ಕನ್ನಡಪ್ರಭ ವಾರ್ತೆ ಕಲಬುರಗಿ
ಕೇಂದ್ರ ಬಸ್ ನಿಲ್ದಾಣದಲ್ಲಿ ಭಾರತ ಚುನಾವಣೆ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಸ್ವೀಪ್ ಸಮಿತಿ ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಹಯೋಗದೊಂದಿಗೆ ಲೋಕಸಭಾ ಚುನಾವಣೆ ೨೦೨೪ರ ನಿಮಿತ್ತ ಸಸಿಗೆ ನೀರೆರೆಯುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದ್ದೇವೆ. ಮತದಾನ ಪ್ರಜಾಪ್ರಭುತ್ವದ ಹಬ್ಬ. ನಾವೆಲ್ಲರೂ ಸೇರಿಕೊಂಡು ಹಬ್ಬದ ರೀತಿಯಲ್ಲಿ ಮತದಾನ ಮಾಡಬೇಕು. ಮತದಾನ ಪ್ರಮಾಣ ಹೆಚ್ಚಿಸಲು ಸತತವಾಗಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಳ್ಳವುದರ ಮೂಲಕ ಜನರಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಮಗದ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ ಪ್ರತಿಜ್ಞೆ ವಿಧಿ ಭೋಧಿಸಿ ಮಾತನಾಡಿ, ಸ್ವೀಪ್ ಸಮಿತಿ ಹಾಗೂ ಜಿಲ್ಲಾಡಳಿತ ವತಿಯಿಂದ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರಜಾಪ್ರಭುತ್ವದ ಹಬ್ಬವಾಗಿದೆ ನಾವೆಲ್ಲರೂ ಸಕ್ರಿಯವಾಗಿ ಪಾಲ್ಗೊಂಡು ಮತದಾನ ಮಾಡಬೇಕೆಂದರು.
ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರುನ್ನಮ್ ಮತದಾನ ಜಾಗೃತಿ ಮೂಡಿಸಲು ಬಲೂನ್ಗಳನ್ನು ಹಾರಿಬಿಟ್ಟರು ಮತ್ತು ಬಸ್ಗಳಿಗೆ ಮತದಾನ ಸ್ಟೀಕರ್ ಅಂಟಿಸಿದರು.
ಇದೇ ಸಂದರ್ಭದಲ್ಲಿ ಕೆನರಾ ಬ್ಯಾಂಕ್ನಿಂದ ಉಚಿತವಾಗಿ ನೀಡಿರುವ ನೀರಿನ ಫಿಲ್ಟರ್ಗಳಿಗೆ ಜಿಲ್ಲಾ ಚುನಾವಣಾಧಿಕಾರಿ ರಿಬ್ಬನ್ ಕತ್ತರಿಸುವುದರ ಮೂಲಕ ಉದ್ಫಾಟಿಸಿದರು.ಜಿಪಂ ಉಪಕಾರ್ಯದರ್ಶಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಅಬ್ದುಲ್ ಅಜೀಮ್, ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ಧಪ್ಪ ಗಂಗಾಧರ, ನಾರಾಯಣಪ್ಪ ಕುರಬರ್, ಮುಖ್ಯ ಸಂಚಾರ ವ್ಯವಸ್ಥಾಪಕ ಸಂತೋಷ ಹಾಗೂ ಅಧಿಕಾರಿಗಳು ಸಾರ್ವಜನಿಕರು ಅಪರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.