ಲಕ್ಷ್ಮೇಶ್ವರ: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಬಡವರ ಪರವಾಗಿರುವ ಈ ಇಂದಿರಾ ಕ್ಯಾಂಟಿನ್ ಕಾಮಗಾರಿ ಆದಷ್ಟು ಬೇಗ ಗುಣಮಟ್ಟದಿಂದ ಪೂರ್ಣಗೊಳಿಸಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಹೇಳಿದರು.
ಪುರಸಭೆಯ ಮುಖ್ಯಾಧಿಕಾರಿ ಮಹೇಶ ಹಡಪದ ಕಾಮಗಾರಿಯ ಕುರಿತು ಮಾಹಿತಿ ನೀಡಿ, ಇಂದಿರಾ ಕ್ಯಾಂಟಿನ್ಗೆ ಸಂಬಂಧಿಸಿದಂತೆ ಕಾಮಗಾರಿ ಶೇ.90 ರಷ್ಟು ಮುಗಿದಿದೆ. ನೆಲಕ್ಕೆ ಕಾಂಕ್ರೀಟ್ ಹಾಕುವುದು, ಸುತ್ತಲೂ ಗೋಡೆ ನಿರ್ಮಿಸುವುದು ಮುಗಿಸಿದ್ದೇವೆ. ಉಳಿದ ಕೆಲಸ ಶೀಘ್ರ ಮಾಡುತ್ತೇವೆ ಎಂದು ತಿಳಿಸಿದರು.
ಪುರಸಭೆ ಸದಸ್ಯ ಮಹೇಶ ಹೊಗೆಸೊಪ್ಪಿನ ಮಾತನಾಡಿ, ಲಕ್ಷ್ಮೇಶ್ವರದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಒದಗಿಸಬೇಕು ಎಂದು ಕೈ ಮುಗಿದು ಮನವಿ ಮಾಡಿ, ಅಮೃತ ಯೋಜನೆ ಕುಡಿಯುವ ನೀರಿಗೆ ಇಡಲಾಗಿರುವ ಹಣ ವಿನಿಯೋಗಿಸಿ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಿ ಸಂಬಂಧ ಪಟ್ಟವರಿಗೆ ನಿರ್ದೇಶಿಸಬೇಕು ಎಂದರು.ಈ ವೇಳೆ ಮಾಜಿ ಶಾಸಕರಾದ ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ಪುರಸಭೆ ಅಧ್ಯಕ್ಷೆ ಯಲ್ಲವ್ವ ದುರಗಣ್ಣನವರ, ಉಪಾಧ್ಯಕ್ಷ ಫಿರ್ದೋಷ ಅಡೂರ, ಸದಸ್ಯರಾದ ಬಸವರಾಜ ಓದುನವರ, ಪ್ರವೀಣ ಬಾಳಿಕಾಯಿ, ಮುಸ್ತಾಕ್ ಅಹ್ಮದ ಶಿರಹಟ್ಟಿ, ಸಿಕಂದರ್ ಕಣಕೆ, ಆರೋಗ್ಯ ನಿರೀಕ್ಷಕ ಮಂಜುನಾಥ ಮುದಗಲ್, ಗುರುನಾಥ ದಾನಪ್ಪನವರ, ಚೆನ್ನಪ್ಪ ಜಗಲಿ, ರಫೀಕ ಕಲಬುರ್ಗಿ, ದೀಪಕ್ ಲಮಾಣಿ, ಫಕ್ಕೀರೇಶ ನಂದೆಣ್ಣನವರ, ದಾದಪೀರ್ ಮುಚ್ಚಾಲೆ, ಅಣ್ಣಪ್ಪ ರಾಮಗೇರಿ, ತಿಪ್ಪಣ್ಣ ಸಂಶಿ, ಸಿದ್ದು ದುರಗಣ್ಣವರ ಸೇರಿದಂತೆ ಮುಂತಾದವರು ಇದ್ದರು.