ಬಿಇಒ ಕಚೇರಿ ವಿರುದ್ಧದ ಆರೋಪಗಳ ತನಿಖೆಗೆ ಲೋಕಾಯುಕ್ತಕ್ಕೆ ಲಿಖಿತ ದೂರು

KannadaprabhaNewsNetwork |  
Published : Sep 17, 2026, 01:15 AM IST
ಕೆ ಕೆ ಪಿ ಸುದ್ದಿ,01: ಬಿಇಒ ಕಛೇರಿ ವಿರುದ್ಧ ಶ್ರೀ ರಾಮ ಸೇನೆ ಲೋಕಾಯುಕ್ತರಿಗೆ ದೂರು.  | Kannada Prabha

ಸಾರಾಂಶ

ದೂರಿನ ಆಧಾರದ ಮೇಲೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕಚೇರಿ ಸಿಬ್ಬಂದಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವುದೇ ರೀತಿ ಅಕ್ರಮ ಅಥವಾ ಭ್ರಷ್ಟಾಚಾರ ನಡೆದಿಲ್ಲ ಎಂಬುದಾಗಿ ಉತ್ತರವನ್ನು ಉಪನಿರ್ದೇಶಕರಿಗೆ ಸಲ್ಲಿಸಿದ್ದರು. ಆದರೆ ಶ್ರೀರಾಮ ಸೇನೆಯ ದೂರಿನ ಪ್ರಮುಖ ಉದ್ದೇಶವೇ ಸಂಬಂಧಪಟ್ಟ ಕಡತಗಳು, ದಾಖಲೆ ಹಾಗೂ ಕಚೇರಿ ವ್ಯವಹಾರ ಗಳನ್ನು ಪರಿಶೀಲಿಸಿ ವಾಸ್ತವಾಂಶ ಪತ್ತೆಹಚ್ಚುವುದು ಆಗಿತ್ತು. ಆದರೆ ಕಡತ ಮತ್ತು ದಾಖಲೆಗಳನ್ನು ಸಮಗ್ರ ವಾಗಿ ಪರಿಶೀಲಿಸದೆ, ಕೇವಲ ಆರೋಪಕ್ಕೆ ಒಳಗಾದ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ವಿವರಣೆ ಪಡೆದು ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸೂಚಿಸಿ ದೂರು ಮುಕ್ತಾಯಗೊಳಿಸಿರುವ ಕ್ರಮ ಬಗ್ಗೆ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ಕನ್ನಡಪ್ರಭ ವಾರ್ತೆ ಕನಕಪುರ

ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ, ಆಡಳಿತ ವೈಫಲ್ಯ, ಕಡತಗಳ ಉದ್ದೇಶಪೂರ್ವಕ ವಿಳಂಬ ಹಾಗೂ ಶಿಕ್ಷಕರು ಮತ್ತು ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಶ್ರೀರಾಮ ಸೇನೆ ವತಿಯಿಂದ ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆ, ರಾಮನಗರ ಉಪ ನಿರ್ದೇಶಕರಿಗೆ ದೂರು ಸಲ್ಲಿಸಲಾಗಿತ್ತು.

ದೂರಿನ ಆಧಾರದ ಮೇಲೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕಚೇರಿ ಸಿಬ್ಬಂದಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವುದೇ ರೀತಿ ಅಕ್ರಮ ಅಥವಾ ಭ್ರಷ್ಟಾಚಾರ ನಡೆದಿಲ್ಲ ಎಂಬುದಾಗಿ ಉತ್ತರವನ್ನು ಉಪನಿರ್ದೇಶಕರಿಗೆ ಸಲ್ಲಿಸಿದ್ದರು. ಆದರೆ ಶ್ರೀರಾಮ ಸೇನೆಯ ದೂರಿನ ಪ್ರಮುಖ ಉದ್ದೇಶವೇ ಸಂಬಂಧಪಟ್ಟ ಕಡತಗಳು, ದಾಖಲೆ ಹಾಗೂ ಕಚೇರಿ ವ್ಯವಹಾರ ಗಳನ್ನು ಪರಿಶೀಲಿಸಿ ವಾಸ್ತವಾಂಶ ಪತ್ತೆಹಚ್ಚುವುದು ಆಗಿತ್ತು. ಆದರೆ ಕಡತ ಮತ್ತು ದಾಖಲೆಗಳನ್ನು ಸಮಗ್ರ ವಾಗಿ ಪರಿಶೀಲಿಸದೆ, ಕೇವಲ ಆರೋಪಕ್ಕೆ ಒಳಗಾದ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ವಿವರಣೆ ಪಡೆದು ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸೂಚಿಸಿ ದೂರು ಮುಕ್ತಾಯಗೊಳಿಸಿರುವ ಕ್ರಮ ಬಗ್ಗೆ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ದೂರಿನಲ್ಲಿರುವ ಆರೋಪಗಳ ಕುರಿತು ಮತ್ತೊಮ್ಮೆ ಸ್ವತಂತ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಸಂಬಂಧಪಟ್ಟ ಸಂಪೂರ್ಣ ಕಡತ ಮತ್ತು ದಾಖಲೆ ಪರಿಶೀಲಿಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತರಿಗೆ COMPT/UPLOK/ BD/16809/2026 ಪ್ರಕರಣ ಸಂಖ್ಯೆ ಅಡಿಯಲ್ಲಿ ದೂರು ದಾಖಲಿಸಿರುವುದಾಗಿ ಶ್ರೀರಾಮ ಸೇನಾ ದಕ್ಷಿಣ ಪ್ರಾಂತ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗರ್ಜುನ ಗೌಡ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಸ್ಪತ್ರೆ, ಕಾಲೇಜು ಜಾಗದ ಖರಾಬು ಭೂಮಿ ಮಾಯ..!
ಭದ್ರಾ ನೀರಿನ ಚಳವಳಿಗೆ ಜಿಲ್ಲಾಡಳಿತ ತಡೆ