ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ವಿದ್ಯಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯ್ತಿಯಿಂದ ನಡೆದ ಮತಗಟ್ಟೆ ಅಧಿಕಾರಿಗಳಿಗೆ ಎಸ್ಐಆರ್ 2ನೇ ಹಂತದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯವನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಮತದಾರರ ಹೆಸರು ಸೇರ್ಪಡೆ, ಹೆಸರು ಕೈಬಿಡುವಿಕೆ, ತಿದ್ದುಪಡಿ ಹಾಗೂ ವಿಳಾಸ ಬದಲಾವಣೆ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ಚುನಾವಣಾ ಆಯೋಗದ ಮಾರ್ಗಸೂಚಿಗಳ ಅನುಸಾರ ಪಾರದರ್ಶಕವಾಗಿ ಮತ್ತು ನಿಖರವಾಗಿ ಕೈಗೊಳ್ಳುವಂತೆ ತಿಳಿಸಿದರು.
ಕಾರ್ಯಾಗಾರದಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಬಿಎಲ್ ಒ, ಮೇಲ್ವಿಚಾರಕರು, ನೂಡಲ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿಗೆ ಅರ್ಜಿ ನಮೂನೆಗಳ ನಿರ್ವಹಣೆ, ದಾಖಲೆಗಳ ಪರಿಶೀಲನೆ, ಮತದಾರರ ಮಾಹಿತಿಯ ದೃಢೀಕರಣ, ಆನ್ಲೈನ್ ಸೇವೆಗಳ ಬಳಕೆ ಹಾಗೂ ಚುನಾವಣಾ ಆಯೋಗದ ಇತ್ತೀಚಿನ ನಿರ್ದೇಶನಗಳ ಕುರಿತು ಸಮಗ್ರ ಮಾಹಿತಿ ನೀಡಲಾಯಿತು.
ಈ ವೇಳೆ ತಹಸೀಲ್ದಾರ್ ಎಸ್.ವಿ.ಲೋಕೇಶ್, ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಮತ್ತು ತಾಲೂಕು ಮತದಾರರ ನೋಂದಣಿ ಅಧಿಕಾರಿ ಪ್ರತೀಕ್ ಜಿ ಹೆಗ್ಡೆ, ಶಿರಸ್ತೇದಾರ್ ನಾಗಮಣಿ, ತಾಲೂಕು ಕಚೇರಿ ಚುನಾವಣಾ ಶಾಖೆ ಕೆ.ಜಿ.ಶ್ರೀನಿವಾಸ್ ಮೂರ್ತಿ, ಬಿ.ಚೇತನ್, ಪ್ರಜ್ವಲ್ ಮತ್ತು ಸಹನಾ ಜೊತೆಗೆ ವಿದ್ಯಾ ಪ್ಯಾರಾ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಚಂದ್ರ ಮೋಹನ್ ಸೇರಿದಂತೆ ಇತರರು ಇದ್ದರು.