ಪ್ರಗತಿ ಹಂತದಲ್ಲಿರುವ ಎಲ್ಲ ಕಾರ್ಯಗಳನ್ನು ಪೂರ್ಣಗೊಳಿಸಿ

KannadaprabhaNewsNetwork |  
Published : Jan 06, 2024, 02:00 AM IST
ಹುಬ್ಬಳ್ಳಿಯ ತಾಲೂಕು ಆಡಳಿತ ಸೌಧದ ತಾಪಂ ಸಭಾಭವನದಲ್ಲಿ ಶುಕ್ರವಾರ ಪ್ರಗತಿ ಪರಿಶೀಲನಾ ಸಭೆ ಜರುಗಿತು. | Kannada Prabha

ಸಾರಾಂಶ

ಶುಕ್ರವಾರ ಇಲ್ಲಿನ ತಾಲೂಕು ಆಡಳಿತ ಸೌಧದ ತಾಪಂ ಸಭಾಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿ ಪೂರ್ಣಗೊಳಿಸಲು ಜಿಪಂ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಸೂಚಿಸಿದ್ದಾರೆ.

- ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ದೀಪಕ

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಇತರೆ ಇಲಾಖೆಯ ಅಧಿಕಾರಿಗಳೊಂದಿಗೆ ಕೈಜೋಡಿಸಿ ಪ್ರಗತಿ ಹಂತದಲ್ಲಿರುವ ಎಲ್ಲ ಕಾರ್ಯಗಳನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಿ ಎಂದು ಜಿಪಂ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಹೇಳಿದರು.

ಶುಕ್ರವಾರ ಇಲ್ಲಿನ ತಾಲೂಕು ಆಡಳಿತ ಸೌಧದ ತಾಪಂ ಸಭಾಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಹುಬ್ಬಳ್ಳಿ ಶಹರ ಹಾಗೂ ಗ್ರಾಮೀಣ ಕ್ಷೇತ್ರ ಶಿಕ್ಷಣ ಇಲಾಖೆಯು ಎಲ್ಲ ವರ್ಗದ ಮಕ್ಕಳಿಗೆ ಸಮವಸ್ತ್ರ, ಪಠ್ಯ ಪುಸ್ತಕಗಳ ವಿತರಣಾ ಕಾರ್ಯವನ್ನು ನಿಗಧಿತ ಸಮಯದಲ್ಲಿ ಕೈಗೊಳ್ಳಬೇಕು. ಗುಣಮಟ್ಟದ ಶೂಗಳನ್ನು ಖರೀದಿಸಿ ಮಕ್ಕಳಿಗೆ ನೀಡಬೇಕು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯವನ್ನು ನಿರ್ಮಿಸಿ ಸ್ವಚ್ಛತೆಯನ್ನು ಕಾಪಾಡಬೇಕು. ತಾಲೂಕು ಮಟ್ಟದಲ್ಲಿ ಸಾಕ್ಷಾರತಾ ಸಮೀಕ್ಷೆ ಕೈಗೊಂಡು ಶೀಘ್ರಗತಿಯಲ್ಲಿ ವರದಿ ಸಲ್ಲಿಸಬೇಕು ಎಂದರು.

ಎಲ್ಲ ಪಿಡಿಒಗಳು ಎಸ್.ಸಿ ಮತ್ತು ಎಸ್.ಟಿ. ಗಳಿಗೆ ಶೇ. 25 ಅನುದಾನದಲ್ಲಿ ಖರ್ಚು ಮಾಡಿದ ಮಾಹಿತಿಯನ್ನು ಸಮಾಜ ಕಲ್ಯಾಣ ಇಲಾಖೆಗೆ ನೀಡಬೇಕು. ಬರಗಾಲದ ಪರಿಸ್ಥಿತಿ ಉಂಟಾಗುವುದರಿಂದ ತಾಲೂಕಿನ ಎಲ್ಲ ಗ್ರಾಪಂಗಳಿಗೆ ವ್ಯವಸ್ಥಿತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಎಲ್ಲ ಗ್ರಾಪಂಗಳಿಗೆ ಭೇಟಿ ನೀಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಕೆರೆ, ಹಳ್ಳಗಳ ನೀರನ್ನು ಪರಿಶೀಲಿಸಬೇಕು. ಈ ವರ್ಷ ಮಳೆಯ ಪ್ರಮಾಣ ಕಡಿಮೆ ಇರುವುದರಿಂದ ಎಲ್ಲೆಡೆ ಕುಡಿಯುವ ನೀರಿನ ಅಭಾವ ಕಂಡುಬಂದಿದ್ದು, ನೀರನ್ನು ನಿಯಮಿತ ಮತ್ತು ಸುವ್ಯವಸ್ಥಿತವಾಗಿ ಸರಬರಾಜುಗೊಳಿಸಬೇಕು ಎಂದರು.

ಕೊರೋನಾ ಸಂಖ್ಯೆ ಮತ್ತೆ ಹೆಚ್ಚುತ್ತಿರುವುದರಿಂದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಪಂ ಇಒ ರಾಮಚಂದ್ರ ಹೊಸಮನಿ ಮಾತನಾಡಿದರು. ಈ ವೇಳೆ ಪಂಚಾಯತ ರಾಜ್ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ ಕುರ್ತಕೋಟಿ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಕರವೀರಮಠ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಜಗದೀಶ ಪಾಟೀಲ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ