ಸಮ್ಮೇಳನಗಳು ಶಿಕ್ಷಕರ ಜ್ಞಾನ ಹೆಚ್ಚಿಸುತ್ತದೆ: ಎಚ್.ಕೆ.ಮನಮೋಹನ್

KannadaprabhaNewsNetwork |  
Published : Dec 01, 2024, 01:33 AM IST

ಸಾರಾಂಶ

ಕನ್ನಡ ನಾಡು,ನುಡಿ ಹಾಗೂ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸಾಹಿತ್ಯ ಸಮ್ಮೇಳನಗಳು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಲಿವೆ ಎಂದು ತುಮಕೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ಎಚ್.ಕೆ.ಮನಮೋಹನ್ ಅಭಿಪ್ರಾಯಪಟ್ಟಿದ್ದಾರೆ.

ಕನ್ನಡಪ್ರಭ ವಾರ್ತೆ ತುಮಕೂರು

ಕನ್ನಡ ನಾಡು,ನುಡಿ ಹಾಗೂ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸಾಹಿತ್ಯ ಸಮ್ಮೇಳನಗಳು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಲಿವೆ ಎಂದು ತುಮಕೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ಎಚ್.ಕೆ.ಮನಮೋಹನ್ ಅಭಿಪ್ರಾಯಪಟ್ಟಿದ್ದಾರೆ.

ನಗರದ ಗಾಜಿನಮನೆಯಲ್ಲಿ ಜಿಲ್ಲಾ ಕಸಾಪ ವತಿಯಿಂದ ಆಯೋಜಿಸಿದ್ದ 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಎರಡನೇ ದಿನದ ಕಾರ್ಯಕ್ರಮ ಗಳಿಗೆ ಚಾಲನೆ ನೀಡಿ ಮಾತನಾಡಿದರು.

ಇಂತಹ ಕಾರ್ಯಕ್ರಮ ಗಳಿಗೆ ಶಿಕ್ಷಕರು ಮಕ್ಕಳನ್ನು ಕರೆತರುವ ಮೂಲಕ ಅವರಲ್ಲಿಯೂ ನಾಡು, ನುಡಿ, ಸಂಸ್ಕೃತಿ,ಪರಂಪರೆಯ ಬಗ್ಗೆ ಅರಿವು ಮೂಡಿಸಲು ಅವಕಾಶ ಕಲ್ಪಿಸಬೇಕು. ಇದರಿಂದ ಮಕ್ಕಳಲ್ಲಿ ಭಾಷಾಜ್ಣಾನ ಹೆಚ್ಚುವುದರ ಜೊತೆಗೆ, ಅದನ್ನು ಮುಂದಿನ ಪೀಳಿಗೆಗೆ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಾರೆ ಎಂದರು.

ತುಮಕೂರು ತಾಲೂಕಿನ ಬಿಇಓ ಹನುಮಂತಪ್ಪ ಮಾತನಾಡಿ, ನವೆಂಬರ್ ಎಂದರೆ ಕನ್ನಡ ಕಲರವ ಮಾಸ. ಸಾಹಿತ್ಯ,ಶಿಕ್ಷಣ ಒಂದಕ್ಕೊಂದು ಪೂರಕವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಪಾಠ,ಪ್ರವಚನಗಳಿಗೆ ತೊಂದರೆಯಾಗದ ರೀತಿ,ಶೇ 50% ಶಿಕ್ಷಕರಿಗೆ ಓಒಡಿ ನೀಡಿದೆ. ಸಾಕಷ್ಟು ಮಕ್ಕಳು ಕಾರ್ಯಕ್ರಮ ಪಾಲ್ಗೊಂಡು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಆ ಮೂಲಕ ಕನ್ನಡ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ,ಬೆಳೆಸುವ ಕೆಲಸ ಮಾಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಜನರು ಇಂತಹ ಕಾರ್ಯಕ್ರಮದ ವೇದಿಕೆ ಬಳಕೆ ಮಾಡುವಂತೆ ಶಿಕ್ಷಕರು ಪ್ರೇರೆಪಿಸಬೇಕೆಂದರು.

ಸರಕಾರಿ ನೌಕರರ ಸಂಘಕ್ಕೆ ಎರಡನೇ ಬಾರಿಗೆ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ಎನ್.ನರಸಿಂಹರಾಜು ಮಾತನಾಡಿ, ಸರಕಾರಿ ನೌಕರರಿಗೂ ಸಾಹಿತ್ಯ ಪರಿಷತ್ತಿಗೂ ಅವಿನಾಭಾವ ಸಂಬಂಧವಿದೆ. 69ನೇ ಸಾಹಿತ್ಯ ಸಮ್ಮೇಳನಕ್ಕೆ ಸರಕಾರಿ ನೌಕರರು ನೀಡಿದ ಒಂದು ದಿನದ ವೇತನದಲ್ಲಿ ಈಗಿನ ಕನ್ನಡಭವನದ ಜಾಗವನ್ನು ಖರೀದಿಸಿ ಭವನ ಕಟ್ಟಲಾಗಿದೆ. ಕನ್ನಡ ಭಾಷೆ ಬೆಳೆಯಬೇಕಾದರೆ,ಮಕ್ಕಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಸರಕಾರ ಕನಿಷ್ಠ ಶಾಲಾ ಅವಧಿಯಲ್ಲಾದರು ಮೊಬೈಲ್ ಬಳಕೆಗೆ ನಿಷೇಧ ಹೇರಬೇಕೆಂದು ಒತ್ತಾಯಿಸಿದರು.

ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಡಾ.ಡಿ.ಎನ್.ಯೋಗೀಶ್ವರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಕಸಾಪ ಕೇಂದ್ರ ಸಮಿತಿಯಲ್ಲಿ ದತ್ತಿನಿಧಿಯಲ್ಲಿ ಕನ್ನಡ ನಾಡು,ನುಡಿಗೆ ದುಡಿದ ಹಿರಿಯರಿಗೆ ದತ್ತಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿರುವ ರೀತಿಯಲ್ಲಿಯೇ ನಮ್ಮಲ್ಲಿಯೂ ಕಳೆದ ವರ್ಷದಿಂದ ದತ್ತಿನಿಧಿಯಿಂದ ಹಣದಲ್ಲಿ ಐವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.ಇಂದು ಶ್ರೀ ಮತಿ ಕಲಾಶ್ರೀ, ಪ್ರೊ.ಕಮಲ ನರಸಿಂಹ, ಅಮ್ಮಸಂದ್ರ ಸುರೇಶ್, ಡಾ.ಓ.ನಾಗರಾಜು, ಪ್ರೊ.ಹೊನ್ನಗಾನಹಳ್ಳಿ ಕರಿಯಣ್ಣ ಅವರುಗಳಿಗೆ ದತ್ತಿ ಪ್ರಶಸ್ತಿ ನೀಡಲಾಗುತ್ತಿದೆ ಎಂದರು.

ವೇದಿಕೆಯಲ್ಲಿ ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಕೆಂಕೆರೆ ಮಲ್ಲಿಕಾರ್ಜುನ, ಲಕ್ಷ್ಮಿನರಸಿಂಹಪ್ಪ, ಚಾಂದು, ಚಿಕ್ಕಬೆಳ್ಳಾವಿ ಶಿವಕುಮಾರ್, ಉಮಾಮಹೇಶ್.ಕಂಟಲಗೆರೆ ಸಣ್ಣಹೊನ್ನಯ್ಯ ಸೇರಿದಂತೆ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ದ್ವೇಷ ಮಸೂದೆಯಿಂದ ಭಿನ್ನ ದನಿ ದಮನ ಆಗಲ್ಲ ''
3 ವರ್ಷ ಮೊಮ್ಮಗನಿಗೆ ಬಾರಲ್ಲಿ ಹೆಂಡ ಕುಡಿಸಿದ ಅಜ್ಜ: ಆಕ್ರೋಶ