ಕನ್ನಡಪ್ರಭ ವಾರ್ತೆ ಕಾರ್ಕಳ
ಉಡುಪಿ ಜಿಲ್ಲಾ ಗಣಕವಿಜ್ಞಾನ ಉಪನ್ಯಾಸಕರ ಸಂಘದ ವತಿಯಿಂದ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್ ಇಲ್ಲಿ ಜೂನ್ 5 ರಂದು ನಡೆದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಉಡುಪಿ ಜಿಲ್ಲಾ ಗಣಕವಿಜ್ಞಾನ ಉಪನ್ಯಾಸಕರಿಗೆ “ಪೈಥಾನ್ ಪ್ರೋಗ್ರಾಂಮಿಂಗ್” ಸವಿವರವಾಗಿ ಪ್ರಾಯೋಗಿಕ ತರಗತಿ ಸಮೇತ ಕಾರ್ಯಾಗಾರವನ್ನು ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕವಿಜ್ಞಾನ ವಿಭಾಗದ ಉಪನ್ಯಾಸಕರಾದ ರಂಜನ್, ಗುರುಪ್ರಸಾದ್ ಹಾಗೂ ಯಶಸ್ವಿನಿ ನಡೆಸಿಕೊಟ್ಟು ಸೂಕ್ತ ಮಾರ್ಗದರ್ಶನ ನೀಡಿದರು.ಪ.ಪೂ ಕಾಲೇಜಿನ ಉಪಪ್ರಾಂಶುಪಾಲರಾದ ಕಮಲಾಕ್ಷಿ ಪ್ರಕಾಶ್, ಎಲ್ಲಾ ಉಪನ್ಯಾಸಕರು ಒಂದೇ ಸೂರಿನಡಿಯಲ್ಲಿ ಪಠ್ಯಕ್ರಮ ಬದಲಾವಣೆಗೆ ಸೂಕ್ತವಾಗಿ ಹೊಂದಿಕೊಂಡು ವಿದ್ಯಾರ್ಥಿಗಳಿಗೆ ಪೂರ್ಣಪ್ರಮಾಣದ ಜ್ಞಾನ ಒದಗಿಸುವ ಪ್ರಯತ್ನ ಮಾಡಬೇಕು ಎಂದು ನುಡಿದರು.
ಈ ಸಂದರ್ಭ ಸಂಘದ ನೂತನ ಅಧ್ಯಕ್ಷರನ್ನಾಗಿ ಕ್ರಿಯೇಟಿವ್ ಪ.ಪೂ ಕಾಲೇಜು, ಕಾರ್ಕಳದ ಗಣಕವಿಜ್ಞಾನ ಉಪನ್ಯಾಸಕರಾದ ಜ್ಞಾನೇಶ್ ಕೋಟ್ಯಾನ್ ಅವರನ್ನು ನೇಮಿಸಲಾಯಿತು. ಕಾರ್ಯದರ್ಶಿಯಾಗಿ ಶಕುಂತಳ ರಾಜೇಶ್ ವಿದ್ಯೋದಯ ಪ.ಪೂ ಕಾಲೇಜು ಉಡುಪಿ, ಖಜಾಂಚಿಯಾಗಿ ಬಿನು ಜಯಚಂದ್ರ ಪಾಲನ್ ಸೆಂಟ್ ಮೇರಿಸ್ ಕಾಂಪೋಸಿಟ್ ಪ.ಪೂ ಕಾಲೇಜು ಕುಂದಾಪುರ ಅವರನ್ನು ನೇಮಿಸಲಾಯಿತು.
ಕಾರ್ಯಕ್ರಮವನ್ನು ನಿಕಟಪೂರ್ವ ಅಧ್ಯಕ್ಷರಾದ ರಾಮ ನಾಯ್ಕ ಸ್ವಾಗತಿಸಿದರು. ದಿವ್ಯ ವಂದಿಸಿದರು. ಗಾಯತ್ರಿ ನಿರೂಪಿಸಿದರು.