ವರ್ತುಳ ರಸ್ತೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ

KannadaprabhaNewsNetwork |  
Published : Aug 03, 2024, 12:38 AM IST
ಬೆಳಗಾವಿ ಸಂಸದರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು | Kannada Prabha

ಸಾರಾಂಶ

ಬೆಳಗಾವಿ ನಗರದ ಸುತ್ತಲಿನಲ್ಲಿ ರಿಂಗ್ ರೋಡ್ ಅಭಿವೃದ್ಧಿ ಕಾಮಗಾರಿಯ ಭೂ ಸ್ವಾಧೀನ ಪ್ರಕ್ರಿಯೆಯನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಸದ ಜಗದೀಶ ಶೆಟ್ಟರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ನಗರದ ಸುತ್ತಲಿನಲ್ಲಿ ರಿಂಗ್ ರೋಡ್ ಅಭಿವೃದ್ಧಿ ಕಾಮಗಾರಿಯ ಭೂ ಸ್ವಾಧೀನ ಪ್ರಕ್ರಿಯೆಯನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಸದ ಜಗದೀಶ ಶೆಟ್ಟರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಮತ್ತು ನೈರುತ್ಯ ರೈಲ್ವೆ ವಲಯದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು, ಬೆಳಗಾವಿ-ಹುನಗುಂದ-ರಾಯಚೂರು ಮಾರ್ಗದ ರಸ್ತೆ ನಿರ್ಮಾಣದ ಕುರಿತು ಹಾಗೂ ನೈರುತ್ಯ ರೈಲ್ವೆ ವಲಯಕ್ಕೆ ಸಂಬಂಧಿಸಿದಂತೆ ಬೆಳಗಾವಿ-ಕಿತ್ತೂರು-ಧಾರವಾಡ ನೂತನ ರೈಲ್ವೆ ನಿರ್ಮಾಣ ಹಂತದ ಪ್ರಕ್ರಿಯೆ ಕುರಿತು ಚರ್ಚಿಸಿ ಭೂಸ್ವಾಧೀನವನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಸೂಚಿಸಿದರು.

ಬೆಳಗಾವಿ ನಗರದ ರಸ್ತೆ ಮೇಲ್ ಸೇತುವೆ ನಿರ್ಮಾಣದ ಕಾಮಗಾರಿ ಪ್ರಗತಿ ಕುರಿತು ಚರ್ಚೆ ನಡೆಸಿ, ರೈಲ್ವೆ 3ನೇ ಗೇಟ್ ಹತ್ತಿರ ನಿರ್ಮಾಣಗೊಳ್ಳುತ್ತಿರುವ ಕಾಮಗಾರಿ ಅರ್ಧಕ್ಕೆ ನಿಂತಿರುವ ವಿಷಯವನ್ನು ಪ್ರಸ್ತಾಪಿಸಿ ಕೂಡಲೇ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ಉಪ ಪೊಲೀಸ್ ಆಯುಕ್ತ ಜಗದೀಶ್ ರೋಹನ್. ಮಹಾನಗರ ಪಾಲಿಕೆಯ ಆಯುಕ್ತ ಅಶೋಕ ದುಡಗುಂಟಿ, ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಭುವನೇಶ್ವರ್ ಕುಮಾರ್, ಭೂಸ್ವಾಧೀನ ಅಧಿಕಾರಿ ಚವಾಣ್‌, ನೈರುತ್ಯ ರೈಲ್ವೆ ವಲಯದ ಅಧಿಕಾರಿ ವಿನಯ್ ಕುಮಾರ್, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಸಬರದ, ರೈಲ್ವೆ ಲೈನ್ ಭೂ ಸ್ವಾಧೀನ ಅಧಿಕಾರಿ ಮಾರುತಿ ಬ್ಯಾಕೋಡ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಾವುದೇ ವಿದ್ಯೆ ಆಗಲಿ, ಸಾಧಿಸುವ ಛಲ ಇರಲಿ: ಹಾಸನ ರಘು
ಪಾವಿನಕುರ್ವಾ ಜನತೆಗೆ ಸಿಕ್ಕಿಲ್ಲ ಸೇತುವೆ ಭಾಗ್ಯ