- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಕನ್ನಡಪ್ರಭ ವಾರ್ತೆ ದಾವಣಗೆರೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಸೋಮವಾರ ಲಕ್ಷ್ಮಿ ವೃತ್ತದ ಬಳಿ ಇರುವ ಕರ್ನಾಟಕದ ಗಾಂಧಿ ಹರ್ಡೇಕರ್ ಮಂಜಪ್ಪನವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ದೃಶ್ಯ ಮಾಧ್ಯಮಗಳು ಜನರನ್ನು ಆಕರ್ಷಿತರನ್ನಾಗಿ ಮಾಡಿವೆ. ಇದರಿಂದ ದೃಶ್ಯ ಮಾಧ್ಯಮಗಳ ಜನಪ್ರಿಯತೆ ಹೆಚ್ಚಿದೆ. ಆದರೂ ಮುದ್ರಣ ಮಾಧ್ಯಮದ ಮೇಲೆ ಜನರು ಇನ್ನೂ ವಿಶ್ವಾಸ ಇಟ್ಟುಕೊಂಡಿದ್ದಾರೆ. ಇದನ್ನು ಹೀಗೇ ಉಳಿಸಿಕೊಳ್ಳುವ ಸಂಕಲ್ಪ ಮಾಡುವ ಪವಿತ್ರ ದಿನವಿದು. ಜತೆಗೆ ಪತ್ರಿಕೆಯ ಆಕರ್ಷಣೆ ಅಲಂಕಾರಕ್ಕೆ ಆದ್ಯತೆ ಕೊಡುವುದಕ್ಕಿಂತ ವರದಿಗಳ ಅಂತಃಸತ್ವದ ಕಡೆ ಹೆಚ್ಚು ಗಮನ ಕೊಡಬೇಕು. ಇದರಿಂದ ವಿಶ್ವಾಸಾರ್ಹತೆ ಮತ್ತಷ್ಟು ವೃದ್ಧಿಸುತ್ತದೆ. ರಾಜಕೀಯ ವ್ಯವಸ್ಥೆಯು ಕರ್ತವ್ಯ ವಿಮುಖವಾಗದಂತೆ ಪತ್ರಿಕೆಗಳು ಸದಾ ಎಚ್ಚರಿಸುತ್ತವೆ. ಆದ್ದರಿಂದ ಹಗಲಿರುಳು ಸಮಾಜಕ್ಕಾಗಿ ದುಡಿಯುವ ಪತ್ರಕರ್ತರಿಗೆ ಶುಭಾಶಯಗಳನ್ನು ಹೇಳುತ್ತೇನೆ ಎಂದರು.ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಮಾತನಾಡಿ, ನಗರ ಪಾಲಿಕೆಯ ಸಾರ್ವಜನಿಕ ಆದೇಶಗಳು ಹಾಗೂ ಸೂಚನೆಗಳು ನಾಗರಿಕರಿಗೆ ಸರಿಯಾಗಿ ತಲುಪುವಲ್ಲಿ ಪತ್ರಿಕೆಗಳ ಪಾತ್ರ ಮಹತ್ತರವಾಗಿದೆ ಎಂದರು.
ದಾವಣಗೆರೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಹರ್ಡೇಕರ್ ಮಂಜಪ್ಪನವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಲಾಯಿತು.
----1ಕೆಡಿವಿಜಿ32
ದಾವಣಗೆರೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಹಾಪೌರರಾದ ಬಿ.ಎಚ್.ವಿನಾಯಕ ಪೈಲ್ವಾನ್ ಹರ್ಡೇಕರ್ ಮಂಜಪ್ಪನವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.