ಕನ್ನಡಪ್ರಭ ವಾರ್ತೆ ಬೆಳಗಾವಿ
ಟ್ರಸ್ಟ್ ಅಧ್ಯಕ್ಷ ರಾಮ ಭಂಡಾರೆ ಮತ್ತು ಉಪಾಧ್ಯಕ್ಷ ಭರತ ದೇಶಪಾಂಡೆ ನೇತೃತ್ವದಲ್ಲಿ ನಿಯೋಗವು ಬುಧವಾರ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ನಕಲಿ ದಾಖಲೆ ಆಧಾರದಲ್ಲಿ ನಡೆದ ಎಲ್ಲಾ ಭೂ ನೋಂದಣಿಗಳ ಸಮಗ್ರ ತನಿಖೆ ನಡೆಸಬೇಕು. ಸಂಬಂಧಿತ ಸಬ್-ರಿಜಿಸ್ಟಾರ್ಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕು ಎನ್ನುವುದು ಸೇರಿದಂತೆ ಸಮಾಜದ ಪೀಡಿತ ಕುಟುಂಬಗಳಿಗೆ ಪೊಲೀಸ್ ರಕ್ಷಣೆ ಒದಗಿಸಿ, ಅವರ ಹಕ್ಕುಗಳನ್ನು ಕಾನೂನುಬದ್ಧವಾಗಿ ಪುನರ್ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ಭವಿಷ್ಯದಲ್ಲಿ ಇಂತಹ ಅಕ್ರಮಗಳು ನಡೆಯದಂತೆ ಭೂ ನೋಂದಣಿ ಪ್ರಕ್ರಿಯೆಯಲ್ಲಿ ಕಟ್ಟುನಿಟ್ಟಿನ ಪರಿಶೀಲನಾ ವ್ಯವಸ್ಥೆ ಜಾರಿಗೆ ತರಬೇಕು. ಬೆಳಗಾವಿ ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಪೀಳಿಗೆಯಿಂದ ಪೀಳಿಗೆಗೆ ಬಂದಿರುವ ಬ್ರಾಹ್ಮಣ ಸಮುದಾಯದ ಪಿತ್ರಾರ್ಜಿತ ಆಸ್ತಿಗಳ ಮೇಲೆ ಸಂಘಟಿತ ರೀತಿಯಲ್ಲಿ ನಕಲಿ ಹಕ್ಕುಪತ್ರ ಸೃಷ್ಟಿ, ಕೃತಕ ಸಹಿ, ಸತ್ತವರನ್ನು ಜೀವಂತವಾಗಿ ತೋರಿಸುವ ದಾಖಲೆಗಳ ಮೂಲಕ ಭೂ ವರ್ಗಾವಣೆ ನಡೆದಿರುವ ಆರೋಪಗಳು ಕೇಳಿಬಂದಿದ್ದು, ಇದು ಸಮುದಾಯದಲ್ಲಿ ಆತಂಕವನ್ನು ಸೃಷ್ಟಿಸಿದೆ ಎಂದು ಕಳವಳ ವ್ಯಕ್ತಪಡಿಸಿದರು.ಟ್ರಸ್ಟ್ ಖಜಾಂಚಿ ರಮೇಶ ಕುಲಕರ್ಣಿ, ಜಂಟಿ ಕಾರ್ಯದರ್ಶಿ ವಿಲಾಸ ಜೋಶಿ, ಆಡಳಿತ ಮಂಡಳಿ ಸದಸ್ಯೆ ಅನುಶ್ರೀ ದೇಶಪಾಂಡೆ, ಬಿ.ಆರ್.ಪಾಟೀಲ, ಜಿ.ಡಿ.ಜೋಶಿ, ಅಶೋಕ ದೇಶಪಾಂಡೆ, ಪ್ರಸಾದ ಕಾರಜೋಳ, ಡಾ.ಕುಲಕರ್ಣಿ, ಅನಿಲ ಕುಲಕರ್ಣಿ ಮೊದಲಾದವರು ಉಪಸ್ಥಿತರಿದ್ದರು.
ಕೋಟ್.....
ಮೊಹಮ್ಮದ ರೋಷನ್, ಜಿಲ್ಲಾಧಿಕಾರಿ, ಬೆಳಗಾವಿ.