ಕನ್ನಡಪ್ರಭ ವಾರ್ತೆ ಹಾಸನ
ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಬುಧವಾರ ಮಹಿಳಾ ಸ್ಪಂದನಾ ಮತ್ತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಸ್ವೀಕೃತವಾದ ದೂರುಗಳನ್ನು ಪರಿಹರಿಸಲು ಸೂಕ್ಷ್ಮವಾಗಿ ಗಮನಿಸಿ ಮುಲಾಜಿಲ್ಲದೆ ಸೂಕ್ತವಾದ ನಿರ್ಧಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಪ್ರವಾಸದ ಸಂದರ್ಭದಲ್ಲಿ ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಜಿಲ್ಲಾಡಳಿತಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು. ಸಂಘ ಸಂಸ್ಥೆಗಳು ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಮಹಿಳೆಯರ ಸುರಕ್ಷತೆಗಾಗಿ ಸಮಿತಿ ರಚನೆ ಮಾಡಿದ್ದರಾ ಮತ್ತು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಯುತ್ತಿದೆಯಾ ಎಂದು ಪರಿಶೀಲಿಸಬೇಕು ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ವರ್ಷದಲ್ಲಿ ೨೭೯ ಕಾಣೆಯಾದ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಪ್ರಕರಣಗಳು ಪೊಲೀಸ್ ಇಲಾಖೆಯಲ್ಲಿ ದಾಖಲಾಗಿದ್ದು, ೨೩೬ ಪ್ರಕರಣ ಪತ್ತೆ ಮಾಡಲಾಗಿದೆ. ಉಳಿದ ೪೩ ಪ್ರಕರಣಗಳನ್ನು ಶೀಘ್ರವಾಗಿ ಪತ್ತೆ ಹಚ್ಚಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇತ್ತೀಚೆಗೆ ವಿವಾಹ ವಿಚ್ಛೇಧನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮದುವೆಗೆ ಮುನ್ನ ಹುಡುಗ-ಹುಡುಗಿಗೆ ಸಮಾಲೋಚನೆ ನಡೆಸುವ ನಿಟ್ಟಿನಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದಿಂದ ನನ್ನ-ನಿನ್ನ ಕನಸು ಎಂಬ ಕಾರ್ಯಕ್ರಮವನ್ನು ಜಾರಿಗೆ ತರಲಾಗುತ್ತಿದೆ. ರಾಜ್ಯದಲ್ಲಿ ಈ ಕಾರ್ಯಕ್ರಮ ಇನ್ನೂ ಯಾವ ಜಿಲ್ಲೆಯಲ್ಲಿ ಆರಂಭಿಸಿಲ್ಲ, ಹಾಸನ ಜಿಲ್ಲೆಯಿಂದಲೇ ಮೊದಲು ಪ್ರಾರಂಭವಾಗಲಿ ಎಂದು ತಿಳಿಸಿದರು.ಇಂದಿನ ದಿನಗಳಲ್ಲಿ ಯುವಕ ಯುವತಿಯರು ಮದುವೆಯಾಗಿ ಒಂದು ವ?ದೊಳಗೆ ವಿಚ್ಚೇದನ ತೆಗೆದುಕೊಳ್ಳುವ ಸ್ಥಿತಿಗೆ ತಲುಪುತ್ತಿದ್ದಾರೆ. ಅವರಲ್ಲಿ ತಾಳ್ಮೆ ಕಡಿಮೆಯಿರುವುದು ಕಂಡುಬರುತ್ತಿದೆ. ಇದನ್ನು ತಪ್ಪಿಸಿ ಭದ್ರ ಬುನಾದಿ ಹಾಕುವ ನಿಟ್ಟಿನಲ್ಲಿ ಅರಿವು ಮೂಡಿಸಬೇಕು ಆ ಕಾರಣಕ್ಕೆ ಮದುವೆಯ ಪೂರ್ವದಲ್ಲಿ ಯುವಕ ಯುವತಿಯರ ತಂದೆ ತಾಯಿಗಳು ಕುಳಿತು ಚರ್ಚೆ ಮಾಡಿ ಎರಡು ಕುಟುಂಬಗಳು ಮದುವೆ ಒಪ್ಪಂದ ಮಾಡಿಕೊಂಡು ಮುಂದುವರೆಯಬೇಕು ಆಗ ಸಮಾಜದಲ್ಲಿ ಸಂಸ್ಕಾರಯುತವಾಗಿ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಅಸಂಘಟಿತ ಕಾರ್ಮಿಕರು ದೂರು ನೀಡಲು ಸಹಕಾರಿಯಾಗುವಂತೆ ಜಿಲ್ಲಾ ಮಟ್ಟದ ದೂರು ನಿವಾರಣಾ ಸಮಿತಿಯ ಕುರಿತು ಜಿಲ್ಲಾಧಿಕಾರಿ ಕಚೇರಿ ನಾಮಫಲಕದಲ್ಲಿ ಅಳವಡಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಮಂಜುನಾಥ್, ಹೆಚ್ಚುವರಿ ಪೊಲೀಸ್ ವರಿ?ಧಿಕಾರಿ ವೆಂಕಟೇಶ್ ನಾಯ್ಡು, ಮಾಹಿಳಾ ಆಯೋಗದ ಕಾರ್ಯದರ್ಶಿ ರೂಪ ಉಪಸ್ಥಿತರಿದ್ದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.