ಕಾರವಾರ: ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಒಟ್ಟು ೧೦ ಜನರು ಕಣ್ಮರೆಯಾಗಿರುವ ಬಗ್ಗೆ ಅವರ ಕುಟುಂಬಸ್ಥರಿಂದ ಜಿಲ್ಲಾಡಳಿತಕ್ಕೆ ದೂರುಗಳು ಬಂದಿದೆ. ಈಗಾಗಲೆ ೬ ಜನರ ಕಳೆಬರ ಪತ್ತೆಯಾಗಿದೆ. ಉಳಿದವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ತಿಳಿಸಿದರು.
ಒಟ್ಟು ಮೂರು ಟ್ಯಾಂಕರ್ಗಳು ಹಾಗೂ ಒಂದು ಲಾರಿ ನಾಪತ್ತೆಯಾಗಿತ್ತು. ಇವುಗಳಲ್ಲಿ ಒಂದು ಎಚ್ಪಿ ಕಂಪನಿಯ ಟ್ಯಾಂಕರ್ ನೀರಲ್ಲಿ ಕೊಚ್ಚಿ ಹೋಗಿದೆ. ಉಳಿದ ಎರಡು ಭಾರತ್ ಪೆಟ್ರೋಲಿಯಂ ಟ್ಯಾಂಕರ್ಗಳು ದಡದಲ್ಲಿ ಸುರಕ್ಷಿತವಾಗಿವೆ. ಒಂದು ಟಿಂಬರ್ ಲಾರಿ ನಾಪತ್ತೆಯಾಗಿದ್ದು, ಜಿಪಿಎಸ್ ಲೊಕೇಶನ್ ನೋಡಿದಾಗ ಶಿರೂರು ಗುಡ್ಡ ಕುಸಿತದ ಪ್ರದೇಶದಲ್ಲಿದೆ ಎಂದು ಕಂಡುಬರುತ್ತಿದೆ. ಗಂಗಾವಳಿ ನದಿಯಲ್ಲಿರುವ ಗ್ಯಾಸ್ ಟ್ಯಾಂಕರ್ ಬಗ್ಗೆ ಆತಂಕ ಪಡುವ ಅವಶ್ಯಕತೆಯಿಲ್ಲ. ವಿಶೇಷ ತಂಡದಿಂದ ನಿಯಮದಂತೆ ಅನಿಲವನ್ನು ಗಾಳಿಯಲ್ಲಿಯೇ ಬಿಟ್ಟು ಖಾಲಿ ಮಾಡಲಾಗುತ್ತಿದೆ. ಸುತ್ತಮುತ್ತಲಿನ ಪ್ರದೇಶದ ಮನೆಗಳನ್ನು ಖಾಲಿ ಮಾಡಿಸಿದ್ದು, ಬೆಂಕಿ ಹಚ್ಚದಂತೆ, ಮೊಬೈಲ್ ಬಳಕೆ ಮಾಡದಂತೆ, ವಾಹನ ಓಡಾಟ ನಡೆಸದಂತೆ ಕಟ್ಟುನಿಟ್ಟಿನ ಸೂಚನೆ ಕೂಡ ನೀಡಲಾಗಿದೆ. ಸ್ಥಳದಲ್ಲಿ ವಿಶೇಷ ತಂಡದ ಅಧಿಕಾರಿಗಳು ಹೊರತು ಯಾರನ್ನು ಬಿಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.ಇಂದು ಜಿಲ್ಲಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ
ಕಾರವಾರ: ಜಿಲ್ಲಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಜು. 19ರಂದು ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಆದೇಶ ಹೊರಡಿಸಿದ್ದಾರೆ.ಜಿಲ್ಲೆಯ ಹಳಿಯಾಳ, ಮುಂಡಗೋಡ, ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಶಿರಸಿ, ಸಿದ್ದಾಪುರ, ದಾಂಡೇಲಿ, ಯಲ್ಲಾಪುರ ಹಾಗೂ ಜೋಯಿಡಾ ತಾಲೂಕಿನ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ, ಪಪೂ ಕಾಲೇಜಿಗೆ ರಜೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.ಕಾಳಜಿ ಕೇಂದ್ರಗಳಲ್ಲಿ 2 ಸಾವಿರ ಜನರ ವಾಸ್ತವ್ಯಕಾರವಾರ: