ಅಖಿಲ ಭಾರತ 72 ನೇ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ
ಮಡಿಕೇರಿ: ಸಹಕಾರ ಸಂಘಗಳ ಬೆಳವಣಿಗೆ ರಾಷ್ಟ್ರದ ಅಭಿವೃದ್ಧಿಗೆ ಸಹಕಾರಿಯಾಗಿದ್ದು, ಸಹಕಾರ ಸಂಘಗಳ ಕೊಡುಗೆ ಅಪಾರ ಎಂದು ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ‘ಉನ್ನತಿ’ ಭವನದ ಪಂದ್ಯಂಡ ಐ.ಬೆಳ್ಯಪ್ಪ ಸ್ಮಾರಕ ಸಭಾಂಗಣದಲ್ಲಿ ಗುರುವಾರ ನಡೆದ ಅಖಿಲ ಭಾರತ 72 ನೇ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ‘ಜಾಗತಿಕ ಸ್ಪರ್ಧಾತ್ಮಕತೆಗಾಗಿ ನವನಾವಿನ್ಯತೆಯ ಸಹಕಾರಿ ವ್ಯವಹಾರದ ಮಾದರಿಗಳು’ ದಿನಾಚರಣೆ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್ನಿಂದ ಆಯ್ಕೆಗೊಂಡ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ, ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಹಾಗೂ ಸ್ಥಳೀಯ ಎಲ್ಲಾ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.ರೈತರ ಬದುಕಿಗೆ ಸಹಕಾರ ಸಂಘಗಳು ಬೆನ್ನುಲುಬಾಗಿದ್ದು, ಕೃಷಿ ಚಟುವಟಿಕೆ ಕೈಗೊಳ್ಳಲು ಸಹಕಾರ ಸಂಘಗಳು ಸಹಕಾರಿಯಾಗಿವೆ ಎಂದರು.ರಾಷ್ಟ್ರವು ಇಂದಿಗೂ ಕೃಷಿ ಪ್ರಧಾನವಾಗಿದ್ದು, ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಆ ನಿಟ್ಟಿನಲ್ಲಿ ಕೃಷಿಗೆ ಪೂರಕವಾಗಿ ಸಹಕಾರ ಸಂಘಗಳು ಕಾರ್ಯ ನಿರ್ವಹಿಸುತ್ತಿವೆ ಎಂದರು.ಕೃಷಿ, ತೋಟಗಾರಿಕೆ, ಹಾಲು ಉತ್ಪಾದನೆ, ಸಕ್ಕರೆ, ಗೃಹ ನಿರ್ಮಾಣ, ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಹಕಾರ ಸಂಘಗಳು ರೈತರಿಗೆ ಅನುಕೂಲವಾಗಿರುವುದು ವಿಶೇಷವಾಗಿದೆ ಎಂದು ಸುಜಾ ಕುಶಾಲಪ್ಪ ತಿಳಿಸಿದರು. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಅಧ್ಯಕ್ಷ ಕೊಡಂದೇರ ಪಿ.ಗಣಪತಿ ಮಾತನಾಡಿ ಸಹಕಾರ ಸಂಘಗಳ ಬ್ಯಾಂಕ್ನಲ್ಲಿ ಏಕರೂಪದ ತಂತ್ರಾಂಶ ಅಳವಡಿಸಿಕೊಳ್ಳಲಾಗಿದೆ. ಜತೆಗೆ ರಾಷ್ಟ್ರೀಕೃತ ಬ್ಯಾಂಕ್ ಮಾದರಿಯಲ್ಲಿ ಸಹಕಾರ ಬ್ಯಾಂಕ್ಗಳಲ್ಲಿಯೂ ಸಹ ಡಿಜಿಟಲೀಕರಣಕ್ಕೆ ಮುಂದಾಗಲಾಗಿದೆ ಎಂದರು. ಸಹಕಾರ ಬ್ಯಾಂಕುಗಳನ್ನು ಅಭಿವೃದ್ಧಿ ಪಡಿಸುವಲ್ಲಿ ಕರ್ನಾಟಕ, ಮಹಾರಾಷ್ಟ್ರ ಮತ್ತಿತರ ರಾಜ್ಯಗಳಲ್ಲಿ ಪೈಲೆಟ್ ಯೋಜನೆ ರೂಪಿಸಲಾಗಿದೆ ಎಂದು ಬಾಂಡ್ ಗಣಪತಿ ತಿಳಿಸಿದರು. ಸಹಕಾರ ಕ್ಷೇತ್ರದಲ್ಲಿ ಪೆಟ್ರೋಲ್ ಬಂಕ್, ಆಸ್ಪತ್ರೆ, ಕಲ್ಯಾಣ ಮಂಟಪ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಸಹಕಾರ ಸಂಘ ಹೆಜ್ಜೆ ಹಾಕಿರುವುದು ಶ್ಲಾಘನೀಯವಾಗಿದೆ. ಕೊಡಗು ಜಿಲ್ಲೆಯಲ್ಲಿಯೂ ಸಹ ಬಹು ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಸಹಕಾರ ಸಂಘ ವ್ಯಾಪ್ತಿಯಲ್ಲಿರುವ ಭೂಮಿ ಸಂರಕ್ಷಣೆ ಮಾಡಿಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದು ಬಾಂಡ್ ಗಣಪತಿ ಅವರು ವಿವರಿಸಿದರು.
ಕೊಡಗು ಡಿಸಿಸಿ ಬ್ಯಾಂಕ್ 24 ಶಾಖೆಗಳನ್ನು ಹೊಂದಿದ್ದು, ಉಳಿದಂತೆ ತಿತಿಮತಿ, ಕಕ್ಕಬ್ಬೆ, ಗುಡ್ಡೆಹೊಸೂರು ಮತ್ತಿತರ ಕಡೆಗಳಲ್ಲಿ ಡಿಸಿಸಿ ಬ್ಯಾಂಕ್ ಶಾಖೆಗಳನ್ನು ಆರಂಭಿಸಲಾಗುತ್ತದೆ. ಇದರಿಂದ ರೈತರಿಗೆ ಸಾಲ ಸೌಲಭ್ಯ ಪಡೆಯಲು ಸಹಕಾರಿಯಾಗಲಿದೆ ಎಂದು ಕೊಡಂದೇರ ಗಣಪತಿ ಹೇಳಿದರು. ಇದೇ ಡಿ.7 ರಿಂದ 5 ದಿನಗಳ ಕಾಲ ಕೃಷಿ ಪತ್ತಿನ ಸಹಕಾರ ಸಂಘ ತರಬೇತಿ ಕಾರ್ಯಾಗಾರವು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಪಂದ್ಯಂಡ ಬೆಳ್ಯಪ್ಪ ಸಭಾಂಗಣದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಅಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಒಂದು ವಾರ ಕಾಲ ವಿವಿಧ ಕಡೆಗಳಲ್ಲಿ ಸಹಕಾರಿಗಳ ಸಹಕಾರದಿಂದ ಸಹಕಾರ ಸಪ್ತಾಹ ನಡೆದಿರುವುದು ವಿಶೇಷವಾಗಿದೆ ಎಂದರು.ಕೊಡಗು ಸಹಕಾರ ರತ್ನ ಪ್ರಶಸ್ತಿ ಪಡೆದ ಹಿರಿಯ ಸಹಕಾರಿ ಚಿರಿಯಪಂಡ ಕೆ.ಉತ್ತಪ್ಪ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ನಿರ್ದೇಶಕ ಎಂ.ಎಂ.ಶ್ಯಾಮಲಾ ಮಾತನಾಡಿದರು.
ಷ್ಠ ಸಹಕಾರಿಗಳಾದ ಎಚ್.ಎಸ್.ಮುದ್ದಪ್ಪ, ತಳೂರು ಕಿಶೋರ್ ಕುಮಾರ್, ಶ್ರೇಷ್ಠ ಮಹಿಳಾ ಸಹಕಾರಿ ದೇವಾಂಬಿಕಾ ಮಹೇಶ್, ಉತ್ತಮ ಸಹಕಾರಿ ಸಿಬ್ಬಂದಿ ಆಲೆಮಾಡ ಎಸ್.ಕಾವೇರಮ್ಮ ಅವರಿಗೆ ಶಾಲು, ಫಲ ತಾಂಬೂಲ ನೀಡಿ ಸನ್ಮಾನಿಸಲಾಯಿತು.ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ನಿರ್ದೇಶಕ ಎಚ್.ಕೆ.ಮಾದಪ್ಪ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಉಪಾಧ್ಯಕ್ಷ ಕೆ.ಹರೀಶ್ ಪೂವಯ್ಯ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ನಿರ್ದೇಶಕ ಮನುಮುತ್ತಪ್ಪ, ಕೆ.ಎಂ.ತಮ್ಮಯ್ಯ, ಅಜಯ್ ಕುಮಾರ್, ಶ್ಯಾಮಚಂದ್ರ, ಕೆ.ಟಿ.ಪರಮೇಶ್, ಬಲ್ಲಾರಂಡ ಮಣಿಉತ್ತಪ್ಪ, ಅಮೃತ್ ವಿ.ಸಿ., ಎಸ್.ಆರ್.ಸುನೀಲ್ ರಾವ್, ಎ.ಸಿ.ಕುಶಾಲಪ್ಪ, ಎಂ.ಟಿ.ಸುಬ್ಬಯ್ಯ, ಎ.ಎಂ.ಮುತ್ತಪ್ಪ, ಪಿ.ಎಂ.ಚಂದ್ರಪ್ರಕಾಶ್, ಎಚ್.ಎಂ.ರಮೇಶ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ನಿರ್ದೇಶಕ ಹೊಸೂರು ಸತೀಶ್ ಕುಮಾರ್, ಕಾಂಗೀರ ಸತೀಶ್, ಅರುಣ್ ಭೀಮಯ್ಯ, ಪಿ.ಪಿ.ಪೆಮ್ಮಯ್ಯ, ಕಿಲನ್ ಗಣಪತಿ, ಶರತ್ ಶೇಖರ್, ನಾಪಂಡ ಉಮೇಶ್ ಉತ್ತಪ್ಪ, ಪಟ್ರಪಂಡ ರಘುನಾಣಯ್ಯ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ವೃತ್ತಿಪರ ನಿರ್ದೇಶಕ ಮುಂಡಂಡ ಸಿ.ನಾಣಯ್ಯ, ಎ.ಗೋಪಾಲಕೃಷ್ಣ, ಸಹಕಾರ ಸಂಘಗಳ ಉಪ ನಿಬಂಧಕ ಎಚ್.ಡಿ.ರವಿಕುಮಾರ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪ ನಿರ್ದೇಶಕರಾದ ಎಂ.ಎನ್.ಹೇಮಾವತಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶೈಲಜಾ ಮತ್ತಿತರರು ಇದ್ದರು. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಕೆ.ಮಾದಪ್ಪ ಸ್ವಾಗತಿಸಿದರು. ಮಂಜುಳ ಪ್ರಾರ್ಥಿಸಿದರು. ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಸಿಇಒ ಯೋಗೇಂದ್ರ ನಾಯಕ್ ನಿರೂಪಿಸಿ, ವಂದಿಸಿದರು.