ವರ್ಷಾಂತ್ಯದೊಳಗೆ ಬಾಕಿ ಕೆಲಸ ಪೂರ್ಣಗೊಳಿಸಿ

KannadaprabhaNewsNetwork |  
Published : Nov 13, 2025, 04:15 AM IST
ಕ್ಷೇತ್ರದಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಬರುವ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಮೂಡಲಗಿ ಕ್ಷೇತ್ರದಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಮೂಡಲಗಿ

ಕ್ಷೇತ್ರದಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೊರವಲಯದ ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಬುಧವಾರ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅರಭಾವಿ ಕ್ಷೇತ್ರದ ಸುಮಾರು 20 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷೆ ಯೋಜನೆಗೆ ಶಿಲಾನ್ಯಾಸ ನೆರವೇರಿಸಲಾಗಿದೆ. ಇದಕ್ಕಾಗಿ ನೀರಾವರಿ ಇಲಾಖೆಯಿಂದ ಮೊದಲ ಹಂತದ ಕಾಮಗಾರಿಗಾಗಿ ಸುಮಾರು ₹ 192.30 ಕೋಟಿ ಅನುದಾನ ಮಂಜೂರಾಗಿದೆ. ಪ್ರಸ್ತುತ 7 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಎರಡನೇ ಹಂತದ 13 ಕೆರೆಗಳನ್ನು ತುಂಬಿಸಲಿಕ್ಕೆ ₹ 131.57 ಕೋಟಿ ಅನುದಾನವು ಬರಬೇಕಿದೆ. ಮುಂದಿನ 2026 ನೇ ಸಾಲಿನಲ್ಲಿ ಮೊದಲ ಹಂತದ ಕಾಮಗಾರಿಗಳು ಮುಗಿಯಲಿದ್ದು, ಎರಡನೇ ಹಂತದ ಕಾಮಗಾರಿಗಳು ಮುಗಿಯಲಿಕ್ಕೆ ಎರಡು ವರ್ಷ ಬೇಕಾಗಬಹುದು. ಈಗಿರುವ ಕಾಮಗಾರಿ ಪೂರ್ಣಗೊಳಿಸಿ ರೈತರಿ ಅನುಕೂಲ ಮಾಡಿಕೊಡುವಂತೆ ಸೂಚಿಸಿದರು.

ಆರ್‌ಡಿಪಿಆರ್‌ ಇಲಾಖೆಯ ಅನುದಾನದಡಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಾಗಿ ಒಟ್ಟು ₹ 475 ಕೋಟಿ ಬಿಡುಗಡೆಯಾಗಿದೆ. ₹ 388 ಕೋಟಿ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಇದರಿಂದ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಸುಮಾರು 148 ಜನ ವಸತಿಗಳಿಗೆ ಅನುಕೂಲವಾಗಲಿದೆ. ಇದನ್ನು ಸಹ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ರಸ್ತೆಗಳ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ₹ 30 ಕೋಟಿ ಅನುದಾನ ಬಂದಿದ್ದು, ಇನ್ನೂ ₹ 20 ಕೋಟಿ ಅನುದಾನ ಬರಬೇಕಿದೆ. ಈ ಅನುದಾನ ಬೇಗ ಬಿಡುಗಡೆಯಾದರೆ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಮೇಲಾಧಿಕಾರಿಗಳಿಗೆ ಅಗತ್ಯ ಅನುದಾನದ ಪ್ರಸ್ತಾವನೆ ಸಲ್ಲಿಸುವಂತೆ ಹೇಳಿದರು.ಕಚೇರಿಗಳ ಅಲೆದಾಟವನ್ನು ತಪ್ಪಿಸಲು ಆದಷ್ಟು ಸ್ಥಳೀಯವಾಗಿ ಜನರ ಕೆಲಸಗಳನ್ನು ಮಾಡಿಕೊಡುವಂತೆ ಸೂಚಿಸಿದ ಅವರು, ರೈತಾಪಿ ಕುಟುಂಬಗಳಿಗೆ ಅಗತ್ಯವಿರುವ ಎಲ್ಲ ಸರ್ಕಾರಿ ಸೌಲಭ್ಯಗಳನ್ನು ದೊರಕಿಸಿಕೊಡಬೇಕು. ಕೃಷಿ ಮತ್ತು ತೋಟಗಾರಿಕೆಯಿಂದ ರೈತರಿಗೆ ತೊಂದರೆಯಾದರೆ ನಾನು ಸಹಿಸುವುದಿಲ್ಲ. ಅಧಿಕಾರಿಗಳೇನೂ ಮೇಲಿಂದ ಬಿದ್ದಿಲ್ಲವೆಂದು ಎಚ್ಚರಿಕೆ ನೀಡಿದರು. ಇದೇ ಸಂದರ್ಭದಲ್ಲಿ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಸಭೆಯಲ್ಲಿ ಮೂಡಲಗಿ ತಹಸೀಲ್ದಾರ್‌ ಶ್ರೀಶೈಲ ಗುಡುಮೆ, ಗೋಕಾಕ ತಹಸೀಲ್ದಾರ್‌ ಡಾ.ಮೋಹನ ಭಸ್ಮೆ, ಮೂಡಲಗಿ ತಾಪಂ ಇಒ ಫಕೀರಪ್ಪ ಚಿನ್ನನ್ನವರ, ಗೋಕಾಕ ತಾಪಂ ಇಒ ಪರಶುರಾಮ ಗಸ್ತೆ, ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.ಕೋಟ್‌ಗ್ರಾಮ ಪಂಚಾಯತಿಗಳಿಗೆ ಡಿಸೆಂಬರ್ ಅಥವಾ ಜನೇವರಿ ತಿಂಗಳಲ್ಲಿ ಚುನಾವಣೆ ಘೋಷಣೆಯಾಗಬಹುದು. ಈ ಹಿನ್ನೆಲೆಯಲ್ಲಿ ಸ್ಥಳೀಯ ಮಟ್ಟದಲ್ಲಿ ಬಾಕಿ ಉಳಿದ ಕಾಮಗಾರಿಗಳನ್ನು ಶೀಘ್ರ ಮುಗಿಸಬೇಕು. ಸ್ಥಳೀಯ ಮೂಲಭೂತ ಸೌಕರ್ಯಗಳನ್ನು ನೀಗಿಸಲು ಮುಂದಾಗಬೇಕು. ಜನರಿಗೆ ತೊಂದರೆಯಾಗದಂತೆ ಕೆಲಸ ಮಾಡಬೇಕಿದೆ. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡಬೇಕು.ಬಾಲಚಂದ್ರ ಜಾರಕಿಹೊಳಿ, ಶಾಸಕ

PREV

Recommended Stories

''44 ವರ್ಷದ ದುಡಿಮೆಗೆ ಸಚಿವಗಿರಿಯ ಪ್ರತಿಫಲ ಬಯಸಿದ್ದೇನೆ''
ವ್ಯಕ್ತಿತ್ವ ವಿಕಸನಕ್ಕೆ ಪ್ರತಿಭಾಕಾರಂಜಿ ಪೂರಕ