ಗದಗ: ಬೀಸುವ ಕಲ್ಲನ್ನು ಎತ್ತಿಹಾಕಿ ತನ್ನ ಹೆಂಡತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಬುಧವಾರ ಮಧ್ಯಾಹ್ನ ಮನೆಯಲ್ಲಿ ಈ ಭೀಕರ ಘಟನೆ ನಡೆದಿದ್ದು, ಮೊದಲು ಮನೆಯಲ್ಲಿದ್ದ ಬೀಸುವ ಕಲ್ಲಿನಿಂದ ಹೆಂಡತಿ ತಲೆಮೇಲೆ ಎತ್ತಿ ಹಾಕಿ, ನಂತರ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ರಮೇಶ ಹಾಗೂ ಸ್ವಾತಿಗೆ ಮೂವರು ಮಕ್ಕಳಿದ್ದು, ಪತಿ ರಮೇಶ ನರಗುಂದ ಸಾರಿಗೆ ಸಂಸ್ಥೆಯಲ್ಲಿ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾನೆ. ಇದೀಗ ತಾಯಿ ಕಳೆದುಕೊಂಡು ಮಕ್ಕಳು ಅನಾಥವಾಗಿವೆ.ಸ್ಥಳಕ್ಕೆ ಗದಗ ಎಸ್ಪಿ ರೋಹನ್ ಜಗದೀಶ್ ಹಾಗೂ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.ಲೋಕಾ ದಾಳಿ, ಬಲೆಗೆ ಬಿದ್ದ ಸಹಾಯಕ ಎಂಜಿನಿಯರ್
ಗದಗ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ದಾಖಲಾದ ತಕ್ಷಣ ಕಾರ್ಯಾಚರಣೆ ರೂಪಿಸಿದರು. ಗಜೇಂದ್ರಗಡದ ಬಂಡಿ ಪೆಟ್ರೋಲ್ ಬಂಕ್ ಸಮೀಪದ ಬಯಲು ಜಾಗದಲ್ಲಿ ಗುತ್ತಿಗೆದಾರರಿಂದ ಮುಂಗಡವಾಗಿ 3 ಲಕ್ಷ ಲಂಚದ ಹಣವನ್ನು ಮಹೇಶ ರಾಠೋಡ ಸ್ವೀಕರಿಸುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.ಕಾರ್ಯಾಚರಣೆಯನ್ನು ಲೋಕಾಯುಕ್ತ ಧಾರವಾಡದ ಎಸ್ಪಿ ಎಸ್.ಟಿ. ಸಿದ್ಧಲಿಂಗಪ್ಪ ಮಾರ್ಗದರ್ಶನದಲ್ಲಿ ನಡೆಸಲಾಯಿತು. ಗದಗ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ವಿಜಯ ಬಿರಾದಾರ ತಂಡದ ನೇತೃತ್ವ ವಹಿಸಿದ್ದರು. ತನಿಖಾಧಿಕಾರಿಗಳಾದ ಎಸ್.ಎಸ್. ತೇಲಿ ಮತ್ತು ಪರಮೇಶ್ವರ ಕವಟಗಿ ಹಾಗೂ ಇತರೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.