ಕನ್ನಡಪ್ರಭ ವಾರ್ತೆ ಯಲಬುರ್ಗಾ
ತಾಲೂಕಿನ ಕಲ್ಲೂರು ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ಕಾಲೋನಿಯಲ್ಲಿ ಭಾನುವಾರ ಪೊಲೀಸ್ ಠಾಣೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ದಲಿತರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.
ಯಾವುದೇ ಸಾರ್ವಜನಿಕ ಸಮಸ್ಯೆಗಳಿದ್ದರೆ ಗಮನಕ್ಕೆ ತರಬೇಕು. ನಿಮ್ಮ ನೆರವಿಗೆ ಇಲಾಖೆ ಸದಾ ಸಿದ್ಧವಿರುತ್ತದೆ. ಯಾವುದೇ ಅನುಮಾನ ಬೇಡ ಎಂದರು.ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಎಲ್ಲ ರೀತಿಯಿಂದಲೂ ಸಾಕಷ್ಟು ಅನುಕೂಲಗಳನ್ನು ಕಲ್ಪಿಸಿಕೊಟ್ಟಿದೆ. ಹೀಗಾಗಿ, ಮಕ್ಕಳಿಗೆ ಶಿಕ್ಷಣ ಕೊಡಿಸುವ ಪ್ರಾಮಾಣಿಕ ಕಾರ್ಯಕ್ಕೆ ಮುಂದಾಗಬೇಕು. ಯುವಕರು ದುಶ್ಚಟಗಳ ದಾಸರಾಗಿ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳದೇ ಸುಂದರ ಬದುಕು ಕಟ್ಟಿಕೊಳ್ಳಬೇಕು. ಸಂವಿಧಾನ ನೀಡಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಗ್ರಾಮದಲ್ಲಿ ಯಾರಾದರೂ ಜಾತಿ ನಿಂದನೆ, ದೌರ್ಜನ್ಯ ಮಾಡಿದರ ಯಾವುದೇ ಮುಲಾಜಿಯಿಲ್ಲದೇ ನನ್ನ ಗಮನಕ್ಕೆ ತನ್ನಿ. ಅಂತಹವರ ಮೇಲೆ ಕಾನೂನಿನ ಕ್ರಮ ಕೈಗೊಳ್ಳಲಾಗುವುದು. ಪ್ರತಿಯೊಬ್ಬರು ಸಹೋದರತ್ವದಿಂದ ಸೌಹಾರ್ದಯುತವಾಗಿ ಕೂಡಿ ಬಾಳುವುದನ್ನು ಅರಿತುಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಮುಖಂಡರಾದ ಬಲವಂತಪ್ಪ ಪೂಜಾರ, ಬಸಪ್ಪ ಬಂಗಾಳಗಿಡದ, ವೀರೇಶ ಕಡೇಮನಿ, ಬಸವರಾಜ ಪೂಜಾರ, ವೀರೇಶ ಸಂದಿಮನಿ, ಕಲ್ಲಪ್ಪ ಬಂಗಾಳಗಿಡದ, ಶೇಖರಪ್ಪ ಪೂಜಾರ, ಬಸವರಾಜ, ಶರಣಪ್ಪ ಮತ್ತಿತರರು ಇದ್ದರು.