ಯುವತಿಗೆ ಲೈಂಗಿಕ ಕಿರುಕುಳಕ್ಕೆಯತ್ನಿಸಿದವನ ವಿರುದ್ಧ ದೂರು

KannadaprabhaNewsNetwork |  
Published : Jan 28, 2026, 02:30 AM IST
ಪೊಟೋ: 27ಎಸ್‌ಎಂಜಿಕೆಪಿ02ಶಿವಮೊಗ್ಗ ನಗರದ ಬಿ.ಎಚ್. ರಸ್ತೆಯ ಎಸ್.ಬಿ.ಐ. ಕಚೇರಿಯಿಂದ ಸೀನಪ್ಪ ಶೆಟ್ಟಿ ವೃತ್ತದವರೆಗೆ ವಿವಿಧ  ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ಅಧಿಕಾರಿಗಳ ಮತ್ತು ನೌಕರರ ಸಂಘಟನೆಯ ಒಕ್ಕೂಟವಾದ ಯು.ಎಫ್.ಬಿ.ಯು ವತಿಯಿಂದ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು. | Kannada Prabha

ಸಾರಾಂಶ

ಯುವತಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಅಪರಿಚಿತನ ವಿರುದ್ಧ ಹೆಬ್ಬಗೋಡಿ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಯುವತಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಅಪರಿಚಿತನ ವಿರುದ್ಧ ಹೆಬ್ಬಗೋಡಿ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಹೆಡ್‌ ಪೊಲೀಸ್‌ ಕಾನ್‌ಸ್ಟೇಬಲ್‌ ವೃಷಬೇಂದ್ರ ಅವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ವಿವರ: ಜ. 25 ರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ವೃಷಬೇಂದ್ರ ಅವರು ಗಸ್ತು ತಿರುಗುತ್ತಿದ್ದ ವೇಳೆ ತಮ್ಮ ಮೊಬೈಲ್‌ನಲ್ಲಿ ಇನ್‌ಸ್ಟಾಗ್ರಾಂ ವೀಕ್ಷಿಸುತ್ತಿರುವಾಗ ಮೂಡ್‌ ಪ್ಲಿಕ್ಸ್‌ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಯುವತಿಯೊಬ್ಬಳು ಸಹಾಯಕ್ಕಾಗಿ ಜೋರಾಗಿ ಕೂಗುತ್ತಿದ್ದ ವಿಡಿಯೋವನ್ನು ಗಮನಿಸಿದ್ದಾರೆ. ಅರೆ ಬೆತ್ತಲೆಯಾಗಿ ಕಾರಿನಲ್ಲಿದ್ದ ಅಪರಿಚಿತ ವ್ಯಕ್ತಿ ಆಕೆಯನ್ನು ಒಳಗೆ ಬಾ ಎಂದು ಕಿರುಕುಳ ನೀಡಿರುವುದು ಆ ವಿಡಿಯೋದಲ್ಲಿ ಸೆರೆಯಾಗಿದೆ. ಆ ಅಪರಿಚಿತ ವ್ಯಕ್ತಿಯು ಯುವತಿಗೆ ಲೈಂಗಿಕ ಕಿರುಕುಳ ನೀಡುವ ಉದ್ದೇಶದಿಂದ ಆಕೆಯನ್ನು ಕಾರಿನ ಒಳಗಡೆ ಬಾ ಎಂದು ಕರೆದಿದ್ದು, ಈ ಬಗ್ಗೆ ವಿಡಿಯೋದಲ್ಲಿ ಯುವತಿಯೇ ಆರೋಪಿಸಿದ್ದಾಳೆ. ಆದ್ದರಿಂದ ಅಪರಿಚಿತ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಹೆಡ್‌ ಪೊಲೀಸ್‌ ಕಾನ್‌ಸ್ಟೇಬಲ್‌ ವೃಷಬೇಂದ್ರ ಉಲ್ಲೇಖಿಸಿದ್ದಾರೆ.

ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ತ್ರಿಪುರ ಮೂಲದ ಯುವತಿಯನ್ನು ಸಂಪರ್ಕಿಸಿ ಘಟನೆಯ ಬಗ್ಗೆ ಮಾಹಿತಿ ನೀಡುವಂತೆ ಕೋರಿದ್ದಾರೆ. ಆದರೆ ಆಕೆ ವಿಡಿಯೋವನ್ನು ಡಿಲೀಟ್‌ ಮಾಡಿದ್ದು, ತನಿಖೆಗೆ ಸಹಕರಿಸಿಲ್ಲ. ಜತೆಗೆ ಘಟನಾ ಸ್ಥಳದಲ್ಲಿ ಯಾವುದೇ ಸಿಸಿ ಕ್ಯಾಮೆರಗಳು ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರ ಸರ್ಕಾರದ ಸಾಧನೆ ತಿಳಿ ಹೇಳಿ
ತಂದೆಯಂತೆ ಜನಸೇವೆ ಮಾಡುವ ಕನಸು ನನ್ನದು: ವಿನಯ ತಿಮ್ಮಾಪುರ