ಕೆ.ಆರ್.ಪೇಟೆ:
ತಾಲೂಕಿನ ಚಟ್ಟೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ಮಕ್ಕಳು ಹಾಗೂ ಶಿಕ್ಷಕರು ಮತ್ತು ಶಾಲಾಭಿವೃದ್ಧಿ ಸಮಿತಿಯರೊಂದಿಗೆ ಸಭೆ ನಡೆಸಿ ಮಾತನಾಡಿ, ಸಾರ್ವಜನಿಕರು ತಮ್ಮ ಮಕ್ಕಳನ್ನು ತಪ್ಪದೇ ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು ಎಂದರು.
ಸರ್ಕಾರಿ ಶಾಲೆಯಲ್ಲಿ ಸಿಗುವ ಶಿಕ್ಷಣ ಮತ್ತು ಸವಲತ್ತುಗಳು ಖಾಸಗಿ ಶಾಲೆಗಳಲ್ಲಿಯೂ ದೊರೆಯುವುದಿಲ್ಲ. ಕೇವಲ ಆಂಗ್ಲ ಭಾಷ ವ್ಯಾಮೋಹಕ್ಕೆ ಒಳಗಾಗದೇ 10ನೇ ತರಗತಿವರೆಗೆ ಸರ್ಕಾರಿ ಶಾಲೆಯಲ್ಲಿ ಮಕ್ಕಳನ್ನು ದಾಖಲಿಸಿದರೆ ಅವರಿಗೆ ಮುಂದಿನ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಅನುಕೂಲವಾಗಲಿದೆ ಎಂದರು.ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ರುದ್ರೇಶ್, ಗ್ರಾಪಂ ಸದಸ್ಯ ಉದೇಶ, ಮಾಜಿ ಸದಸ್ಯ ನಾಗರಾಜು, ಶಿಕ್ಷಕರಾದ ಮಂಗಳಗೌರಿ, ರವಿಕುಮಾರ್ ಕುಮಾರ್ ಸೇರಿದಂತೆ ಮುಖಂಡರು ಇದ್ದರು.
ಹಲಗೂರು:
ಬೆಳಗ್ಗೆ 10.05ಕ್ಕೆ ಗುಡ್ಡಪ್ಪನವರಿಗೆ ಕಂಕಣ ಧಾರಣೆ, ನಂತರ ಹಾಲರವಿ ಸೇವೆ, ಶ್ರೀಶನೇಶ್ವರ ಸ್ವಾಮಿ ಮತ್ತು ಶ್ರೀಬಸಪ್ಪನವರ ಉತ್ಸವ, ನವಕರಗಗಳ ಉತ್ಸವ, ಭಕ್ತಾದಿಗಳಿಂದ ಎಳ್ಳು ಬತ್ತಿ, ಆರತಿ ಪೂಜೆ ಹಾಗೂ ಬಾಯಿ ಬೀಗ ನಡೆಸಲಾಗುತ್ತದೆ.
ದಳವಾಯಿ ಕೋಡಿಹಳ್ಳಿ, ಗುಂಡಾಪುರ, ಬಾಳೆಹೊನ್ನಿಗ, ದೇವಿರಹಳ್ಳಿ, ನಂದಿಪುರ, ಎಚ್.ಬಸಾಪುರ, ಹಗಾದೂರು, ಬಸವನಹಳ್ಳಿ, ಕೆಂಪಯ್ಯನ ದೊಡ್ಡಿ, ಹೊನ್ನಿಗನಹಳ್ಳಿ, ಹರಿಹರ, ಸಾಸಲಾಪುರ, ಕೆಂಪೇಗೌಡನ ದೊಡ್ಡಿ, ಲಿಂಗಪಟ್ಟಣ, ಹಲಗೂರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಅರ್ಚಕರಾದ ರಾಜು ಮನವಿ ಮಾಡಿದ್ದಾರೆ.
ಮೇಲುಕೋಟೆ: ಕಾರ್ತಿಕ ಮಾಸದ ರಾಜಮುಡಿ ಬ್ರಹ್ಮೋತ್ಸವ ಗುರುವಾರ ಮುಕ್ತಾಯವಾಗಿದೆ. ರಾಜಮುಡಿ ತಿರುವಾಭರಣ ಪೆಟ್ಟಿಗೆಯನ್ನು ಜಿಲ್ಲಾ ಖಜಾನೆಗೆ ಮರಳಿಸಲಾಯಿತು. 9 ದಿನಗಳಿಂದ ನಡೆಯುತ್ತಿದ್ದ ರಾಜಮುಡಿ ಬ್ರಹ್ಮೋತ್ಸವದ ಅಂತಿಮ ಕಿರೀಟಧಾರಣ ಕಾರ್ಯಕ್ರಮ ಬುಧವಾರ ನಡೆದ ತೀರ್ಥಸ್ನಾನದ ಕಾರ್ಯಕ್ರಮಗಳೊಂದಿಗೆ ಮುಕ್ತಾಯವಾಯಿತು. ಬ್ರಹ್ಮೋತ್ಸವದ ಅಷ್ಠತೀರ್ಥ ಮತ್ತು ತೊಟ್ಟಿಲಮಡು ಜಾತ್ರೆ ನಂತರದ ಶನಿವಾರ ಮತ್ತು ಭಾನುವಾರಗಳನ್ನು ಲಕ್ಷಾಂತರ ಭಕ್ತರು ಮೇಲುಕೋಟೆಗೆ ಆಗಮಿಸಿ ದರ್ಶನ ಪಡೆದರು.