ಕನ್ನಡಪ್ರಭ ವಾರ್ತೆ ಹೊಸಕೋಟೆ
ತಾಲೂಕಿನ ಕಸಬಾ ಹೋಬಳಿಯ ವಾಬಸಂದ್ರ ಹಾಗೂ ಲಕ್ಕೊಂಡಹಳ್ಳಿ ಗ್ರಾಮಗಳಲ್ಲಿ ಸುಮಾರು ೮೦ ಲಕ್ಷ ರು. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಪಂಚ ಗ್ಯಾರಂಟಿಗಳ ಅನುಷ್ಠಾನದ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ, ಜನಪರ ಆಡಳಿತ ನೀಡುವಲ್ಲಿ ಪ್ರಾಮಾಣಿಕ ಕೆಲಸ ಮಾಡುತ್ತಿದೆ. ಕೊಟ್ಟ ಆಶ್ವಾಸನೆಯಂತೆ ೫ ಗ್ಯಾರಂಟಿಗಳನ್ನು ಜನರಿಗೆ ತಲುಪಿಸುತ್ತಿದ್ದು, ಅಗತ್ಯ ಮೂಲಭೂತ ಸೌಕರ್ಯಗಳನ್ನು ಸಹ ಕಲ್ಪಿಸಲು ಅನುದಾನ ನೀಡುತ್ತಿದೆ. ಪ್ರಮುಖವಾಗಿ ಮುಖ್ಯಮಂತ್ರಿಗಳ ವಿಶೇಷ ಅನುದಾನವನ್ನು ಶಾಸಕರಿಗೆ ನೀಡುತ್ತಿದ್ದು, ಅಗತ್ಯವಾದ ಚರಂಡಿ, ಸಿಸಿ ರಸ್ತೆ ನಿರ್ಮಾಣಕ್ಕೆ ಸಹಕಾರಿಯಾಗಿದೆ ಎಂದರು.ಹೊಸಕೋಟೆ ನಗರದಲ್ಲಿ ನೂರು ಕೋಟಿ ರು. ವೆಚ್ಚದಲ್ಲಿ ಭೂಗತ ಕೇಬಲ್ ಅಳವಡಿಕೆ ಮಾಡುವ ಕಾಮಗಾರಿ ನಡೆಯುತ್ತಿದ್ದು, ತ್ವರಿತವಾಗಿ ಕಾಮಗಾರಿ ಸಹ ಪೂರ್ಣಗೊಳ್ಳಲಿದ್ದು, ಗುಣಮಟ್ಟದ ವಿದ್ಯುತ್ ಸರಬರಾಜು ನಗರದ ನಾಗರಿಕರಿಗೆ ಲಭ್ಯವಾಗಲಿದೆ ಎಂದರು.
ರಾಜ್ಯ ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕ ಬಿ.ಎನ್.ಗೋಪಾಲಗೌಡ, ಜಿಪಂ ಮಾಜಿ ಅಧ್ಯಕ್ಷ ಸಿ.ಮುನಿಯಪ್ಪ, ಲಕ್ಕೊಂಡಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಆನಂದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಎಂ.ಮಂಜುನಾಥ್, ಮುಖಂಡರಾದ ನಾರಾಯಣಗೌಡ, ನಾರಾಯಣಸ್ವಾಮಿ, ಆನಂದಪ್ಪ, ಹೇಮಂತ್, ಸುದರ್ಶನ್ ಮುನಿಯಪ್ಪ ಸೇರಿ ಹಲವರು ಹಾಜರಿದ್ದರು.