ಕನ್ನಡಪ್ರಭ ವಾರ್ತೆ ಮಂಗಳೂರು
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನೈಋತ್ಯ, ದಕ್ಷಿಣ ಹಾಗೂ ಕೊಂಕಣ ರೈಲ್ವೆ ವಿಭಾಗಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನರ ಅನುಕೂಲಕ್ಕಾಗಿ ಫರಂಗಿಪೇಟೆ ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಸಮಗ್ರ ಯೋಜನೆಯನ್ನು ಸಿದ್ಧಪಡಿಸುವಂತೆ ಹೇಳಿದರು.ಸೆಂಟ್ರಲ್ ನಿಲ್ದಾಣ ಪುನರಾಭಿವೃದ್ಧಿ:
ಬಂದರ್ನಲ್ಲಿರುವ ಗೂಡ್ಸ್ ಶೆಡ್ನ್ನು ಉಳ್ಳಾಲ ಮತ್ತು ಪಣಂಬೂರಿಗೆ ಶಾಶ್ವತವಾಗಿ ಸ್ಥಳಾಂತರಿಸಲು ಸಮಗ್ರ ಯೋಜನೆ ಸಿದ್ಧಪಡಿಸುವಂತೆ ಸಂಸದರು ಅಧಿಕಾರಿಗಳಿಗೆ ಸೂಚಿಸಿದರು.
ಪಾಂಡೇಶ್ವರ ರೈಲ್ವೆ ಗೇಟ್ನಲ್ಲಿ ವಾಹನ ದಟ್ಟಣೆ ತಪ್ಪಿಸಲು ರೈಲ್ವೆ ಕೆಳಸೇತುವೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಯಿತು. ಇದನ್ನು ಕಾರ್ಯಗತಗೊಳಿಸಲು ಕಾರ್ಯಸಾಧ್ಯತೆ ಇಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದರು. ಈ ಕುರಿತು ಮಾಹಿತಿ ನೀಡಿದ ಮಹಾನಗರ ಪಾಲಿಕೆ ಕಾರ್ಯ ನಿರ್ವಾಹಕ ಎಂಜಿನಿಯರ್ ನರೇಶ್ ಶೆಣೈ, ಸುರತ್ಕಲ್ ಎನ್ಐಟಿಕೆಗೆ ರೈಲ್ವೆ ಕೆಳಸೇತುವೆ ಮಾಡುವ ಕಾರ್ಯಸಾಧ್ಯತಾ ವರದಿ ನೀಡಲು ತಿಳಿಸಲಾಗಿದೆ. ಅಲ್ಲಿನ ಚರಂಡಿಗಳಲ್ಲಿನ ನೀರಿನ ಮಟ್ಟ ಸೇರಿದಂತೆ ಪ್ರದೇಶದ 500 ಮೀ. ಸುತ್ತಳತೆಯ ಸಮೀಕ್ಷೆಯ ವರದಿಯನ್ನು ಎನ್ಐಟಿಕೆ ಕೇಳಿದೆ ಎಂದರು. ಶಾಸಕ ವೇದವ್ಯಾಸ ಕಾಮತ್ ಮತ್ತು ಸಂಸದ ಕ್ಯಾಪ್ಟನ್ ಚೌಟ ಅವರು ಲಭ್ಯವಿರುವ ಅಂಕಿಅಂಶಗಳನ್ನು ಎನ್ಐಟಿಕೆಗೆ ಸಲ್ಲಿಸಿ, ಕಾರ್ಯಸಾಧ್ಯತಾ ಅಧ್ಯಯನ ವರದಿ ಸಿದ್ಧಪಡಿಸುವಂತೆ ಸೂಚಿಸಿದರು.
ಶಾಸಕರಾದ ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಮೇಯರ್ ಮನೋಜ್ ಕೋಡಿಕಲ್, ಪಾಲಕ್ಕಾಡ್ ರೈಲ್ವೆಯ ಅಪರ ಪ್ರಾದೇಶಿಕ ವ್ಯವಸ್ಥಾಪಕ ಅನಿಲ್ ಕುಮಾರ್, ಕೊಂಕಣ ರೈಲ್ವೆಯ ಪ್ರಾದೇಶಿಕ ವ್ಯವಸ್ಥಾಪಕಿ ಆಶಾ ಮತ್ತಿತರರು ಇದ್ದರು.............
ನಗರದ ಮಹಾಕಾಳಿಪಡ್ಪು ರೈಲ್ವೆ ಅಂಡರ್ಪಾಸ್ ಕಾಮಗಾರಿ 2025ರ ಜನವರಿ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದರು. ಇದರ ಸಂಪರ್ಕ ರಸ್ತೆಯ ಕಾಮಗಾರಿಯನ್ನು ಸಮಾನಾಂತರವಾಗಿ ಕೈಗೆತ್ತಿಕೊಳ್ಳುವಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಸಂಸದರು ಸೂಚಿಸಿದರು.