಷ ತುಂಬುವ ಮೊದಲೇ ವಿವಾಹ ಮಾಡುವುದು ಮತ್ತು ಓದುವ ಮಕ್ಕಳನ್ನು ಅಪಾಯಕಾರಿ ಕೆಲಸಗಳಿಗೆ ನೇಮಕ ಮಾಡಿಕೊಳ್ಳುವುದಕ್ಕಿಂತ ಬೇರೆ ಪಾಪದ ಕೆಲಸ ಮತ್ತೊಂದಿಲ್ಲ. ಈ ರೀತಿಯ ಪ್ರಯತ್ನಗಳು ನಡೆದಲ್ಲಿ ಕೂಡಲೇ ಸಂಬಂಧಿಸಿದ ಇಲಾಖೆಗಳ ಗಮನಕ್ಕೆ ತರುವ ಮೂಲಕ ಅವುಗಳಿಗೆ ಕಡಿವಾಣ ಹಾಕಿ ಸ್ವಸ್ಥ ಸಮಾಜವನ್ನು ನಿರ್ಮಿಸಲು ಪೋಷಕರು ಮತ್ತು ಸಾರ್ವಜನಿಕರು ಇಲಾಖೆಗಳ ಜೊತೆಗೆ ಕೈಜೋಡಿಸಬೇಕೆಂದು ಕರೆ ನೀಡಿದರು. ಅಧಕ್ಷತೆ ವಹಿಸಿದ್ದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎನ್ ಅಶೋಕ್ ಮಾತನಾಡಿ, ಶ್ರಮ ಪಡದ ಯಾರೊಬ್ಬರೂ ಯಶಸ್ವಿ ಯಾಗಲ್ಲ . ಶ್ರಮ ಮತ್ತು ತಾಳ್ಮೆಯಿದ್ದಲ್ಲಿ ಅಗಾಧವಾದುದನ್ನು ಸಾಧಿಸಬಹುದು ಎಂಬುದಕ್ಕೆ ಒಬ್ಬ ಅವಿದ್ಯಾವಂತ ವ್ಯಕ್ತಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವಂತಹ ಡಾಲ್ಫಿನ್ಸ್ ಸಂಸ್ಥೆಯನ್ನು ಹುಟ್ಟುಹಾಕಿರುವುದು ನಿದರ್ಶನ ಎಂದರು.ಸ್ಥಳೀಯವಾಗಿ ತರಬೇತಿ
ಪ್ರಾಂಶುಪಾಲ ಡಾ ಎನ್. ಶ್ರೀನಿವಾಸಮೂರ್ತಿ ಮಾತನಾಡಿ, ಹಚ್ಚಿಟ್ಟ ಹಣತೆ ಮತ್ತು ಪಡೆದ ಜ್ಞಾನ ಎಂದಿಗೂ ನಂದಬಾರದು. ಈ ಎರಡೂ ಸಮಾಜವನ್ನು ಸರಿ ದಾರಿಯಲ್ಲಿ ನಡೆಸುವ ಅದ್ಭುತ ಶಕ್ತಿಗಳು ಎಂದರು. ಈ ಸಂದರ್ಭದಲ್ಲಿ ಉಪನ್ಯಾಸಕರುಗಳಾದ ಡಾ ಸುದರ್ಶನ್, ಮುನಿಕೃಷ್ಣಪ್ಪ, ಆರೀಫ್ ಅಹಮದ್, ಪ್ರೊ. ನಾಗೇಶ್, ಸಂತೋಷ್ ರೆಡ್ಡಿ, ಗಜೇಂದ್ರ, ಜಾನಕಿ ರಾಮ್, ನಾಗೇಶಯ್ಯ, ಖದೀರ್ ಅಹಮದ್, ವಿನಯ್ ಕುಮಾರ್, ಸಂಪತ್ ಕುಮಾರ್ , ಪ್ರವೀಣ್ ಕುಮಾರ್ ಸೇರಿದಂತೆ ಕಚೇರಿ ಅಧೀಕ್ಷಕ ನಾಗೇಶ್, ಆಶಾ, ರಮ್ಯ, ಉಪಸ್ಥಿತರಿದ್ದರು. ಪ್ರಾಧ್ಯಾಪಕಿ ಶೃತಿ ಪ್ರಾರ್ಥಿಸಿದರು. ಪ್ರೊ ಮಂಜುನಾಥ್ ಎನ್ ನಿರೂಪಿಸಿದರು.