ಚುನಾವಣಾ ಆಯೋಗದ ಮಾರ್ಗಸೂಚಿ ಪಾಲನೆ ಕಡ್ಡಾಯ: ಹಿತೇಶ್ ಕೋಯಲ್

KannadaprabhaNewsNetwork |  
Published : Apr 08, 2024, 01:05 AM IST
ಹಿತೇಶ್7 | Kannada Prabha

ಸಾರಾಂಶ

ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭೆ ಚುನಾವಣೆ ಸಿದ್ಧತೆ ಸಭೆ ನಡೆಯಿತು. ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ವೀಕ್ಷಕ ಹಿತೇಶ್ ಕೆ ಕೋಯಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಲೋಕಸಭಾ ಚುನಾವಣೆ ಪಾರದರ್ಶಕವಾಗಿ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಭಾರತೀಯ ಚುನಾವಣಾ ಆಯೋಗದ ನಿಯಮಾನುಸಾರ ಜರುಗಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ವೀಕ್ಷಕ ಹಿತೇಶ್ ಕೆ ಕೋಯಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಭಾನುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭೆ ಚುನಾವಣೆ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ತಡೆಗೆ ರೂಪಿಸಿರುವ ವಿವಿಧ ತಂಡಗಳ ಅಧಿಕಾರಿಗಳಿಗೆ ಹಾಗೂ ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡಿರುವ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಗೆ ತರಬೇತಿ ನೀಡುವಾಗ ಎಲ್ಲ ರೀತಿ ಸಾಧಕ ಭಾದಕಗಳ ಕುರಿತು ಸವಿಸ್ತಾರ ಮಾಹಿತಿಯನ್ನು ನೀಡಬೇಕು ಎಂದು ಸಲಹೆ ನೀಡಿದರು.

ಮತಯಂತ್ರಗಳ ಲಭ್ಯತೆ, ವಿಧಾನಸಭೆ ಕ್ಷೇತ್ರವಾರು ವಿತರಣೆ ಸೇರಿದಂತೆ ಮತ್ತಿತರ ಸಿದ್ಧತೆ ಕುರಿತು ಮಾಹಿತಿ ಪಡೆದು ಮಾತನಾಡಿ, ಮತಯಂತ್ರಗಳ ನಿರ್ವಹಣೆ ವ್ಯವಸ್ಥಿತವಾಗಿ ಆಗಬೇಕು ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡದಂತೆ ಜಾಗೃತಿ ವಹಿಸಬೇಕೆಂದು ಸೂಚನೆ ನೀಡಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕ ಅಲೋಕ್ ಕುಮಾರ್ ಮಾತನಾಡಿ, ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಲು ಎಲ್ಲ ಅಧಿಕಾರಿಗಳು ಸಮನ್ವದೊಂದಿಗೆ ಕಾರ್ಯನಿರ್ವಹಿಸಬೇಕು. ಚುನಾವಣೆ ಆಯೋಗ ನೀಡಿರುವ ನಿರ್ದೇಶನಗಳನ್ನು ಚಾಚು ತಪ್ಪದೇ ಪಾಲಿಸಬೇಕು. ನಿಗದಿತ ನಮೂನೆಗಳ ದಾಖಲೆಗಳನ್ನು ನಿರ್ವಹಣೆ ಮಾಡಬೇಕು ಎಂದರು.

ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಮಾತನಾಡಿ, ಜಿಲ್ಲೆಯ ಮತದಾರರ ವಿವರ, ಮತಗಟ್ಟೆಗಳ ಸಂಖ್ಯೆ, ಚುನಾವಣಾ ಕಾರ್ಯಗಳಿಗೆ ನಿಯೋಜಿಸಿಕೊಂಡ ಅಧಿಕಾರಿಗಳ ಹಾಗೂ ಸಿಬ್ಬಂದಿಯ ವಿವರ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಯಲು ರೂಪಿಸಿದ ವಿವಿಧ ತಂಡಗಳ ವಿವರ, ಚೆಕ್ಪೋಸ್ಟ್ ನಿರ್ಮಾಣ ಮಾಡಿರುವ ಬಗ್ಗೆ, ಇ.ವಿ.ಎಂ ಹಂಚಿಕೆ ಸೇರಿದಂತೆ ನ್ಯಾಯ ಸಮ್ಮತ ಚುನಾವಣೆ ನಡೆಸಲು ಮಾಡಿಕೊಂಡಿರುವ ತಯಾರಿಗಳ ವಿವರಗಳನ್ನು ಸವಿಸ್ತಾರವಾಗಿ ವಿವರಿಸಿದರು ಹಾಗೂ ಚುನಾವಣೆಯಲ್ಲಿ ಮತದಾನವನ್ನು ಹೆಚ್ಚಿಸಲು ಕೈಗೊಂಡಿರುವ ಜಾಗೃತಿ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.

ಸಭೆಯಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನವಣಾಧಿಕಾರಿ ಮೀನಾ ನಾಗರಾಜ್, ಪೊಲೀಸ್ ವೀಕ್ಷಕಿ ಬಿನಿತ ಠಾಕೂರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್, ಚಿಕ್ಕಮಗಳೂರು ಜಿಲ್ಲೆಯ ಸಿ.ಇ.ಒ. ಗೋಪಾಲಕೃಷ್ಣ ಬಿ., ಉಡುಪಿ ಎಸ್ಪಿ ಡಾ. ಅರುಣ್ ಕೆ., ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಾಠೆ, ಕರಾವಳಿ ಕಾವಲು ಪಡೆಯ ಎಸ್ಪಿ ಮಿಥುನ್ ಎಚ್.ಎನ್., ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಡಿ.ಎಫ್.ಓ. ಗಣಪತಿ, ಜಿಲ್ಲಾ ಮಟ್ಟದ ವಿವಿಧ ನೋಡಲ್ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆ್ಯಸಿಡ್‌ ದಾಳಿ ಸಂತ್ರಸ್ತರಿಗೆ ಮಾಸಿಕ 50 ಸಾವಿರ ಪಿಂಚಣಿ : ಪರಂ ಭರವಸೆ
5 ಪಾಲಿಕೆಗೆ ಜಿಎಸ್‌ಟಿಯಲ್ಲಿ ಪಾಲು ಕೊಡಲು ಆಯೋಗ ಶಿಫಾರಸು