ಹುಬ್ಬಳ್ಳಿ:
ಬುಧವಾರ ಇಲ್ಲಿನ ಜೆ.ಸಿ. ನಗರದ ಮುನ್ಸಿಪಲ್ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ, ಜಿಲ್ಲಾ ಸಹಕಾರ ಯೂನಿಯನ್, ಕೆಸಿಸಿ ಬ್ಯಾಂಕ್, ಹುಬ್ಬಳ್ಳಿ ತಾಲೂಕಿನ ಸಹಕಾರ ಸಂಘ ಹಾಗೂ ಸಹಕಾರ ಇಲಾಖೆ ಆಶ್ರಯದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು.
ಏಷ್ಯಾದಲ್ಲಿಯೇ ಸಹಕಾರ ಸಂಘಗಳಿಂದ ಜನರ ಅಭಿವೃದ್ಧಿ ಸಾಧಿಸಬಹುದು ಎಂದು ತೋರಿಸಿಕೊಟ್ಟ ರಾಷ್ಟ್ರ ಭಾರತ. 1905ರಲ್ಲಿ ಗದಗ ಜಿಲ್ಲೆಯ ಕಣಗಿನಹಾಳದಲ್ಲಿ ಸಿದ್ಧನಗೌಡ ಸಣ್ಣರಾಮನಗೌಡ ಪಾಟೀಲ ನೇತೃತ್ವದಲ್ಲಿ ಸಹಕಾರ ಸಂಘ ಸ್ಥಾಪಿಸಲಾಯಿತು ಎಂದ ಅವರು, ಸಾರ್ವಜನಿಕರ ಜತೆ ಸರ್ಕಾರ ಕೈ ಜೋಡಿಸಿದರೆ ಮಾತ್ರ ನಿರೀಕ್ಷಿತ ಅಭಿವೃದ್ಧಿ ಸಾಧಿಸಬಹುದು. ಕೇಂದ್ರ ಸರ್ಕಾರವು ಸಹಕಾರ ಸಂಘಗಳ ಉತ್ತೇಜಿಸಲು ಸಹಕಾರ ಇಲಾಖೆ ಆರಂಭಿಸಿದೆ ಎಂದರು.ಸಹಕಾರ ಸಂಘ ಸಂಸ್ಥೆಗಳನ್ನು ಕಂಪ್ಯೂಟರೀಕರಣ ಮಾಡುತ್ತಿದ್ದು 200ಕ್ಕೂ ಅಧಿಕ ಸಂಘಗಳ ಕಂಪ್ಯೂಟರೀಕರಣ ಪೂರ್ಣಗೊಂಡಿದೆ ಎಂದು ಹೇಳಿದರು.
ಕಾರ್ಯಕ್ರಮಕ್ಕೂ ಪೂರ್ವದಲ್ಲಿ ಇಲ್ಲಿನ ನ್ಯೂ ಕಾಟನ್ ಮಾರ್ಕೆಟ್ನಿಂದ ಮುನ್ಸಿಪಲ್ ನೌಕರರ ಭವನದ ವೆರೆಗೆ ಸಹಕಾರ ಜಾಥಾ ನಡೆಯಿತು. ಕೆಸಿಸಿ ಬ್ಯಾಂಕ್ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ, ಕಾಸ್ಕಾರ್ಡ್ ಬ್ಯಾಂಕಿನ ಉಪಾಧ್ಯಕ್ಷ ಉಳವಪ್ಪ ದಾಸನೂರ, ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಸುರೇಶ ಬಣವಿ, ಹುಬ್ಬಳ್ಳಿ ಅರ್ಬನ್ ಕೋ-ಆಪ್ ಬ್ಯಾಂಕಿನ ಅಧ್ಯಕ್ಷ ವಿಕ್ರಮ ಶಿರೂರ, ಶ್ರೀಗಜಾನನ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಹಿತೇಶಕುಮಾರ ಮೋದಿ, ಮಹಾರಾಜಾ ಅಗ್ರಸೇನಾ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಅಮಿತ ಮಹಾಜನ, ಕೆಸಿಸಿ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಎಸ್.ವಿ. ಹೂಗಾರ, ಜಿಲ್ಲಾ ಉಸ್ತುವಾರಿ ಅಧಿಕಾರಿ ಎಂ.ಬಿ. ಪೂಜಾರ, ಸಹಕಾರ ಅಭಿವೃದ್ಧಿ ಅಧಿಕಾರಿ ಎಂ.ಎಸ್. ರೇಣುಕಾ, ವಿ.ಜಿ. ಕುಲಕರ್ಣಿ, ಮಲ್ಲಿಕಾರ್ಜುನ ಸಾವುಕಾರ ಸೇರಿದಂತೆ ವಿವಿಧ ಬ್ಯಾಂಕಿನ ಅಧಿಕಾರಿಗಳು, ಸಂಘಗಳ ಪದಾಧಿಕಾರಿಗಳು ಹಾಜರಿದ್ದರು. ಕೆಸಿಸಿ ಬ್ಯಾಂಕ್ನ ಉಪಾಧ್ಯಕ್ಷ ನಿಂಗನಗೌಡ ಮರಿಗೌಡ್ರ ಸ್ವಾಗತಿಸಿದರು.