- ಭಾರತ ಚುನಾವಣಾ ಆಯೋಗ ನಿರ್ದೇಶನದಂತೆ ಜಿಲ್ಲೆಯಲ್ಲಿ ಎಸ್ಐಆರ್ ಪ್ರಕ್ರಿಯೆ ಜಾರಿ: ಜಿ.ಎಂ. ಗಂಗಾಧರ ಸ್ವಾಮಿ
ಕನ್ನಡಪ್ರಭ ವಾರ್ತೆ ದಾವಣಗೆರೆ
ಭಾರತ ಚುನಾವಣಾ ಆಯೋಗ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ ಎಂದು ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ತಿಳಿಸಿದ್ದಾರೆ.ಜಿಲ್ಲೆಯ ಒಟ್ಟು 14,99,282 ಮತದಾರರ ಪೈಕಿ ಇಂದಿನವರೆಗೆ ಬಿಎಲ್ಒಗಳು ಒಟ್ಟು 14,99,282 ಎನುಮೆರೇಷನ್ ನಮೂನೆಗಳನ್ನು ವಿತರಿಸಿದ್ದು, ಈ ಪೈಕಿ 12,59,871 ನಮೂನೆಗಳನ್ನು ಗಣಕೀಕರಿಸಲಾಗಿದೆ. 103-ಜಗಳೂರು: ಒಟ್ಟು 2,00,836 ಮತದಾರರಿದ್ದು, ಬಿಎಲ್ಒಗಳಿಂದ ಎಲ್ಲಾ 2,00,836 ನಮೂನೆಗಳನ್ನು ವಿತರಿಸಲಾಗಿದ್ದು , 1,78,095 ನಮೂನೆಗಳನ್ನು ಗಣಕೀಕರಿಸಲಾಗಿದೆ.
108-ಮಾಯಕೊಂಡ: ಒಟ್ಟು 1,97,048 ಮತದಾರರಿದ್ದು, ಎಲ್ಲಾ 1,97,048 ನಮೂನೆಗಳನ್ನು ವಿತರಿಸಲಾಗಿದ್ದು, 1,84,622 ನಮೂನೆಗಳನ್ನು ಗಣಕೀಕರಿಸಲಾಗಿದೆ. 109-ಚನ್ನಗಿರಿ: ಒಟ್ಟು 2,03,628 ಮತದಾರರಿದ್ದು, ಎಲ್ಲಾ 2,03,628 ನಮೂನೆಗಳನ್ನು ವಿತರಿಸಲಾಗಿದ್ದು, 1,83,608 ನಮೂನೆಗಳನ್ನು ಗಣಕೀಕರಿಸಲಾಗಿದೆ. 110-ಹೊನ್ನಾಳಿ: ಒಟ್ಟು 2,00,033 ಮತದಾರರಿದ್ದು, ಎಲ್ಲಾ 2,00,033 ನಮೂನೆಗಳನ್ನು ವಿತರಿಸಲಾಗಿದ್ದು, 1,81,519 ನಮೂನೆಗಳನ್ನು ಗಣಕೀಕರಿಸಲಾಗಿದೆ.
ಜಗಳೂರು ಕ್ಷೇತ್ರದಲ್ಲಿ ಒಟ್ಟು 14,623 ಪ್ರಕರಣಗಳನ್ನು ಗುರುತಿಸಲಾಗಿದ್ದು, ಇದರಲ್ಲಿ 604 ಸಂಗ್ರಹವಾಗದ, 7891 ಶಾಶ್ವತ ವಲಸೆ, 3300 ಮರಣ, 2785 ದ್ವಿಪ್ರತಿ ಹಾಗೂ 43 ಇತರೆ ಪ್ರಕರಣಗಳಿವೆ. ಹರಿಹರ ಕ್ಷೇತ್ರದಲ್ಲಿ ಒಟ್ಟು 16,611 ಪ್ರಕರಣಗಳು ಪತ್ತೆಯಾಗಿದ್ದು, 1796 ಸಂಗ್ರಹವಾಗದ, 5571 ಶಾಶ್ವತ ವಲಸೆ, 4532 ಮರಣ, 4640 ದ್ವಿಪ್ರತಿ ಮತ್ತು 72 ಇತರೆ ಪ್ರಕರಣಗಳಿವೆ.
ಮಾಯಕೊಂಡ ಕ್ಷೇತ್ರದಲ್ಲಿ ಒಟ್ಟು 12,424 ಪ್ರಕರಣಗಳಿದ್ದು, 263 ಸಂಗ್ರಹವಾಗದ, 5997 ಶಾಶ್ವತ ವಲಸೆ, 4169 ಮರಣ, 1952 ದ್ವಿಪ್ರತಿ ಹಾಗೂ 43 ಇತರೆ ಪ್ರಕರಣಗಳಿವೆ. ಚನ್ನಗಿರಿ ಕ್ಷೇತ್ರದಲ್ಲಿ ಜಿಲ್ಲೆಯಲ್ಲೇ 13,985 ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ 300 ಸಂಗ್ರಹವಾಗದ, 7422 ಶಾಶ್ವತ ವಲಸೆ, 3281 ಮರಣ, 2951 ದ್ವಿಪ್ರತಿ ಹಾಗೂ 31 ಇತರೆ ಪ್ರಕರಣಗಳು ಸೇರಿವೆ.
- - -