ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆ, ಇನ್ನರ್ವೀಲ್ಹ್ ಕ್ಲಬ್ ಚಿತ್ರದುರ್ಗ ಸಹಯೋಗದೊಂದಿಗೆ ರೋಟರಿ ಬಾಲಭವನದಲ್ಲಿ ಭಾನುವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ, ಚುಟುಕು ಕವಿಗೋಷ್ಠಿ, ಡಾ.ಚಾಂದಿನಿ ಖಲೀದ್ರವರ ಹುಡುಕಾಟ ಶುರುವಾಗಿದೆ ಕವನ ಸಂಕಲನ ಬಿಡುಗಡೆಗೊಳಿಸಿ ಮಾತನಾಡಿದ ಅವರು ಸರ್ವ ಜನಾಂಗದ ಶಾಂತಿಯ ತೋಟ ಭಾರತವನ್ನು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನರಕವೆಂದು ಹೀಯಾಳಿಸಿರುವುದು ತಪ್ಪು. ಪ್ರತಿಯೊಬ್ಬ ಪ್ರಜೆಯೂ ಖಂಡಿಸಬೇಕೆಂದು ಹೇಳಿದರು.
ಗಾಂಧಿಜಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರೆ ಸಿಕ್ಕ ಸ್ವಾತಂತ್ರ್ಯವನ್ನು ಹೇಗೆ ರಕ್ಷಿಸಿಕೊಂಡು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಬೇಕೆನ್ನುವುದಕ್ಕಾಗಿ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನವನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಅನೇಕ ಹಿರಿಯರ ತ್ಯಾಗ ಬಲಿದಾನಗಳಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ನೂರಾರು ಜಾತಿ, ಧರ್ಮ, ಭಾಷೆಗಳಿರುವ ಭಾರತದಲ್ಲಿ ಎಲ್ಲರೂ ಸೌಹಾರ್ಧ, ಸಹಭಾಳ್ವೆಯಿಂದ ಬದುಕುತ್ತಿರುವಾಗ ಅಮೇರಿಕಾದ ಟ್ರಂಪ್ ಭಾರತವನ್ನು ನರಕಕ್ಕೆ ಹೋಲಿಸಿ ಡ್ರಗ್ಸ್ ದಂಧೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಹೀಯಾಳಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಇರಾನ್ ರಾಯಭಾರಿ ಭಾರತ ಸ್ವರ್ಗವಿದ್ದಂತೆ ಎಂದು ಟ್ರಂಪ್ಗೆ ತಿರುಗೇಟು ನೀಡಿದ್ದಾರೆಂದರು.ಚಾಂದಿನಿ ಖಲೀದ್ ವೃತ್ತಿಯಲ್ಲಿ ಹಿಂದಿ ಶಿಕ್ಷಕರು. ಆದರೆ ಕನ್ನಡದ ಮೇಲೆ ಅವರಿಗೆ ಅಪಾರ ಅಭಿಮಾನವಿದೆ. ಹಾಗಾಗಿ ಕವನ ಸಂಕಲನಗಳನ್ನು ಹೊರತರಲು ಸಾಧ್ಯವಾಗುತ್ತಿದೆ. ಸಮಾಜ ಸುಧಾರಣೆಯಲ್ಲಿ ಪ್ರತಿ ಹೆಜ್ಜೆ ಹೆಜ್ಜೆಗೂ ಹುಡುಕಾಟ ನಡೆಸಬೇಕಿದೆ. ಬರವಣಿಗೆಯ ಮೂಲಕ ಏನನ್ನಾದರೂ ಸಾಧಿಸಬೇಕೆಂಬ ಛಲ ಅವರಲ್ಲಿದೆ. ಓದುಗರ ಮನಸ್ಸನ್ನು ಸೆಳೆಯುವ ಶಕ್ತಿ ಅವರ ಬರವಣಿಗೆಯಲ್ಲಿದೆ ಎಂದು ಬಿ.ಕೆ.ರಹಮತ್ವುಲ್ಲಾ ಪ್ರಶಂಶಿಸಿದರು.
ಚಾಂದಿನಿ ಖಲೀದ್ರವರು ನಮ್ಮ ವೇದಿಕೆಗೆ ಸೇರ್ಪಡೆಗೊಂಡಾಗಿನಿಂದಲೂ ಸಾಕಷ್ಟು ಶ್ರಮಿಸುತ್ತ ಬರುತ್ತಿದ್ದಾರಲ್ಲದೆ ಬರವಣಿಗೆ ಬಗ್ಗೆ ಆಸಕ್ತಿ ಮೂಡಿಸಿಕೊಂಡ ಪರಿಣಾಮ ಈಗ ಮೂರನೆ ಪುಸ್ತಕ ಹೊರಬಂದಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಹೆಚ್ಚು ಕವನ ಸಂಕಲನಗಳನ್ನು ಹೊರತರಲಿ ಎಂದು ಹಾರೈಸಿದರು.
ಸಮಾನತೆಯ ಹಾದಿಯಲ್ಲಿ ಅಂಬೇಡ್ಕರ್ ಚಿಂತನೆಗಳು ಎಂಬ ವಿಷಯ ಕುರಿತು ಪ್ರಾಂಶುಪಾಲರಾದ ಡಾ. ಪಿ.ಆರಡಿ ಮಲ್ಲಯ್ಯ ಕಟ್ಟೇರ ಉಪನ್ಯಾಸ ನೀಡಿದರು. ಗಂಗಾಧರಪ್ಪ ಪ್ರಾರ್ಥಿಸಿದರು. ಕೆ.ಎನ್.ದೇವರಾಜ್ ಸ್ವಾಗತಿಸಿದರು. ಮುರಳಿಧರ್ ವಂದಿಸಿದರು. ವಿನಾಯಕ ಆರ್.ಜಿ.ನಿರೂಪಿಸಿದರು.