ಕನ್ನಡಪ್ರಭ ವಾರ್ತೆ ವಿಜಯಪುರ
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಜವಾಗಿಯೂ ರೈತರಿಗೆ ಅನ್ಯಾಯ ಮಾಡಿದ್ದೇ ಬಿಜೆಪಿ. ತಮ್ಮ ಅವಧಿಯಲ್ಲಿ ರೈತರಿಗೆ ನೋಟಿಸ್ ಕೊಟ್ಟಿರುವ ಇವರು, ಈಗ ನಿಯೋಗದ ಮೂಲಕ ದೊಡ್ಡದಾಗಿ ಬಿಂಬಿಸುತ್ತಿದ್ದಾರೆ. ವಕ್ಫ್ ವಿಚಾರದಲ್ಲಿ ಹೋರಾಟ ಮಾಡುವ ನೈತಿಕತೆಯೇ ಇವರಿಗೆ ಇಲ್ಲ ಎಂದು ಟೀಕಿಸಿದರು.
ಬಿಜೆಪಿ ಆಡಳಿತದ ಅವಧಿಯಲ್ಲಿ ಎಷ್ಟು ರೈತರಿಗೆ, ಸಾರ್ವಜನಿಕರಿಗೆ ನೋಟಿಸ್ ನೀಡಿದ್ದಾರೆ. ವಕ್ಫ್ ಕಾಯ್ದೆಗೆ ಸಂಬಂಧಿಸಿದಂತೆ ಎಷ್ಟು ಗೆಜೆಟ್ ನೋಟಿಫಿಕೇಷನ್ ಹೊರಡಿಸಿದ್ದಾರೆ? ಎಷ್ಟು ರೈತರು ಹಾಗೂ ಸಾರ್ವಜನಿಕರಿಗೆ ವಕ್ಫ್ ಆಸ್ತಿ ಎಂದು ಮರಳಿ ಪಡೆದಿದ್ದಾರೆ? ವಕ್ಪ್ ಆಸ್ತಿ ಸಂರಕ್ಷಿಸಲು ಖಾತೆಯ ಮಂತ್ರಿಗಳು ಎಷ್ಟು ಸಭೆ ನಡೆಸಿದ್ದಾರೆ? ಇದೆಲ್ಲದಕ್ಕೂ ಅವಹಾಲು ಸ್ವೀಕಾರ ಮಾಡಲು ಬಂದಿರುವ ತಂಡದವರು ಉತ್ತರಿಸಬೇಕು ಎಂದು ಆಗ್ರಹಿಸಿದ ಅವರು, ಬಿಜೆಪಿ ಆಡಳಿತದಲ್ಲಿ ವಕ್ಫ್ ಕಾಯ್ದೆಯ ಕುರಿತು ಏನೇನು ಕ್ರಮ ಕೈಗೊಂಡಿದ್ದಾರೆ ಎಂದು ಉತ್ತರ ಕೊಡದಿದ್ದರೆ ಇವರೆಲ್ಲ ನಾಟಕ ಮಾಡುತ್ತಿದ್ದಾರೆ ಎಂದು ರೈತರು ಹಾಗೂ ಸಾರ್ವಜನಿಕರು ತಿಳಿದುಕೊಳ್ಳಬೇಕು ಎಂದು ಹೇಳಿದರು.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಮಾತನಾಡಿ, ಬಿಜೆಪಿ ನಿಯೋಗ ಬಂದು ರೈತರಿಂದ ಮನವಿ ಸ್ವೀಕರಿಸುವ ಕೆಲಸ ಮಾಡುತ್ತಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಅನೇಕ ಹಿಂದೂಗಳಿಗೆ ನೋಟಿಸ್ ಕೊಟ್ಟಿದ್ದಾರೆ. 2022 ಸೆಪ್ಟೆಂಬರ್ 14ರಿಂದ 2022 ನವೆಂಬರ್ 18 ರವರೆಗಿನ ಅವಧಿಯಲ್ಲಿ ವಿಜಯಪುರ ಜಿಲ್ಲೆಯಲ್ಲೇ ಬಿಜೆಪಿಯವರು 10ಕ್ಕೂ ಅಧಿಕ ಹಿಂದೂ ರೈತರಿಗೆ ನೋಟಿಸ್ ಕೊಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೋಮು ಸೌಹಾರ್ದತೆ ಕದಡುವ ಕೆಲಸ ಮಾಡುತ್ತಿದ್ದಾರೆ. ಅಹವಾಲು ಆಲಿಸಲು ಬಂದವರು ಬಿಜೆಪಿ ರಾಜ್ಯ ಸರ್ಕಾರದಲ್ಲಿ ಯಾವ ಯಾವ ಹುದ್ದೆಯಲ್ಲಿದ್ದೀರಿ ಎಂಬುದು ತಿಳಿಸಿ. ಅತ್ಯುತ್ತಮ ಸರ್ಕಾರ ನಡೆದಿದ್ದನ್ನು ಟೀಕಿಸಲು ವಿಷಯಗಳಿಲ್ಲದ್ದರಿಂದ ಈ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯ ಕುತಂತ್ರ ಎಂದಿಗೂ ಸಫಲವಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
---------------
ಜಿಲ್ಲೆಗೆ ಬಂದಿರುವ ಬಿಜೆಪಿ ನಿಯೋಗಕ್ಕೆ, ಶಾಸಕ ಯತ್ನಾಳ, ಚಕ್ರವರ್ತಿ ಸೂಲಿಬೆಲೆ, ಸಿ.ಟಿ.ರವಿ ಇವರಿಗೆಲ್ಲ ವಕ್ಪ್ ಎಂದರೇನು ಎಂಬುದೇ ಗೊತ್ತಿಲ್ಲ. ಕಾನೂನಿನ ಅರಿವು ಇಲ್ಲ. ಹಿಂದೂ- ಮುಸ್ಲಿಂ, ಪಾಕಿಸ್ತಾನ್ ಬಿಟ್ಟರೆ ಅವರಿಗೆ ಬೇರೆ ವಿಷಯಗಳು ಗೊತ್ತಿಲ್ಲ. ಬಂದು ರೈತರಿಂದ ಮನವಿ ಸ್ವೀಕರಿಸುವ ಕೆಲಸ ಮಾಡುತ್ತಿದ್ದಾರೆ.
---------------
ಬಿಜೆಪಿ ಆಡಳಿತದಲ್ಲಿದ್ದಾಗ ವಕ್ಫ್ನಿಂದ ಸುಮಾರು 10ಕ್ಕೂ ಅಧಿಕ ಹಿಂದೂ ರೈತರಿಗೆ ನೋಟಿಸ್ ನೀಡಲಾಗಿತ್ತು. ಆ ದಾಖಲೆಗಳನ್ನು ಕಾಂಗ್ರೆಸ್ ಮುಖಂಡರು ಬಿಡುಗಡೆ ಮಾಡಿದರು. ಜೊತೆಗೆ ನೋಟಿಸ್ ಪಡೆದ ರೈತರಾದ ಆನಂದ ಹಡಪದ, ಅಶೋಕ ಬಣ್ಣದ, ಬಡೈಲ್ ಲಾಹೋರಿ, ಗೋವಿಂದ ಲಿಂಗಸಾ, ಗಿರಿಮಲ್ಲಪ್ಪ ಚನ್ನಾಳ, ಸಂಜಯಕುಮಾರ ಜೈನ್, ಮಹಾವೀರ ಶಂಕರಲಾಲ್, ರವಿ ಮಾದರ, ಬಸಪ್ಪ ಬಣಾರಿ, ಮಹಾಲಿಂಗಯ್ಯ ಹಿರೇಮಠ ಈ ರೈತರಿಗೆ ನೀಡಿದ ನೋಟಿಸ್ ಪ್ರತಿಗಳನ್ನು ನೀಡಿದರು.