- ಪ್ರಭಾವಿಗಳ ಕೈಗೊಂಬೆಯಾಗಿರುವ ಅಧಿಕಾರಿಗಳ ವಿರುದ್ಧ ತನಿಖೆಯಾಗಬೇಕು: ಗೋವಿಂದ ಒತ್ತಾಯ
ಕನ್ನಡಪ್ರಭ ವಾರ್ತೆ ಹರಿಹರ
ನಗರದ ಗಾಂಧಿ ಮೈದಾನದಲ್ಲಿರುವ ತಾಲೂಕು ಕ್ರೀಡಾಂಗಣದ ವಾಣಿಜ್ಯ ಮಳಿಗೆಗಳ ಮರು ಹರಾಜು ಪ್ರಕ್ರಿಯೆ ಕ್ರೀಡಾ ಇಲಾಖೆ ಅಧಿಕಾರಿಗಳು ಪದೇಪದೇ ಮುಂದೂಡುತ್ತಿದ್ದಾರೆ. ಕರ್ತವ್ಯಲೋಪ ಎಸಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ಲೋಕಾಯುಕ್ತರಿಗೆ ದೂರು ನೀಡಲಾಗುವುದು ಎಂದು ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಎಸ್.ಗೋವಿಂದ ಹೇಳಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 48 ಮಳಿಗೆಗಳ ಬಾಡಿಗೆ ಕರಾರು ಅವಧಿ 2019ರ ಡಿಸೆಂಬರಲ್ಲೇ ಪೂರ್ಣಗೊಂಡಿದೆ. ಕ್ರೀಡಾ ಅಧಿಕಾರಿಗಳು ಅಂದೇ ಸ್ವಪ್ರೇರಿತರಾಗಿ ಎಲ್ಲ ಮಳಿಗೆಗಳ ಬಾಡಿಗೆದಾರರನ್ನು ಖಾಲಿ ಮಾಡಿಸಿ, ಹೊಸದಾಗಿ ನಿಯಮಾನುಸಾರ ಹರಾಜು ಪ್ರಕ್ರಿಯೆ ಕೈಗೊಳ್ಳಬೇಕಿತ್ತು. ಆದರೆ, ಅದಾಗಿಲ್ಲ. ಅಧಿಕಾರಿಗಳ ತಾತ್ಸಾರ ಧೋರಣೆಯಿಂದಾಗಿ ಸಂಘಟನೆಯಿಂದ 182 ದಿನಗಳಿಂದ ವಿವಿಧ ರೀತಿಯಲ್ಲಿ ಪ್ರತಿಭಟಿಸುತ್ತಿದ್ದೇವೆ ಎಂದರು.ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರ್ಕಾರಕ್ಕೆ ಲಕ್ಷಾಂತರ ರು. ನಷ್ಟವಾಗಿದೆ. ಅಧಿಕಾರಿಗಳು ಮಳಿಗೆ ಬಾಡಿಗೆದಾರರೊಂದಿಗೆ ಶಾಮೀಲಾಗಿ, ರಾಜಕೀಯ ಮುಖಂಡರ ಕೈಗೊಂಬೆಯಾಗಿದ್ದಾರೆ. ಈ ಹಿಂದೆ ಕೆಲ ಮಳಿಗೆ ಬಾಡಿಗೆದಾರರು ವಿವಿಧ ನ್ಯಾಯಾಲಯಗಳಲ್ಲಿ ಪ್ರಕರಣ ದಾಖಲಿಸಿದ್ದು, ಅವರನ್ನು ಹೊರತುಪಡಿಸಿ ಇನ್ನುಳಿದ ಮಳಿಗೆಗಳಿಗೆ ಮರುಹರಾಜು ಮಾಡಬೇಕು ಎಂದು ಕಿಡಿಕಾರಿದರು.
ತಾಲೂಕಿನ ಹಾಲಿ ಶಾಸಕರಾಗಲಿ, ಮಾಜಿ ಶಾಸಕರಾಗಲಿ, ಗ್ಯಾರಂಟಿ ಅನುಷ್ಠಾನ ಯೋಜನೆ ಅಧ್ಯಕ್ಷರಾಗಲಿ, ಪ್ರತಿಭಟನಾ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸದೇ ಇರುವುದು ವಿಪರ್ಯಾಸ. ಈ ಬಗ್ಗೆ ಸಂಘಟನೆಯಿಂದ ಹಲವಾರು ಬಾರಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೂ, ಮೇಲಧಿಕಾರಿಗಳಿಗೂ, ರಾಜಕೀಯ ಮುಖಂಡರಿಗೂ ಸರ್ಕಾರದ ಗಮನಕ್ಕೂ ತಂದು ಮನವಿ ಪತ್ರ ಸಲ್ಲಿಸಿದ್ದೇವೆ. ಕೆಲ ಪ್ರಭಾವಿ ಉದ್ಯಮಿದಾರರ ಪ್ರಭಾವದಿಂದ ಮರುಹರಾಜು ಮುಂದೂಡುತ್ತಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂಬ ಉದ್ದೇಶದಿಂದ ಲೋಕಾಯುಕ್ತರಿಗೆ ದೂರು ನೀಡುತ್ತಿದ್ದೇವೆ ಎಂದರು.
- - -
- ಎಸ್.ಗೋವಿಂದ, ತಾಲೂಕು ಅಧ್ಯಕ್ಷ
-04ಎಚ್ಆರ್ಆರ್01: