ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಸಿದ್ಧತೆ ಕಾರ್ಯಾಗಾರ

KannadaprabhaNewsNetwork |  
Published : Nov 16, 2024, 12:32 AM IST

ಸಾರಾಂಶ

ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಕಾರ್ಯಾಗಾರವನ್ನು ಗೌರಿಬಿದನೂರಿನ ಡಾ.ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ, ಸಮಾನತಾ ಸೌಧದಲ್ಲಿ ನಡೆಯಲಿದೆ.

ಗೌರಿಬಿದನೂರು: ನವೆಂಬರ್ 17, ಭಾನುವಾರ 10 ಗಂಟೆಯಿಂದ ಒಂದು ದಿನದ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಕಾರ್ಯಾಗಾರವನ್ನು ಇಲ್ಲಿನ ಡಾ.ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ, ಸಮಾನತಾ ಸೌಧದಲ್ಲಿ ಹಮ್ಮಿಕೊಳ್ಳಲಾಗಿದೆ.

ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡ ಮತ್ತು ತಹಸೀಲ್ದಾರ್‌ ಮಹೇಶ್ ಎಸ್‌. ಪತ್ರಿ ಹಾಗೂ ಶಿಕ್ಷಣ ಪ್ರೇಮಿಗಳ ಸಹಕಾರದೊಂದಿಗೆ ಆರಂಭವಾಗಿರುವ ಈ ತರಬೇತಿ ಕೇಂದ್ರದಲ್ಲಿ ಈಗಾಗಲೇ ವಾರಾಂತ್ಯದ ತರಗತಿಗಳು ಉಚಿತವಾಗಿ ನಡೆಯುತ್ತಿವೆ.

ತರಬೇತಿ ಕೇಂದ್ರವು ಸುಸಜ್ಜಿತವಾದ ಗ್ರಂಥಾಲಯ, ವಾಚನಾಲಯ ಸೌಲಭ್ಯವನ್ನು ಹೊಂದಿದೆ. ಬೆಂಗಳೂರು, ಧಾರವಾಡ ಹಾಗೂ ವಿಜಯಪುರದ ಬೋಧಕ ಸಿಬ್ಬಂದಿಯವರಿಂದ ಬೋಧನೆ ನೆಡೆಯುತ್ತಿದೆ. ಉಚಿತ ವೈ-ಫೈ(WI-FI) ಸೌಲಭ್ಯವನ್ನು ಗ್ರಂಥಾಲಯದಲ್ಲಿ ಅಳವಡಿಸಲಾಗಿದೆ. ಯಾವುದೇ ಹುದ್ದೆಗಳಿಗೆ ಅಂತರ್ಜಾಲದ ಮೂಲಕ ಅರ್ಜಿ ಸಲ್ಲಿಸಲು ಸಹಾಯ ಮಾಡಲಾಗುತ್ತಿದೆ. ತರಗತಿಗಳು ನಡೆಯುವ ದಿನಗಳಂದು ಮಧ್ಯಾಹ್ನ ಉಚಿತವಾಗಿ ಊಟದ ವ್ಯವಸ್ಥೆ ಮಾಡಲಾಗುತ್ತಿದೆ.

ಈಗ ವಾರಾಂತ್ಯದ ತರಗತಿಗಳ ಜೊತೆಗೆ ವಾರದ ಎಲ್ಲಾ ದಿನಗಳಲ್ಲಿ ನಿರಂತರವಾದ ತರಬೇತಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ