ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಶನಿವಾರ ನಗರದ ರೈಲ್ವೆ ನಿಲ್ದಾಣದಲ್ಲಿ ಸಮಾವೇಶಗೊಂಡ ಸದಸ್ಯರು ಹಾಗೂ ಅಯ್ಯಪ್ಪ ಸ್ವಾಮಿ ಭಕ್ತರು ಅಲ್ಲಿಂದ ಮಿನಿವಿಧಾನ ಸೌಧದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಈ ವೇಳೆ ಭಾರತೀಯ ಅಯ್ಯಪ್ಪ ಸೇವಾ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಪ್ಪ ಬಾರ್ಕಿ ಮಾತನಾಡಿ, ವಿಜಯಪುರ ಜಿಲ್ಲೆಯ ಸಿಂದಗಿ ನಿವಾಸಿ ಜಗದೀಶ ಕಲಬುರಗಿ ಎಂಬ ವ್ಯಕ್ತಿ ಅಯ್ಯಪ್ಪ ಸ್ವಾಮಿಯ ಜನ್ಮ ದಿನದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಾನೆ. ಬಹುಶಃ ಆ ವ್ಯಕ್ತಿಗೆ ತಂದೆ, ತಾಯಿ ಹಾಗೂ ಯಾರು ಹೇಳುವವರಿಲ್ಲ ಅನಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ತಂದೆ-ತಾಯಿ ನಂಬಿಕೆ, ಗುರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ನಡೆಯುತ್ತೇವೆ. ದೇವರು ಹಾಗೂ ಗುರು ಬಗ್ಗೆ ನಂಬಿಕೆ ಇಲ್ಲದವರು ಇಂತಹ ಮಾತುಗಳನ್ನಾಡುತ್ತಾರೆ. ಹೆಚ್ಚು ಪ್ರಚಾರ ಪಡೆಯುವ ಸಲುವಾಗಿ ಸನಾತನ ಧರ್ಮ ಹಾಗೂ ದೇವರ ಬಗ್ಗೆ ಈ ರೀತಿಯ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಇದು ಸರಿಯಲ್ಲ, ಯಾವುದೇ ಧರ್ಮದ ಬಗ್ಗೆ ಈ ರೀತಿಯಾಗಿ ಹಗುರವಾಗಿ ಮಾತನಾಡಬಾದರು ಎಂದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. ಆನಂದ ಗುರು ಸ್ವಾಮಿ, ಉಮೇಶ ಬಿ, ಮೋಹನ ಗುರುಸ್ವಾಮಿ, ರಾಮಚಂದ್ರ ಕರನಡೆ ಸೇರಿದಂತೆ ನೂರಾರು ಅಯ್ಯಪ್ಪ ಮಾಲಾಧಾರಿಗಳು ಪಾಲ್ಗೊಂಡಿದ್ದರು.