ಐವರು ಅಪ್ರಾಪ್ತರ ವಶ- ವಸ್ತುಗಳ ಜಪ್ತಿ

KannadaprabhaNewsNetwork |  
Published : Oct 08, 2025, 01:00 AM IST
(ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ನಗರದ ಶಾಬನೂರು ರಸ್ತೆಯಲ್ಲಿ ತಾಲೂಕಿನ ಜರೇಕಟ್ಟೆ ಗ್ರಾಮದ ಸಿ.ಜಗದೀಶ ಅವರಿಗೆ ದ್ವಿಚಕ್ರ ವಾಹನಗಳಲ್ಲಿ ಬಂದು ಮನಸೋ ಇಚ್ಛೆ ಕೈ-ಕಾಲುಗಳಿಂದ ಹಲ್ಲೆ ಮಾಡಿ, ₹4,300 ನಗದು, ಕೊರಳಲ್ಲಿದ್ದ 25 ಗ್ರಾಂ ಚಿನ್ನದ ಸರ ಸುಲಿಗೆ ಮಾಡಿದ್ದ ಐವರು ಅಪ್ರಾಪ್ತರನ್ನು ದಾವಣಗೆರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಾವಣಗೆರೆ: ನಗರದ ಶಾಬನೂರು ರಸ್ತೆಯಲ್ಲಿ ತಾಲೂಕಿನ ಜರೇಕಟ್ಟೆ ಗ್ರಾಮದ ಸಿ.ಜಗದೀಶ ಅವರಿಗೆ ದ್ವಿಚಕ್ರ ವಾಹನಗಳಲ್ಲಿ ಬಂದು ಮನಸೋ ಇಚ್ಛೆ ಕೈ-ಕಾಲುಗಳಿಂದ ಹಲ್ಲೆ ಮಾಡಿ, ₹4,300 ನಗದು, ಕೊರಳಲ್ಲಿದ್ದ 25 ಗ್ರಾಂ ಚಿನ್ನದ ಸರ ಸುಲಿಗೆ ಮಾಡಿದ್ದ ಐವರು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸೆ.24ರಂದು ಬೆಳಗಿನ ಜಾವ 1.40ರ ವೇಳೆ ಡಾ.ಎಂ.ಸಿ.ಮೋದಿ ವೃತ್ತದ ಬಳಿ ಶಾಬನೂರು ರಸ್ತೆಯಲ್ಲಿ ಜಗದೀಶ ತಮ್ಮ ಊರಿಗೆ ಮರಳುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನಗಳಲ್ಲಿ ಬಂದ ಅಪರಿಚಿತರ ಗುಂಪು ಹಲ್ಲೆ ಮಾಡಿ, ಹಣ, ಚಿನ್ನ ಸುಲಿಗೆ ಮಾಡಿದ್ದರು. ಈ ಬಗ್ಗೆ ಬಡಾವಣೆ ಪೊಲೀಸ್ ಠಾಣೆಗೆ ಸಂತ್ರಸ್ತ ಜಗದೀಶ ದೂರು ನೀಡಿದ್ದರು.

ಎಸ್‌ಪಿ ಉಮಾ ಪ್ರಶಾಂತ, ಎಎಸ್‌ಪಿ ಪರಮೇಶ್ವರ ಹೆಗಡೆ, ನಗರ ಡಿವೈಎಸ್‌ಪಿ ಬಿ.ಶರಣ ಬಸವೇಶ್ವರ ಮಾರ್ಗದರ್ಶನದಲ್ಲಿ ತನಿಖೆಗೆ ಬಡಾವಣೆ ಠಾಣೆ ಇನ್‌ಸ್ಪೆಕ್ಟರ್ ಮಲ್ಲಮ್ಮ ಆರ್. ಚೌಬೆ ನೇತೃತ್ವದ ಅಧಿಕಾರಿ-ಸಿಬ್ಬಂದಿ ತಂಡ ರಚಿಸಲಾಗಿತ್ತು. ತಂಡವು ಆರೋಪಿಗಳಿಂದ ₹2,400 ನಗದು, ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ 2 ದ್ವಿಚಕ್ರ ವಾಹನ ಜಪ್ತಿ ಮಾಡಿದೆ. ಆರೋಪಿತ ಅಪ್ರಾಪ್ತರನ್ನು ಬಾಲ ನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿದ್ದು, ಐವರನ್ನೂ ಸರ್ಕಾರಿ ಬಾಲಕರ ವೀಕ್ಷಣಾಲಯದಲ್ಲಿರಿಸಲು ಮಂಡಳಿ ಆದೇಶಿಸಿದೆ. ಪ್ರಕರಣದ ಉಳಿದ ಆರೋಪಿಗಳು ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ಮುಂದುವರಿದಿದೆ.

ಪಿಎಸ್‌ಐ ಲತಾ ವಿ. ತಾಳೇಕರ್, ಎಎಸ್‌ಐ ತಿಪ್ಪೇಸ್ವಾಮಿ, ಸಿಬ್ಬಂದಿ ದಾಸಪ್ಪರ ಬಸವರಾಜ, ದಿದ್ದಿಗೆ ಬಸವರಾಜ, ಧೃವ, ಕೆ.ಬಿ.ಹರೀಶ ಅವರ ತಂಡಕ್ಕೆ ಜಿಲ್ಲಾ ಎಸ್‌ಪಿ ಉಮಾ ಪ್ರಶಾಂತ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

- - -

(ಸಾಂದರ್ಭಿಕ ಚಿತ್ರ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣಕ್ಕೆ ಸಿದ್ಧಗಂಗಾ ಮಠದ ಕೊಡುಗೆ ಅನನ್ಯ
ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಪಾಡಿ