ನರಗುಂದ: ತಾಲೂಕಿನಲ್ಲಿ ಬುಧವಾರ ರಾತ್ರಿ ಸುರಿದ ಮಳೆಗೆ ಹಾನಿಯಾದ ಜಮೀನುಗಳನ್ನು ಸಮೀಕ್ಷೆ ಮಾಡಿ ಸರ್ಕಾರಕ್ಕೆ ವರದಿ ಕಳಿಸಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ನಾನು ಕೂಡ ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡರಿಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೆಳೆ ಹಾನಿ ಮಾಡಿಕೊಂಡ ರೈತರಿಗೆ ಪರಿಹಾರ ನೀಡಬೇಕೆಂದು ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದರು.
ನಮ್ಮ ತಾಲೂಕಿನ ವ್ಯಾಪ್ತಿಗೆ ಬರುವ ಬೆಣ್ಣೆಹಳ್ಳಕ್ಕೆ ಹೊಂದಿಕೊಂಡಿರುವ ರಸ್ತೆಗಳ ಸೇತುವೆಗೆ ಪ್ರವಾಹ ನೀರು ಬಂದು ಜಾಲಿ ಕಂಟಿಗಳು ಬಂದು ಸಿಕ್ಕಿವೆ. ಅವುಗಳನ್ನು ಪ್ರವಾಹ ನಿಂತ ಮೇಲೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ವಚ್ಛಗೊಳಿಸಬೇಕೆಂದು ತಿಳಿಸಿದರು.ಸಿದ್ಧತೆ ಮಾಡಿಕೊಳ್ಳಿ: ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಜೂ 15ರ ವರೆಗೆ ಜಿಲ್ಲೆಯಲ್ಲಿ ಭಾರೀ ಮಳೆ ಬೀಳುವ ಸೂಚನೆ ನೀಡಿದ್ದಾರೆ. ಆದ್ದರಿಂದ ತಾಲೂಕು ಆಡಳಿತ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಹೆಚ್ಚು ಮಳೆ ಬಿದ್ದು ಪ್ರವಾಹ ಸೃಷ್ಟಿಯಾದರೆ ಅದನ್ನು ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಸೂಚಿಸಿದರು.
ಈ ಸಂದರ್ಭದಲ್ಲಿ ಈಶ್ವರಗೌಡ ಪಾಟೀಲ, ಎಸ್.ಬಿ. ಕರಿಗೌಡರ, ಬಸವಣ್ಣಪ್ಪ ಸುಂಕದ, ಎಸ್.ಎಸ್. ಪಾಟೀಲ, ಬಿ.ಬಿ. ಐನಾಪುರ, ಪ್ರಕಾಶಗೌಡ ತಿರಕನಗೌಡ್ರ, ಚಂದ್ರಶೇಖರ ದಂಡಿನ, ನಾಗನಗೌಡ ತಿಮ್ಮನಗೌಡ್ರ, ಮಲ್ಲಪ್ಪ ಮೇಟಿ, ತಹಸೀಲ್ದಾರ್ ಶ್ರೀಶೈಲ ತಳವಾರ, ಕೃಷಿ ಅಧಿಕಾರಿ ಮಂಜುನಾಥ ಜನಮಟ್ಟಿ, ಜಿಪಂ ಅಧಿಕಾರಿ ಬೇವಿನಮರದ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಿ.ಎಂ. ಬಡಿಗೇರ, ತಾಪಂ ಅಧಿಕಾರಿ ಎಸ್.ಕೆ. ಇನಾಮದಾರ, ಸಿಪಿಐ ಮಂಜುನಾಥ ನಡುವಿನಮನಿ, ಅನಿಲ ಧರಿಯಣ್ಣವರ, ನಾಗರಾಜ ನೆಗಳೂರ, ವಿಠಲ ಹವಾಲ್ದಾರ, ಇತರೆ ಇಲಾಖೆ ಅಧಿಕಾರಿಗಳು ಇದ್ದರು.