ಡಿಸೆಂಬರ್‌ ಒಳಗೆ ಹುಬ್ಬಳ್ಳಿ ಹಳೆ ಬಸ್‌ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಿ

KannadaprabhaNewsNetwork |  
Published : Nov 21, 2024, 01:02 AM IST
ಹಳೇ ಹುಬ್ಬಳ್ಳಿ ಬಸ್‌ ನಿಲ್ದಾಣಕ್ಕೆ ಬುಧವಾರ ಶಾಸಕ ಮಹೇಶ ಟೆಂಗಿನಕಾಯಿ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. | Kannada Prabha

ಸಾರಾಂಶ

ಬಸ್‌ ನಿಲ್ದಾಣಧ ಮುಂಭಾಗದಲ್ಲಿರುವ ಮುಖ್ಯ ರಸ್ತೆಯಲ್ಲಿ ನಿತ್ಯ ಸಂಚಾರ ಮತ್ತು ಜನದಟ್ಟಣೆ ಇದ್ದು ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು. ಜತೆಗೆ ಬಸ್‌ ನಿಲ್ದಾಣದಲ್ಲಿ ಸಂಪೂರ್ಣ ಸಿಸಿ ಕ್ಯಾಮೆರಾ ಅಳವಡಿಸಬೇಕು.

ಹುಬ್ಬಳ್ಳಿ:

ಇಲ್ಲಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಬಳಿ ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಿಸುತ್ತಿರುವ ನಗರ ಮತ್ತು ಉಪನಗರ ಸಾರಿಗೆ ಬಸ್ ನಿಲ್ದಾಣದ (ಹಳೇ ಬಸ್ ನಿಲ್ದಾಣ) ಕಟ್ಟಡದ ಕಾಮಗಾರಿಯನ್ನು ಶಾಸಕ ಮಹೇಶ ಟೆಂಗಿನಕಾಯಿ ಬುಧವಾರ ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ಬಸ್‌ ನಿಲ್ದಾಣ ಕಾಮಗಾರಿಯ ವೇಗ ಹೆಚ್ಚಿಸಬೇಕಿದ್ದು, ಡಿಸೆಂಬರ್‌ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸ್ಮಾರ್ಟ್‌ಸಿಟಿ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರದಿಗೆ ಸೂಚಿಸಿದರು.

ಬಸ್‌ ನಿಲ್ದಾಣಧ ಮುಂಭಾಗದಲ್ಲಿರುವ ಮುಖ್ಯ ರಸ್ತೆಯಲ್ಲಿ ನಿತ್ಯ ಸಂಚಾರ ಮತ್ತು ಜನದಟ್ಟಣೆ ಇದ್ದು ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು. ಜತೆಗೆ ಬಸ್‌ ನಿಲ್ದಾಣದಲ್ಲಿ ಸಂಪೂರ್ಣ ಸಿಸಿ ಕ್ಯಾಮೆರಾ ಅಳವಡಿಸಬೇಕು. ಪ್ರಯಾಣಿಕರ ಭದ್ರತೆ ಸೇರಿದಂತೆ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಬಸ್‌ ನಿಲ್ದಾಣದಲ್ಲಿ ಒಂದು ಭಾಗದಲ್ಲಿ ಆಟೋಗಳ ನಿಲುಗಡೆಗೆ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಈ ವೇಳೆ ಸ್ಮಾರ್ಟ್‌ಸಿಟಿ ಎಂಡಿ ರುದ್ರೇಶ ಗಾಳಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಾದ ಶ್ರೀನಿವಾಸ, ವಿವೇಕಾನಂದ, ಸಿದ್ಧಲಿಂಗೇಶ ಹಾಗೂ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ