ಸೂಕ್ತ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ । ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
ಜಿಲ್ಲೆಯಲ್ಲಿ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಇಲ್ಲಿನ ಲೋಕೋಪಯೋಗಿ ಭವನದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಜೆಜೆಎಂ ಯೋಜನೆಯನ್ನು ತ್ವರಿತ ಗತಿಯಲ್ಲಿ ಪೂರೈಸಬೇಕು. ಇಲ್ಲಿಯವರೆಗೆ ಶೇ.60 ರಿಂದ 70ರಷ್ಟು ಮಾತ್ರ ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿಗೆ ಸಂಬಂಧಿಸಿದಂತೆ ಅರಣ್ಯ ಸೇರಿಂದತೆ ಇತರೆ ವಿಷಯಗಳನ್ನು ಜಿಲ್ಲಾಧಿಕಾರಿ, ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಸರಿಪಡಿಸಿಕೊಂಡು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ಈ ಕುರಿತು ನಾನು ಸರ್ಕಾರದ ಕಾರ್ಯದರ್ಶಿಯವರೊಂದಿಗೆ ಮಾತನಾಡುತ್ತೇನೆ. ಮಾರ್ಚ್ ಅಂತ್ಯದೊಳಗೆ ಶೇ.95 ರಷ್ಟು ಕೆಲಸ ಆಗಬೇಕು ಎಂದು ಸೂಚಿಸಿದರು.ಶಿಕಾರಿಪುರ-ಸೊರಬ- ಆನವಟ್ಟಿ ಸೇರಿ 154 ಗ್ರಾಮಗಳಿಗೆ ನೀರು ನೀಡುವ ಬಹುಗ್ರಾಮ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಬಹುಗ್ರಾಮ ಮತ್ತು ಇತರೆ ಯೋಜನೆಗಳಿಗೆ ಒಳಪಡದ ಗ್ರಾಮಗಳನ್ನು ಸಹ ಗುರುತಿಸಿ ನೀರು ಕೊಡಲು ವ್ಯವಸ್ಥೆ ಮಾಡಬೇಕು. ಹಾಗೂ ಕುಂಸಿ ಬಹು ಗ್ರಾಮ ಯೋಜನೆಯನ್ನು ಕೈಗೆತ್ತಿಕೊಂಡು ಕಾರ್ಯಾರಂಭಿಸುವಂತೆ ತಿಳಿಸಿದರು.
ಕೆಎಫ್ಡಿ ಪ್ರಕರಣ ಹೆಚ್ಚಾಗದಂತೆ ತಡೆಗಟ್ಟಿ:
ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಕಾರ್ಯಪಾಲಕ ಅಭಿಯಂತರ ರೂಪ್ಲಾನಾಯ್ಕ ಮಾತನಾಡಿ, ಜಿಲ್ಲೆಯಲ್ಲಿ ಜೆಜೆಎಂ ಯೋಜನೆಯಡಿ ಶೇ. 67.5 ಪ್ರಗತಿ ಸಾಧಿಸಲಾಗಿದೆ. 2528 ಕಾಮಗಾರಿಗಳಲ್ಲಿ 1707 ಕಾಮಗಾರಿ ಪೂರ್ಣಗೊಂಡಿದ್ದು, 821 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.
ಜಿಲ್ಲಾಸ್ಪತ್ರೆಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ:
ಆದ್ದರಿಂದ ಜನರಿಗೆ ಅನುಕೂಲವಾಗುವಂತಹ ಸ್ಥಳದಲ್ಲಿ 400 ರಿಂದ 500 ಬೆಡ್ ಸಾಮರ್ಥ್ಯದ ಆಸ್ಪತ್ರೆ ನಿರ್ಮಿಸಲು ನಗರದಲ್ಲಿ ಒಂದು ಉತ್ತಮ ಜಾಗವನ್ನು ನೋಡಿ, ಯೋಜನೆ ರೂಪಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಇತರೆ ಅಧಿಕಾರಿಗಳೊಂದಿಗೆ ಚರ್ಚಿಸಿ ಒಂದು ಸೂಕ್ತ ಸ್ಥಳ ನೋಡಿ, ಯೋಜನೆ ರೂಪಿಸಿ, ಪ್ರಸ್ತಾವನೆ ಸಲ್ಲಿಸುವಂತೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.