ಗಣರಾಜ್ಯೋತ್ಸವದಂದು ಎಲ್ಲಾ ಇಲಾಖೆಯ ಸಿಬ್ಬಂದಿ ಕಡ್ಡಾಯವಾಗಿ ಪಾಲ್ಗೊಳ್ಳಿ

KannadaprabhaNewsNetwork |  
Published : Jan 16, 2025, 12:45 AM IST
15ಎಚ್ಎಸ್ಎನ್4 : ಸಕಲೇಶಪುರ ಪಟ್ಟಣದ ಮಿನಿವಿಧಾನಸೌದ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಪೂರ್ವಭಾವಿ ಸಭ ತಹಶೀಲ್ದಾರ್ ಮೇಘನಾ ಅಧಕ್ಷತೆಯಲ್ಲಿ ನಡೆಯಿತು. | Kannada Prabha

ಸಾರಾಂಶ

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನಗರದ ಸುಭಾಷ್ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ವಿವಿಧ ಶಾಲಾ ಮಕ್ಕಳ ಆಕರ್ಷಕ ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಇಲಾಖೆಯ ಸಿಬ್ಬಂದಿ ಕಡ್ಡಾಯವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು. ಗಣರಾಜ್ಯೋತ್ಸವ ಸಂದಭದಲ್ಲಿ ತಾಲೂಕಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದು ದಂಡಾಧಿಕಾರಿಗಳಾದ ಮೇಘನಾ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಜನವರಿ ೨೬ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ಅಧ್ಯಕ್ಷರು ಹಾಗೂ ದಂಡಾಧಿಕಾರಿಗಳಾದ ಮೇಘನಾ ತಿಳಿಸಿದ್ದಾರೆ.

ಬುಧವಾರ ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆಯ ಸಮಿತಿಯ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನಗರದ ಸುಭಾಷ್ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ವಿವಿಧ ಶಾಲಾ ಮಕ್ಕಳ ಆಕರ್ಷಕ ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಇಲಾಖೆಯ ಸಿಬ್ಬಂದಿ ಕಡ್ಡಾಯವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು. ಗಣರಾಜ್ಯೋತ್ಸವ ಸಂದಭದಲ್ಲಿ ತಾಲೂಕಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದರು.

ವಿವಿಧ ಶಾಲೆ ಹಾಗೂ ಇಲಾಖೆಗಳನೊಳಗೊಂಡಂತೆ ಪರಿಸರ, ನಾಡು ನುಡಿಗೆ ಸಂಬಂಧಿಸಿದ ಸ್ತಬ್ಧ ಚಿತ್ರಗಳ ಆಕರ್ಷಕ ಮೆರವಣಿಗೆಯು ಸಹ ಈ ಸಂದರ್ಭದಲ್ಲಿ ನಡೆಯಲಿದ್ದು, ತಾಲೂಕಿನ ಎಲ್ಲ ಸಂಘಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಪೂರ್ವಭಾವಿ ಸಭೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶಾರದ ಗುರುಮೂರ್ತಿ, ಪತ್ರಕರ್ತರ ಸಂಘದ ಅಧ್ಯಕ್ಷ ಜೈ ಭೀಮ್ ಮಂಜು, ನಗರ ಠಾಣಾ ಸಬ್‌ಇನ್ಸ್‌ಪೆಕ್ಟರ್‌ ಮಹೇಶ್, ರಾಜ್ಯ ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ತಮ್ಮಣ್ಣ ಶೆಟ್ಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!