ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಸಿ: ಗಿತ್ತೆ ವಿಠಲರಾವ್

KannadaprabhaNewsNetwork |  
Published : Nov 26, 2025, 02:00 AM IST
25 HRR. 01ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೋಮವಾರ ಜಿಲ್ಲಾ ಪಂಚಾಯ್ತಿ ಸಿಇಒ ಗಿತ್ತೆ ಮಾಧವ ವಿಠಲರಾವ್ ಭೇಟಿ ನೀಡಿ ಪರಿಶೀಲಿಸಿದರು. ತಾಪಂ ಎಡಿ ಸುನೀಲ್ ಕುಮಾರ್, ಪಿಡಿಒ ರುಬಿಯಾ ನಾಜ್ ಹಾಗೂ ಇತರರು ಇದ್ದರು.  | Kannada Prabha

ಸಾರಾಂಶ

ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ, ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕೆಂದರು ಜಿಲ್ಲಾ ಪಂಚಾಯ್ತಿ ಸಿಇಒ ಗಿತ್ತೆ ಮಾಧವ ವಿಠಲರಾವ್ ಸೂಚಿಸಿದರು.

ಹರಿಹರ: ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ, ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕೆಂದರು ಜಿಲ್ಲಾ ಪಂಚಾಯ್ತಿ ಸಿಇಒ ಗಿತ್ತೆ ಮಾಧವ ವಿಠಲರಾವ್ ಸೂಚಿಸಿದರು.

ತಾಲೂಕಿನ ಕೊಂಡಜ್ಜಿ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಸ್ತೆ, ಚರಂಡಿ, ಕಿರು ನೀರು ಸರಬರಾಜು ಕೇಂದ್ರ ಸೇರಿ ಯಾವುದೇ ಕಾಮಗಾರಿಗಳಿದ್ದರೂ ಅರ್ಧಕ್ಕೆ ನಿಲ್ಲಿಸುವುದು, ನಿಧಾನಗತಿ ಮಾಡುವುದನ್ನು ಸಹಿಸಲಾಗುವುದಿಲ್ಲ ಎಂದರು.

ನಂತರ ಗ್ರಾಮದ ಗ್ರಾಮ ಪಂಚಾಯ್ತಿ, ಗ್ರಂಥಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ, ಪೊಲೀಸ್ ಪಬ್ಲಿಕ್ ಶಾಲೆ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ತರಬೇತಿ ಶಿಬಿರ, ಆಂಜನೇಯ ಸಮುದಾಯ ಭವನ, ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಕುಮಾರ್, ನಾರಪ್ಪ, ತಾಲೂಕು ಪಂಚಾಯ್ತಿಯ ಪ್ರಭಾರಿ ಸಹಾಯಕ ನಿರ್ದೇಶಕ ಸುನೀಲ್ ಕುಮಾರ್, ಪಿಡಿಒ ರುಬಿಯಾ ನಾಜ್ ಎಚ್.ಆರ್., ನರೇಗಾ ಇಂಜಿನಿಯರ್ ರಂಗನಾಥ್, ಶ್ರೀನಿವಾಸ್ ಬಾಬು, ಗ್ರಾಮದ ಮುಖಂಡರಾದ ಗೌಡರ ಪ್ರಸನ್ನ, ದೇವರಾಜ್ ತೋಟಿಗರ, ಮುದೇಗೌಡ್ರ ಪರಮೇಶ್ವರಪ್ಪ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಂದಾರ ಶಾಲೆಯಲ್ಲಿ ಸುಗ್ಗಿ ಹಬ್ಬದ ಸಂಭ್ರಮ
ಮೂಡುಬಿದಿರೆ ಸಿಂಥೆಟಿಕ್ ಟ್ರ್ಯಾಕ್ ಗೆ 11 ವರ್ಷ ಕ್ರೀಡಾಭಿಮಾನಿಗಳ ಹರ್ಷ