- ಕಠಿಣ ಕ್ರಮ ಕೈಗೊಳ್ಳದಿದ್ದರೆ ರಾಜ್ಯವ್ಯಾಪಿ ಹೋರಾಟ: ಶ್ರೀರಾಮ ಸೇನೆ ಮಣಿ ಎಚ್ಚರಿಕೆ
ಮುಸ್ಲಿಂ ಜಿಹಾದಿ, ಕಾಮಾಂಧ, ಔಷಧಿ ಅಂಗಡಿ ಮಾಲೀಕ ಅಮ್ಜದ್ ವಿರುದ್ಧ ಉನ್ನತಮಟ್ಟದ ತನಿಖೆ ನಡೆಸಬೇಕು. ಆತನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಶ್ರೀರಾಮ ಸೇನೆ ಜಿಲ್ಲಾ ಘಟಕದಿಂದ ನಗರದಲ್ಲಿ ಗುರುವಾರ ಸಾಂಕೇತಿಕವಾಗಿ ಪ್ರತಿಭಟಿಸಲಾಯಿತು.
ನಗರದ ಜಿಲ್ಲಾ ಪೊಲೀಸ್ ಇಲಾಖೆ ಕಚೇರಿಗೆ ತೆರಳಿ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಕೆ.ಮಣಿ ಸರ್ಕಾರ ನೇತೃತ್ವದಲ್ಲಿ ಸಂಘಟನೆ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಿದರು.ಮುಖಂಡ ಕೆ.ಮಣಿ ಮಾತನಾಡಿ, ಸರ್ಕಾರ, ಚನ್ನಗಿರಿಯಲ್ಲಿ ಮೆಡಿಕಲ್ ನಡೆಸುತ್ತಿದ್ದ ಅಮ್ಜದ್, ತನ್ನ ಔಷಧಿ ಅಂಗಡಿಗೆ ಬರುತ್ತಿದ್ದ ಹಿಂದು ಹೆಣ್ಣುಮಕ್ಕಳು, ಯುವತಿಯರು, ಎಳೆ ವಯಸ್ಸಿನ ಶಾಲಾ ಮಕ್ಕಳನ್ನು ಪುಸಲಾಯಿಸಿದ್ದಾನೆ. ಹೆದರಿಸಿ, ಮತ್ತು ಬರುವ ಮಾತ್ರೆಗಳನ್ನು ನೀಡಿ, ಬಲಾತ್ಕಾರದಿಂದ ಲೈಂಗಿಕವಾಗಿ ಅತ್ಯಾಚಾರ ಮಾಡಿ, ವೀಡಿಯೋಗಳನ್ನು ಮಾಡಿಕೊಂಡಿದ್ದಾನೆ. ತನ್ನ ಕೃತ್ಯಗಳ 100ಕ್ಕೂ ಹೆಚ್ಚು ವೀಡಿಯೋಗಳನ್ನು ಮಾಡಿ, ಮುಸ್ಲಿಮರ ವಾಟ್ಸಪ್ ಗ್ರೂಪ್ಗಳಲ್ಲಿ ಹರಿಯಬಿಟ್ಟಿದ್ದಾನೆ. ಈತನ ಹಿಂದೆ ವ್ಯವಸ್ಥಿತ ಜಾಲವೇ ಇರುವ ಶಂಕೆಯಿದ್ದು, ತಕ್ಷಣವೇ ಪ್ರಕರಣವನ್ನು ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ಉನ್ನತಮಟ್ಟದ ತನಿಖೆ ನಡೆಸಬೇಕು. ಎಂದು ಒತ್ತಾಯಿಸಿದರು.
ಸಂಘಟನೆ ಮುಖಂಡರಾದ ಅನಿಲ್ ಸುರ್ವೆ, ಸಾಗರ್, ರಾಹುಲ್ ಬೊಮ್ಮ, ಶ್ರೀಧರ, ರಾಜು ದೊಡ್ಮನಿ, ಪರಶರಾಮ, ರಘು, ಶಿವರಾಜ ಪೂಜಾರಿ, ಅವಿನಾಶ, ಅಜಯ್ ಇತರರು ಇದ್ದರು.
- - -ಕೋಟ್ ಬೇರೆ ಜಿಲ್ಲೆಗಳಲ್ಲೂ ಅಮ್ಜದ್ನಂಥ ಜಿಹಾದಿ ಕಾಮಾಂಧರ ಜಾಲ ಸಕ್ರಿಯವಾಗಿರುವ ಸಾಧ್ಯತೆ ಇದೆ. ಎಲ್ಲ ಜಿಲ್ಲೆಗಳಲ್ಲೂ ವಿಶೇಷ ಮಹಿಳಾ ಪೊಲೀಸ್ ಅಧಿಕಾರಿಗಳನ್ನು ನೇಮಿಸಿ, ತನಿಖೆ ಮಾಡಬೇಕು. ಲವ್ ಜಿಹಾದ್, ವೇಶ್ಯಾವಾಟಿಕೆ, ಬೇರೆ ದೇಶಗಳಿಗೆ ಹೆಣ್ಣುಮಕ್ಕಳ ಸಾಗಣೆ, ಮಾರಾಟ ಮಾಡಿರುವ ಸಂಶಯವಿದ್ದು, ಇದರ ಬಗ್ಗೆಯೂ ತನಿಖೆ ಮಾಡಬೇಕು- ಮಣಿ, ಶ್ರೀರಾಮ ಸೇನೆ
- - - (-ಫೋಟೋ ಇದೆ.)